ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವಾರವಷ್ಟೇ ಬಾಕಿ ಇರುವಾಗ, ಆಡಳಿತಾರೂಢ ಬಿಜೆಪಿಯು, ಮರಳಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಆಶ್ವಾಸನೆ ನೀಡಿದೆ. ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಗುಜರಾತ್ನಲ್ಲಿ ಕೂಡ ಯುಸಿಸಿ ಜಾರಿಯ ಬಗ್ಗೆ ಬಿಜೆಪಿ ಭರವಸೆ ನೀಡಿತ್ತು. ಹಿಂದೂ ಮತಗಳನ್ನು ಓಲೈಸಲು ಬಿಜೆಪಿ ಮಾಡುತ್ತಿರುವ ಗಿಮಿಕ್ ಇದು ಎಂದು ವಿರೋಧ ಪಕ್ಷಗಳು ಟೀಕಿಸಿವೆ.
ಯಾವುದೇ ಅಕ್ರಮಗಳನ್ನು ಪರಿಶೀಲಿಸಲು ವಕ್ಫ್ ಆಸ್ತಿಗಳ ಸಮೀಕ್ಷೆಗಳನ್ನು ನಡೆಸುವುದಾಗಿಯೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಹೇಳಿದೆ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಸೆಪ್ಟೆಂಬರ್ನಲ್ಲಿ ಈ ಸಮೀಕ್ಷೆ ನಿರ್ಧಾರ ಜಾರಿಗೆ ತರಲಾಗಿತ್ತು.
ಐದು ವರ್ಷಕ್ಕೆ ಎಂಟು ಲಕ್ಷ ಉದ್ಯೋಗಗಳನ್ನು ಒದಗಿಸುವುದು, ರಾಜ್ಯದ ಪ್ರಮುಖ ಬೆಳೆಯಾದ ಸೇಬು ಹಣ್ಣಿನ ಪ್ಯಾಕೇಜಿಂಗ್ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಯನ್ನು ಶೇ 18ರಿಂದ ಶೇ 12ಕ್ಕೆ ಇಳಿಸುವುದು ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವುದು ಬಿಜೆಪಿಯ ಪ್ರಣಾಳಿಕೆಯಲ್ಲಿರುವ ಇತರೆ ಭರವಸೆಗಳಾಗಿವೆ.
ಹಿಮಾಚಲ ಪ್ರದೇಶದವರೇ ಆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದರು. 6- 12ನೇ ತರಗತಿವರೆಗಿನ ಹೆಣ್ಣುಮಕ್ಕಳಿಗೆ ಉಚಿತ ಬೈಸಿಕಲ್, ಕಾಳೇಜು ವಿದ್ಯಾರ್ಥಿನಿಯರಿಗೆ ಸ್ಕೂಟರ್ ನೀಡುವುದು ಮತ್ತು ರಾಜ್ಯದಲ್ಲಿ ಐದು ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಯ ಆಶ್ವಾಸನೆಗಳನ್ನು ಅದು ನೀಡಿದೆ.
ರಾಜ್ಯದಲ್ಲಿ ಏಕರೂಪದ ನಾಗರಿಕ ಸಂಹಿತೆ ಜಾರಿಗೆ ತರಲು ಸಮಿತಿಯೊಂದನ್ನು ರಚನೆ ಮಾಡುವುದಾಗಿ ನಡ್ಡಾ ತಿಳಿಸಿದ್ದಾರೆ. ಇದೇ ರೀತಿಯ ಭರವಸೆಯನ್ನು ಗುಜರಾತ್ನಲ್ಲಿ ಕೂಡ ಬಿಜೆಪಿ ನೀಡಿದೆ. ಶನಿವಾರ ಬಿಡುಗಡೆಯಾದ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ದೂರದೃಷ್ಟ ಮತ್ತು ತೂಕವಿಲ್ಲ ಎಂದು ನಡ್ಡಾ ಟೀಕಿಸಿದ್ದಾರೆ.
ನವೆಂಬರ್ 12ರಂದು ಮತದಾನ
ಹಿಮಾಚಲ ಪ್ರದೇಶದ 68 ಸದಸ್ಯರ ವಿಧಾನಸಭೆಗೆ ನವೆಂಬರ್ 12ರಂದು ಮತದಾನ ನಡೆಯಲಿದೆ. ಅದರ ಫಲಿತಾಂಶಗಳನ್ನು ಡಿ. 8ರಂದು ಪ್ರಕಟಿಸಲಾಗುತ್ತದೆ. ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಗುಜರಾತ್ ಚುನಾವಣೆ ನಡೆಯಲಿದ್ದು, ಅದರ ಮತ ಎಣಿಕೆ ಕೂಡ ಡಿ. 8ರಂದು ನಡೆಯಲಿದೆ.
ಹಿಮಾಚಲ ಪ್ರದೇಶದಲ್ಲಿ ಪ್ರತಿ ಚುನಾವಣೆಯಲ್ಲಿಯೂ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಸರ್ಕಾರಗಳು ಬದಲಾಗುವ ಸಂಪ್ರದಾಯವಿದೆ. ಹೀಗಾಗಿ ಈ ಬಾರಿ ಅಧಿಕಾರ ತನಗೆ ಒಲಿಯಲಿದೆ ಎಂದು ಕಾಂಗ್ರೆಸ್ ವಿಶ್ವಾಸ ಹೊಂದಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಈ ಬಾರಿ ರಾಜ್ಯದಲ್ಲಿ ತನ್ನ ಅಸ್ತಿತ್ವ ಪ್ರದರ್ಶನಕ್ಕೆ ಪ್ರಯತ್ನಿಸುತ್ತಿದ್ದು, ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಯಾವುದೇ ಅಕ್ರಮಗಳನ್ನು ಪರಿಶೀಲಿಸಲು ವಕ್ಫ್ ಆಸ್ತಿಗಳ ಸಮೀಕ್ಷೆಗಳನ್ನು ನಡೆಸುವುದಾಗಿಯೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಹೇಳಿದೆ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಸೆಪ್ಟೆಂಬರ್ನಲ್ಲಿ ಈ ಸಮೀಕ್ಷೆ ನಿರ್ಧಾರ ಜಾರಿಗೆ ತರಲಾಗಿತ್ತು.
ಐದು ವರ್ಷಕ್ಕೆ ಎಂಟು ಲಕ್ಷ ಉದ್ಯೋಗಗಳನ್ನು ಒದಗಿಸುವುದು, ರಾಜ್ಯದ ಪ್ರಮುಖ ಬೆಳೆಯಾದ ಸೇಬು ಹಣ್ಣಿನ ಪ್ಯಾಕೇಜಿಂಗ್ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಯನ್ನು ಶೇ 18ರಿಂದ ಶೇ 12ಕ್ಕೆ ಇಳಿಸುವುದು ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವುದು ಬಿಜೆಪಿಯ ಪ್ರಣಾಳಿಕೆಯಲ್ಲಿರುವ ಇತರೆ ಭರವಸೆಗಳಾಗಿವೆ.
ಹಿಮಾಚಲ ಪ್ರದೇಶದವರೇ ಆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದರು. 6- 12ನೇ ತರಗತಿವರೆಗಿನ ಹೆಣ್ಣುಮಕ್ಕಳಿಗೆ ಉಚಿತ ಬೈಸಿಕಲ್, ಕಾಳೇಜು ವಿದ್ಯಾರ್ಥಿನಿಯರಿಗೆ ಸ್ಕೂಟರ್ ನೀಡುವುದು ಮತ್ತು ರಾಜ್ಯದಲ್ಲಿ ಐದು ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಯ ಆಶ್ವಾಸನೆಗಳನ್ನು ಅದು ನೀಡಿದೆ.
ರಾಜ್ಯದಲ್ಲಿ ಏಕರೂಪದ ನಾಗರಿಕ ಸಂಹಿತೆ ಜಾರಿಗೆ ತರಲು ಸಮಿತಿಯೊಂದನ್ನು ರಚನೆ ಮಾಡುವುದಾಗಿ ನಡ್ಡಾ ತಿಳಿಸಿದ್ದಾರೆ. ಇದೇ ರೀತಿಯ ಭರವಸೆಯನ್ನು ಗುಜರಾತ್ನಲ್ಲಿ ಕೂಡ ಬಿಜೆಪಿ ನೀಡಿದೆ. ಶನಿವಾರ ಬಿಡುಗಡೆಯಾದ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ದೂರದೃಷ್ಟ ಮತ್ತು ತೂಕವಿಲ್ಲ ಎಂದು ನಡ್ಡಾ ಟೀಕಿಸಿದ್ದಾರೆ.
ನವೆಂಬರ್ 12ರಂದು ಮತದಾನ
ಹಿಮಾಚಲ ಪ್ರದೇಶದ 68 ಸದಸ್ಯರ ವಿಧಾನಸಭೆಗೆ ನವೆಂಬರ್ 12ರಂದು ಮತದಾನ ನಡೆಯಲಿದೆ. ಅದರ ಫಲಿತಾಂಶಗಳನ್ನು ಡಿ. 8ರಂದು ಪ್ರಕಟಿಸಲಾಗುತ್ತದೆ. ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಗುಜರಾತ್ ಚುನಾವಣೆ ನಡೆಯಲಿದ್ದು, ಅದರ ಮತ ಎಣಿಕೆ ಕೂಡ ಡಿ. 8ರಂದು ನಡೆಯಲಿದೆ.
ಹಿಮಾಚಲ ಪ್ರದೇಶದಲ್ಲಿ ಪ್ರತಿ ಚುನಾವಣೆಯಲ್ಲಿಯೂ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಸರ್ಕಾರಗಳು ಬದಲಾಗುವ ಸಂಪ್ರದಾಯವಿದೆ. ಹೀಗಾಗಿ ಈ ಬಾರಿ ಅಧಿಕಾರ ತನಗೆ ಒಲಿಯಲಿದೆ ಎಂದು ಕಾಂಗ್ರೆಸ್ ವಿಶ್ವಾಸ ಹೊಂದಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಈ ಬಾರಿ ರಾಜ್ಯದಲ್ಲಿ ತನ್ನ ಅಸ್ತಿತ್ವ ಪ್ರದರ್ಶನಕ್ಕೆ ಪ್ರಯತ್ನಿಸುತ್ತಿದ್ದು, ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.