ಆ್ಯಪ್ನಗರ

ಬುರ್ಹಾನ್‌ ವಾನಿ ನಂತರ ಉಗ್ರ ಸಬ್ಜಾರ್‌ ಅಹ್ಮದ್‌ ಫಿನಿಶ್‌

ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಬಳಿಕ ಸಂಘಟನೆಯ ನೂತನ ಕಮಾಂಡರ್ ಆಗಿ ನೇಮಕಗೊಂಡಿದ್ದ ಉಗ್ರ ಸಬ್ಜಾರ್ ಅಹ್ಮದ್‌ನನ್ನು ಭದ್ರತಾ ಪಡೆ ಎನ್‌ಕೌಂಟರ್ ನಲ್ಲಿ ಹತ್ಯೆ ಮಾಡಿದೆ.

ಟೈಮ್ಸ್ ಆಫ್ ಇಂಡಿಯಾ 27 May 2017, 3:27 pm
ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಬಳಿಕ ಸಂಘಟನೆಯ ನೂತನ ಕಮಾಂಡರ್ ಆಗಿ ನೇಮಕಗೊಂಡಿದ್ದ ಉಗ್ರ ಸಬ್ಜಾರ್ ಅಹ್ಮದ್‌ ಭದ್ರತಾ ಪಡೆ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ.
Vijaya Karnataka Web hizbul terrorist sabzar ahmad burhan wanis successor killed in kashmir
ಬುರ್ಹಾನ್‌ ವಾನಿ ನಂತರ ಉಗ್ರ ಸಬ್ಜಾರ್‌ ಅಹ್ಮದ್‌ ಫಿನಿಶ್‌


ಪೊಲೀಸ್‌ ಮೂಲಗಳ ಪ್ರಕಾರ, ಅಹ್ಮದ್‌ ಅಲಿಯಾಸ್‌ ಅಬು ಝರಾರ್‌ ತನ್ನ ಇಬ್ಬರು ಸಂಗಡಿಗರೊಂದಿಗೆ ಪುಲ್ವಾಮಾದ ಟ್ರಾಲ್‌ನಲ್ಲಿರುವ ಮನೆಯಲ್ಲಿ ಅಡಗಿ ಕುಳಿತಿದ್ದ. ಇದನ್ನರಿತು ಭದ್ರತಾಪಡೆ ಆ ಮನೆ ಮೇಲೆ ಶನಿವಾರ ನಡೆಸಿದ ದಾಳಿಯಲ್ಲಿ ಅಹ್ಮದ್‌ ಸೇರಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.

ಅಧಿಕೃತ ಮಾಹಿತಿಯ ಪ್ರಕಾರ 42ನೇ ರಾಷ್ಟ್ರೀಯ ರೈಫಲ್‌ ಭದ್ರತಾ ಪಡೆ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ಸೈಮಹ್‌ ಬಳಿ ಶುಕ್ರವಾರ ರಾತ್ರಿಯಿಂದಲೇ ಕಾರ್ಯಾಚರಣೆಗಿಳಿದಿದ್ದರು. ಸದ್ಯದ ಪ್ರಕಾರ ಶನಿವಾರ ಮುಂಜಾನೆಯಿಂದಲೇ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ದಾಳಿ ನಡೆಯುತ್ತಿದೆ. ಇದೀಗ ಪರಾರಿಯಾಗಿರುವ ಉಗ್ರರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಪೊಲೀಸ್‌ ಮಾಹಿತಿ ಪ್ರಕಾರ, ಭದ್ರತಾ ಪಡೆಗಳ ಕಾರ್ಯಾಚರಣೆ ವಿಚಾರ ತಿಳಿಯುತ್ತಿದ್ದಂತೆಯೇ ಕೆಲ ಕಲ್ಲು ತೂರಾಟಗಾರರು ಅಲ್ಲಿನ ಸ್ಥಳೀಯರಿಗೆ ಅಹ್ಮದ್‌ನನ್ನು ರಕ್ಷಿಸುವಂತೆ ವಾಟ್ಸಾಪ್‌ನಲ್ಲಿ ದ್ವನಿ ಸಂದೇಶ ರವಾನಿದ್ದಾರೆ. 'ಟ್ರಾಲ್‌ನ ಕೆಲ ಪ್ರದೇಶಗಳಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುವಂತೆ ಧ್ವನಿವರ್ಧಕಗಳನ್ನು ಬಳಸಲಾಗುತ್ತಿತ್ತು. ಕೆಲವರು ಉಗ್ರರಿಗೆ ಸಹಾಯವಾಗುವಂತೆ ನಮ್ಮ ಮಾಹಿತಿಗಳನ್ನು ರವಾನಿಸುತ್ತಿದ್ದರು' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ರಾಂಪುರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಕ್ಕೆ ನುಸುಳಲು ಯತ್ನಿಸಿದ್ದ ಆರು ಮಂದಿ ಉಗ್ರರನ್ನು ಭಾರತೀಯ ಸೇನಾ ಪಡೆ ಗುಂಡಿಟ್ಟು ಹತ್ಯೆ ಮಾಡಿರುವ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ