ಆ್ಯಪ್ನಗರ

ಗೋಡ್ಸೆಯ 100ನೇ ಜನ್ಮದಿನ ಆಚರಿಸಿದ ಹಿಂದೂ ಮಹಾಸಭಾ

ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯ 100ನೇ ಜನ್ಮ ದಿನಾಚರಣೆಯಲ್ಲಿ ಭಾನುವಾರ ಅಖಿಲ ಭಾರತ ಹಿಂದೂ ಮಹಾಸಭಾ ಸಂಭ್ರಮದಿಂದ ಆಚರಿಸಿದೆ.

TIMESOFINDIA.COM 20 May 2019, 8:44 am
ಹೊಸದಿಲ್ಲಿ: ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯ 100ನೇ ಜನ್ಮ ದಿನಾಚರಣೆಯಲ್ಲಿ ಭಾನುವಾರ ಹಿಂದೂ ಮಹಾಸಭಾ ಸಂಭ್ರಮದಿಂದ ಆಚರಿಸಿದೆ.
Vijaya Karnataka Web godse


ಈ ವೇಳೆ ಅಖಿಲ ಭಾರತ ಹಿಂದೂ ಮಹಾಸಭಾ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು. ಅಷ್ಟೆ ಅಲ್ಲದೆ, ಮಹಾತ್ಮ ಗಾಂಧಿ ಮೇಲಿನ ಪ್ರಧಾನಿ ನರೇಂದ್ರ ಮೋದಿ ಪ್ರೀತಿಯನ್ನು ಅವರು ಖಂಡಿಸಿದ್ದಾರೆ.

ಮಹಾತ್ಮಾ ಗಾಂಧಿ ಅವರಿಗೆ ಅವಮಾನಿಸುವಂತಹ ಹೇಳಿಕೆ ನೀಡಿದ ಭೋಪಾಲ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ಗೆ ಕ್ಷಮೆ ನೀಡಲು ಸಾಧ್ಯವಿಲ್ಲ ಎಂದು ಮೊನ್ನೆಯಷ್ಟೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದರು.

'ನಾಥೂರಾಂ ಗೋಡ್ಸೆ ದೇಶಭಕ್ತ. ಹಿಂದೆ-ಇಂದು-ಮುಂದೆಯೂ ದೇಶಭಕ್ತನೇ. ಅವನನ್ನು ಭಯೋತ್ಪಾದಕ ಎಂದು ಕರೆಯುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಂತಹ ವ್ಯಕ್ತಿಗಳಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು' ಎಂದು ಪ್ರಜ್ಞಾ ಸಿಂಗ್ ಠಾಕೂರ್ ನೀಡಿದ್ದ ಹೇಳಿಕೆ ವ್ಯಾಪಕ ವಿವಾದ ಸೃಷ್ಟಿಸಿತ್ತು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ