ಆ್ಯಪ್ನಗರ

ತಮಿಳುನಾಡಿನ ಕರಾವಳಿ ತೀರಕ್ಕೆ ಅಪ್ಪಳಿಸಿದ 'ಓಖಿ ಚಂಡಮಾರುತ'; 4 ಬಲಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ 'ಓಖಿ ಚಂಡಮಾರುತ'ದಿಂದ ಚೆನ್ನೈ ಸಂಪೂರ್ಣವಾಗಿ ತತ್ತರಿಸಿದ್ದು, ಕನ್ಯಾಕುಮಾರಿ ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

TNN 30 Nov 2017, 5:35 pm
ಕನ್ಯಾಕುಮಾರಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ 'ಓಖಿ ಚಂಡಮಾರುತ'ದಿಂದ ಚೆನ್ನೈ ಸಂಪೂರ್ಣವಾಗಿ ತತ್ತರಿಸಿದ್ದು, ಕನ್ಯಾಕುಮಾರಿ ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
Vijaya Karnataka Web heavy winds uproot trees claim four lives in kanyakumari district of tamil nadu
ತಮಿಳುನಾಡಿನ ಕರಾವಳಿ ತೀರಕ್ಕೆ ಅಪ್ಪಳಿಸಿದ 'ಓಖಿ ಚಂಡಮಾರುತ'; 4 ಬಲಿ


ಪ್ರಮುಖವಾಗಿ ತಮಿಳುನಾಡಿನ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದ್ದು, ಗಂಟೆಗೆ ಸುಮಾರು 150 ಕಿ.ಮೀ ವೇಗದಲ್ಲಿ ಓಖಿ ಚಂಡಮಾರುತ ಲಕ್ಷದ್ವೀಪದತ್ತ ಧಾವಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕನ್ಯಾಕುಮಾರಿ ಎಸ್‌ಪಿ ನೀಡಿದ ಮಾಹಿತಿಗಳ ಪ್ರಕಾರ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಭಾರೀ ಗಾಳಿಯಿಂದ ಮರಗಳು ಕುಸಿದು ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಮೃತ ವ್ಯಕ್ತಿಗಳನ್ನು ಕಾರ್ತಿಗೈವದಲ್ಲಿ ನಿವಾಸಿ ಎಮ್‌ ರವೀಂದ್ರನ್‌, ಕಮರೇಸನ್‌, ಮನಲಿವಿಲೈಲಿನ ಸರಸ್ವತಿ, ಪರಕ್ಕುಂಡ್ರುವಿನ ಅಲೆಕ್ಸಾಂಡರ್‌ ಎಂದು ಗುರುತಿಸಲಾಗಿದೆ.

ತಮಿಳುನಾಡಿನ ಟುಟಿಕಾರನ್, ತಿರುನೆಲ್ವೇಲಿ, ಕನ್ಯಾಕುಮಾರಿ, ವಿರುದುನಗರ್ ಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆ ಪೀಡಿತ ಈ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ