ಆ್ಯಪ್ನಗರ

ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್‌ ನೋಟಿಸ್‌

ಪಿಎನ್‌ಬಿ ಹಗರಣದಲ್ಲಿನ ಅಕ್ರಮ ಹಣ ಹೂಡಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೆಹುಲ್‌ ಚೋಕ್ಸಿ ಅವರ ಸಂಸ್ಥೆ ಗೀತಾಂಜಲಿ ಜೆಮ್ಸ್‌ ಸಲ್ಲಿಸಿರುವ ಅರ್ಜಿಯ ವಿಚಾರದಲ್ಲಿ ದಿಲ್ಲಿ ಹೈಕೋರ್ಟ್‌ ಶುಕ್ರವಾರ ಜಾರಿ ನಿರ್ದೇಶನಾಲಯ(ಇ.ಡಿ.)ದಿಂದ ಪ್ರತಿಕ್ರಿಯೆ ಬಯಸಿ ನೋಟಿಸ್‌ ಜಾರಿ ಮಾಡಿದೆ.

Vijaya Karnataka Web 7 Apr 2018, 9:59 am
ಹೊಸದಿಲ್ಲಿ: ಬಹುಕೋಟಿ ರೂಪಾಯಿ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ) ಹಗರಣದಲ್ಲಿನ ಅಕ್ರಮ ಹಣ ಹೂಡಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೆಹುಲ್‌ ಚೋಕ್ಸಿ ಅವರ ಸಂಸ್ಥೆ ಗೀತಾಂಜಲಿ ಜೆಮ್ಸ್‌ ಸಲ್ಲಿಸಿರುವ ಅರ್ಜಿಯ ವಿಚಾರದಲ್ಲಿ ದಿಲ್ಲಿ ಹೈಕೋರ್ಟ್‌ ಶುಕ್ರವಾರ ಜಾರಿ ನಿರ್ದೇಶನಾಲಯ(ಇ.ಡಿ.)ದಿಂದ ಪ್ರತಿಕ್ರಿಯೆ ಬಯಸಿ ನೋಟಿಸ್‌ ಜಾರಿ ಮಾಡಿದೆ.
Vijaya Karnataka Web court


ತನಿಖಾ ಸಂಸ್ಥೆ(ಇ.ಡಿ)ಯು ತನ್ನ ಕಚೇರಿಯಿಂದ ದಾಖಲೆಗಳು ಮತ್ತಿತರ ವಸ್ತುಗಳನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ಆರೋಪಿಸಿ ಗೀತಾಂಜಲಿ ಜೆಮ್ಸ್‌ ಸಂಸ್ಥೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾ.ಎಸ್‌ ಮುರಳೀಧರ್‌ ಮತ್ತು ನ್ಯಾ.ಐ.ಎಸ್‌ ಮೆಹ್ತಾ ಅವರನ್ನೊಳಗೊಂಡ ಹೈಕೋರ್ಟ್‌ ದ್ವಿಸದಸ್ಯ ಪೀಠವು ಆರೋಪಕ್ಕೆ ಸಂಬಂಸಿದಂತೆ ಪ್ರತಿಕ್ರಿಯೆ ನೀಡುವಂತೆ ಇ.ಡಿ.ಗೆ ನೋಟಿಸ್‌ ಜಾರಿ ಮಾಡಿದೆ. ಇ.ಡಿ. ಪರ ವಕೀಲ ಅಮಿತ್‌ ಮಹಾಜನ್‌ ಹಾಗೂ ಗೀತಾಂಜಲಿ ಜೆಮ್ಸ್‌ ಪರ ವಕೀಲ ಸಂಜಯ್‌ ಅಬಾಟ್‌ ವಿಚಾರಣೆಗೆ ಹಾಜರಾಗಿದ್ದರು.

ಇದಕ್ಕೂ ಮೊದಲು, ಪಿಎನ್‌ಬಿ ಹಗರಣದ ಪ್ರಮುಖ ಸೂತ್ರಧಾರ ಕೋಟ್ಯಧೀಶ ನೀರವ್‌ ಮೋದಿಯವರ ಸಂಸ್ಥೆ ಫೈರ್‌ಸ್ಟಾರ್‌ ಡೈಮಂಡ್‌ ಸಂಸ್ಥೆಯೂ ತನಿಖಾ ಸಂಸ್ಥೆ ವಿರುದ್ಧ ಇದೇ ರೀತಿ ಆರೋಪಿಸಿ ಅರ್ಜಿ ಸಲ್ಲಿಸಿದೆ. ಹೀಗಾಗಿ ಒಂದೇ ರೀತಿಯ ಈ ಎರಡು ಅರ್ಜಿಗಳನ್ನು ಏಪ್ರಿಲ್‌ 11ರಂದು ಒಟ್ಟಿಗೆ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ