ಆ್ಯಪ್ನಗರ

ಜಮ್ಮು ಕಾಶ್ಮೀರದಲ್ಲಿ ಹೈ ಅಲರ್ಟ್‌

ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ಹಾಗೂ 35 ಎ ರದ್ದುಗೊಳಿಸಲಾಗುತ್ತದೆ ಎಂಬ ವದಂತಿಗಳು ಹಬ್ಬಿವೆ. ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ಸರ್ಜಿಕಲ್‌ ಸ್ಟ್ರೈಕ್‌ ನಡೆಸಿದೆ ಎಂಬುದು ಭಾರಿ ಚರ್ಚೆಯಾಗಿದೆ.

Vijaya Karnataka Web 3 Aug 2019, 6:38 pm
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಹೆಚ್ಚುವರಿ ಸೇನೆ ನಿಯೋಜನೆಗೊಂಡ ಬೆನ್ನಲ್ಲೇ ಹೈ ಅಲರ್ಟ್‌ ಘೋಷಣೆಯಾಗಿದೆ. ಇದರಿಂದ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಪ್ರಕ್ಷುಬ್ಧ ವಾತಾವರಣ ಮೂಡಿದೆ.
Vijaya Karnataka Web ಸೇನಾ ಪಡೆ
ಸೇನಾ ಪಡೆ


ಜಮ್ಮು ಕಾಶ್ಮೀರದಲ್ಲಿ ಈಗಿನ ವಾತಾವರಣ ಕುರಿತು ವದಂತಿಗಳೇ ಹೆಚ್ಚಾಗಿದೆ.

ಜಮ್ಮು ಕಾಶ್ಮೀರದಲ್ಲಿ ಕಳೆದ ಒಂದು ವಾರದಿಂದ ಹೆಚ್ಚುವರಿ ಸೇನೆ ಜಮಾವಣೆಯಾಗುತ್ತಿರುವುದರಿಂದ ಸಾಖಷ್ಟು ಊಹಾಪೋಹಗಳು ಕೇಳಿಬರುತ್ತಿವೆ.

ಒಂದು ಯುದ್ಧ ಭೀತಿ ಆತಂಕವನ್ನು ನಿರ್ಮಿಸಲಾಗಿದೆ. ಇದಕ್ಕೆ ಪೂರಕ ಎಂಬಂತೆ ರಾಜಕೀಯ ಪಕ್ಷಗಳು ತಮಗೆ ಬೇಕಾದ ರೀತಿಯಲ್ಲಿ ಹೇಳಿಕೆಗಳನ್ನು ನೀಡಿವೆ, ರಾಜಕೀಯ ಮುಖಂಡರು ಟ್ವೀಟರ್‌ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇದು ಆತಂಕವನ್ನು ಇನ್ನಷ್ಟು ಹೆಚ್ಚು ಮಾಡಿದೆ. ಗುಪ್ತಚರ ಮಾಹಿತಿಯ ಮೇರೆಗೆ ಅಮರನಾಥ ಯಾತ್ರೆ ಹಾಗೂ ಮಚೈಲ್‌ ಮಾತಾ ಯಾತ್ರೆಯನ್ನು ಕೂಡ ರದ್ದುಗೊಳಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿ ಸೇನಾ ಗಸ್ತು ಹೆಚ್ಚಾಗಿದೆ. ಪ್ರಮುಖ ಸ್ಥಳಗಳು ಹಾಗೂ ಜನನಿಬಿಡ ಸ್ಥಳಗಳಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ.

ಅಲ್ಲದೇ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಸೇನೆ ದಾಳಿ ನಡೆಸಿದೆ ಎಂಬ ವದಂತಿ ಸಾಕಷ್ಟು ಊಹಾಪೋಹಗಳನ್ನು ಸೃಷ್ಟಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ