ಆ್ಯಪ್ನಗರ

ವಕೀಲರ ನೇಮಿಸಲು ಹನಿಪ್ರೀತ್‌ ಬಳಿ ಹಣವಿಲ್ಲವಂತೆ!

ಗಲಭೆ ಪ್ರಕರಣದಲ್ಲಿ ಜೈಲು ಸೇರಿರುವ ಗುರ್ಮಿತ್ ರಾಮ್ ರಹೀಂನ ದತ್ತು ಪುತ್ರಿ ಹನಿಪ್ರೀತ್ ಇತ್ತೀಚೆಗೆ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದು ವಕೀಲರನ್ನು ನೇಮಿಸಿಕೊಳ್ಳಲು ತನ್ನ ಬಳಿ ಹಣವಿಲ್ಲ ಎಂದು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

Indiatimes 6 Dec 2017, 12:20 pm
ಹೊಸದಿಲ್ಲಿ: ಗಲಭೆ ಪ್ರಕರಣದಲ್ಲಿ ಜೈಲು ಸೇರಿರುವ ಗುರ್ಮಿತ್ ರಾಮ್ ರಹೀಂನ ದತ್ತು ಪುತ್ರಿ ಹನಿಪ್ರೀತ್ ಇತ್ತೀಚೆಗೆ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದು ವಕೀಲರನ್ನು ನೇಮಿಸಿಕೊಳ್ಳಲು ತನ್ನ ಬಳಿ ಹಣವಿಲ್ಲ ಎಂದು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
Vijaya Karnataka Web honeypreet left with no money to hire lawyers urges authorities to unfreeze bank accounts
ವಕೀಲರ ನೇಮಿಸಲು ಹನಿಪ್ರೀತ್‌ ಬಳಿ ಹಣವಿಲ್ಲವಂತೆ!


ಅತ್ಯಾಚಾರ ಪ್ರಕರಣದಲ್ಲಿ ಗುರ್ಮೀತ್‌ ರಾಮ್‌ ರಹೀಂನ ಬಂಧನದ ಸಂದರ್ಭದಲ್ಲಿ ಗಲಭೆಗೆ ಕಾರಣಳಾದ ಈತನ ದತ್ತು ಪುತ್ರಿ ಹನಿಪ್ರೀತ್‌ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಅಲ್ಲದೇ ಪ್ರಕರಣದ ತನಿಖೆ ಸಂದರ್ಭದಲ್ಲಿ ಎಸ್‌ಐಟಿ ಹನಿಪ್ರೀತ್‌ನ ಬ್ಯಾಂಕ್‌ ಖಾತೆಗಳನ್ನು ಸ್ಥಂಭನಗೊಳಿಸಿತ್ತು. ಪರಿಣಾಮ ಹನಿಪ್ರೀತ್‌ ಈಗ ಆರ್ಥಿಕ ಮುಗ್ಗಟ್ಟು ಎದುರಿಸುವಂತಾಗಿದೆ.

ಎಸ್‌ಐಟಿ ತನ್ನ ಮೂರು ಬ್ಯಾಂಕ್ ಖಾತೆಗಳನ್ನು ಸೀಝ್‌ ಮಾಡಿದೆ. ಹೀಗಾಗಿ ವಕೀಲರನ್ನು ನೇಮಿಸಲು ನಮ್ಮ ಬಳಿ ಹಣವಿಲ್ಲ, ಹಣ ಡ್ರಾ ಮಾಡಲು ತನಗೆ ಅವಕಾಶ ನೀಡಬೇಕು ಎಂದವರು ಬೇಡಿಕೆಯಿರಿಸಿದ್ದಾರೆ.

ಪಂಚಕುಲ ಎಸ್‌ಐಟಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಕೋರ್ಟ್‌ನಲ್ಲಿ ವಿಚಾರಣೆ ಶುರುವಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ