ಪಾಟ್ಣಾ: ಮನೆ ಇಲ್ಲದವರಿಗೆ ಭೂಮಿ ಖರೀದಿಸಲು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ತಲಾ 60,000 ನೀಡುವುದಾಗಿ ಘೋಷಿಸಿದ್ದಾರೆ. ಖರೀದಿಸಿದ ಭೂಮಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (PMAY) 1.2 ಲಕ್ಷ ರೂಪಾಯಿ ವೆಚ್ಚದ ಮನೆ ನಿರ್ಮಿಸಿಕೊಡುವ ಇರಾದೆ ಅವರದ್ದಾಗಿದೆ.
ಮುಖ್ಯಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಜತೆಗೆ ಸಂಯೋಗ ಹೊಂದಿರುವ ಸಿಎಂ ಹೋಮ್ಸ್ಟೆಡ್ ಲ್ಯಾಂಡ್ ಅಸಿಸ್ಟೆಂಟ್ ಯೋಜನೆಯಡಿಯಲ್ಲಿ ಭೂಮಿ ಖರೀದಿಸಿದರೆ ನೋಂದಣಿ ಶುಲ್ಕ ಕೂಡ ಇರುವುದಿಲ್ಲ, ಎಂದು ಮುಖ್ಯಮಂತ್ರಿ ಸ್ಪಷ್ಟ ಪಡಿಸಿದ್ದಾರೆ.
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಸಿಎಂ ನಿತೀಶ್ ಈ ಎರಡು ಮಹತ್ವದ ಯೋಜನೆಗಳನ್ನು ಘೋಷಿಸಿದ್ದರು. ಗ್ರಾಮೀಣ ಅಭಿವೃದ್ಧಿ ಇಲಾಖೆ ಈ ಎರಡು ಯೋಜನೆಗಳ ಅನುಷ್ಠಾನವನ್ನು ಆರಂಭಿಸಿದೆ ಎಂದವರು ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಸುಶೀಲ್ ಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಶ್ರವಣ್ ಕುಮಾರ್ ಮತ್ತವರ ಇಲಾಖೆಯ ಹಿರಿಯ ಅಧಿಕಾರಿಗಳು ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಮುಖ್ಯಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಜತೆಗೆ ಸಂಯೋಗ ಹೊಂದಿರುವ ಸಿಎಂ ಹೋಮ್ಸ್ಟೆಡ್ ಲ್ಯಾಂಡ್ ಅಸಿಸ್ಟೆಂಟ್ ಯೋಜನೆಯಡಿಯಲ್ಲಿ ಭೂಮಿ ಖರೀದಿಸಿದರೆ ನೋಂದಣಿ ಶುಲ್ಕ ಕೂಡ ಇರುವುದಿಲ್ಲ, ಎಂದು ಮುಖ್ಯಮಂತ್ರಿ ಸ್ಪಷ್ಟ ಪಡಿಸಿದ್ದಾರೆ.
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಸಿಎಂ ನಿತೀಶ್ ಈ ಎರಡು ಮಹತ್ವದ ಯೋಜನೆಗಳನ್ನು ಘೋಷಿಸಿದ್ದರು. ಗ್ರಾಮೀಣ ಅಭಿವೃದ್ಧಿ ಇಲಾಖೆ ಈ ಎರಡು ಯೋಜನೆಗಳ ಅನುಷ್ಠಾನವನ್ನು ಆರಂಭಿಸಿದೆ ಎಂದವರು ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಸುಶೀಲ್ ಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಶ್ರವಣ್ ಕುಮಾರ್ ಮತ್ತವರ ಇಲಾಖೆಯ ಹಿರಿಯ ಅಧಿಕಾರಿಗಳು ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು.