ಆ್ಯಪ್ನಗರ

ಮಹಾ ಮಳೆ: ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್‌, ದೋಣಿ ಸಜ್ಜು

ಮಳೆರಾಯನ ಆರ್ಭಟಕ್ಕೆ ಸಿಲುಕಿರುವ ಮುಂಬಯಿ ಮಹಾನಗರ ಅಕ್ಷರಶಃ ತೊಪ್ಪೆಯಾಗಿದ್ದಲ್ಲದೆ. ಜನ ಜೀವನ ಅಸ್ತವ್ಯಸ್ತವಾಗಿದೆ.

TNN 29 Aug 2017, 10:16 pm
ಮುಂಬಯಿ: ಕಳೆದ 12 ವರ್ಷಗಳಲ್ಲಿಯೇ ಸುರಿಯದಿರುವಷ್ಟು ದೊಡ್ಡ ಮಳೆಗೆ ವಾಣಿಜ್ಯ ನಗರಿ ಮುಂಬಯಿ ಅಕ್ಷರಶಃ ತೊಪ್ಪೆಯಾಗಿದೆ. ಮಹಾ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 48 ಗಂಟೆಗಳವರೆಗೂ ಭಾರಿ ಮಳೆ ಸುರಿಯಲಿದೆ.
Vijaya Karnataka Web heavy rain wreaks havoc in mumbai
ಮಹಾ ಮಳೆ: ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್‌, ದೋಣಿ ಸಜ್ಜು


ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗೆ ಸೇನಾ ಹೆಲಿಕಾಪ್ಟರ್‌ಗಳು ಹಾಗೂ ವಿಶೇಷ ದೋಣಿಗಳು ಸಜ್ಜಾಗಿವೆ. ಎಂಥ ಸಂದರ್ಭ ಬೇಕಾದರೂ ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.

ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಂದ ಸಂಪೂರ್ಣ ವಿವರ ಪಡೆದುಕೊಂಡಿದ್ದಾರೆ. ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ.

ಅಗತ್ಯವಿರುವ ಎಲ್ಲ ನೆರವನ್ನು ನೀಡಲಾಗುವುದು ಎಂದು ಮೋದಿ ಭರವಸೆ ನೀಡಿದ್ದಾರೆ.

ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರನ್ನು ಕೂಡಲೇ ಮನೆಗಳಿಗೆ ತೆರಳುವಂತೆ ಎಲ್ಲ ಸಂಸ್ಥೆಗಳು, ಕಂಪನಿಗಳು, ಇಲಾಖೆಗಳಿಗೆ ಸೂಚನೆ ನೀಡಿರುವ ಸ್ಥಳೀಯ ಆಡಳಿತಾಧಿಕಾರಿಗಳು ಸೂಕ್ತ ಸುರಕ್ಷತಾ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿದ್ದಾರೆ. ನಗರದಲ್ಲಿ ಜನಜೀವನ ಹಾಗೂ ಸಾರಿಗೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮುಂಬಯಿ ನಗರದಲ್ಲಿ ಎಲ್ಲಿ ನೋಡಿದರೂ ನೀರೋ ನೀರು ಎಂಬಂತಾಗಿದೆ. ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಯಲ್ಲಿ ಭಾಗಶಃ ಮುಳುಗಿ ನಿಂತ ವಾಹನಗಳಿಂದ ಅಲ್ಲಲ್ಲಿ ಟ್ರಾಫಿಕ್ ಜಾಮ್‌ ಕಂಡುಬರುತ್ತಿದೆ.

ಕಳೆದ 12 ಗಂಟೆಯಿಂದ ಸುರಿಯುತ್ತಿರುವ ಮಳೆಯಿಂದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಜನರು ನಿತ್ಯ ಬಳಕೆಯ ವಸ್ತುಗಳಿಗಾಗಿ ಪರದಾಡುವಂತಾಗಿದೆ. ರಸ್ತೆಯಲ್ಲ ನದಿಯಂತೆ ಕಾಣುತ್ತಿದ್ದು, ವಾಹನ ಚಾಲಕರು ಪರದಾಡುವಂತಾಗಿದೆ.

ಭಾರಿ ಮಳೆಯಿಂದ ರಸ್ತೆಯಲ್ಲಿ ಜಲಾವೃತಗೊಂಡಿದ್ದು, ವಾಹನಗಳು ಭಾಗಶಃ ನೀರಿನಲ್ಲಿ ಮುಳುಗಿವೆ.

ಪ್ರವಾಹ ಸ್ಥಿತಿಯಲ್ಲಿ ದೈನಂದಿನ ವಸ್ತುಗಳಿಗಾಗಿ ಪರದಾಟ ನಡೆಯುತ್ತಿದ್ದು, ಕೈಯಲ್ಲಿ ಛತ್ರಿ ಹಿಡಿದು ರಸ್ತೆ ದಾಟುತ್ತಿರುವ ವೃದ್ದೆ

ಅಗಾಧ ಪ್ರಮಾಣದ ನೀರು ನಿಂತಿರುವುದರಿಂದ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಪ್ರವಾಹ ಸ್ಥಿತಿಯಲ್ಲಿಯೂ ಪ್ರಯಾಣಿಕರು ರೈಲಿಗಾಗಿ ಕಾಯುತ್ತಿರುವ ದೃಶ್ಯ

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ