ಆ್ಯಪ್ನಗರ

ದಾಳಿ ಬೆದರಿಕೆ: ಕಾಶ್ಮೀರಿಗಳ ರಕ್ಷಣೆಗೆ ಗೃಹ ಸಚಿವಾಲಯ ಸೂಚನೆ

ಶನಿವಾರ ಉನ್ನತ ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿರುವ ಗೃಹ ಸಚಿವ ರಾಜನಾಥ ಸಿಂಗ್, ಜಮ್ಮು-ಕಾಶ್ಮೀರ ವಾಸಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ.

Vijaya Karnataka Web 16 Feb 2019, 7:53 pm
ಹೊಸದಿಲ್ಲಿ: ಪುಲ್ವಾಮದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ ಉಗ್ರರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿರುವ ಜತೆಗೆ ದೇಶದ ವಿವಿಧೆಡೆ ನೆಲೆಸಿರುವ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳು ಮತ್ತು ಇತರರ ಮೇಲೆ ದಾಳಿ ನಡೆಸುವ ಬೆದರಿಕೆ ಕೇಳಿಬಂದ ಬೆನ್ನಲ್ಲೇ ಗೃಹ ಸಚಿವಾಲಯ ಎಚ್ಚರಿಕೆ ನೀಡಿದೆ.
Vijaya Karnataka Web kashmir


ಶನಿವಾರ ಉನ್ನತ ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿರುವ ಗೃಹ ಸಚಿವ ರಾಜನಾಥ ಸಿಂಗ್, ಜಮ್ಮು-ಕಾಶ್ಮೀರ ವಾಸಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ.

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಕೆಲವು ಕಾಶ್ಮೀರಿ ಯುವಕರು ತಮಗೆ ಹಲವರು ಹಲ್ಲೆ ನಡೆಸುವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿದ ಬೆನ್ನಲ್ಲೇ ದಾಳಿ ಭೀತಿಯಿಂದಾಗಿ ಅವರು ಕಾಶ್ಮೀರಕ್ಕೆ ಮರಳಲು ನಿರ್ಧರಿಸಿದ್ದಾರೆ.

ಹೀಗಾಗಿ ಅವರಿಗೆ ರಕ್ಷಣೆ ನೀಡುವುದು ಮತ್ತು ಸ್ಥಳೀಯವಾಗಿ ಉಂಟಾಗಿರುವ ಗೊಂದಲ ದೂರಮಾಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯ ಸೂಚನೆ ರವಾನಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ