ಜುಜ್ವಾ (ಗುಜರಾತ್): ದೇಶವು 75ನೇ ಸ್ವಾತಂತ್ರ್ಯ ಸಂಭ್ರಮ ಆಚರಿಸುವ ಹೊತ್ತಿಗೆ ದೇಶದಲ್ಲಿ ಎಲ್ಲರೂ ಸ್ವಂತ ಸೂರು ಹೊಂದಬೇಕೆಂಬುದು ನಮ್ಮ ಸರಕಾರದ ಕನಸಾಗಿದ್ದು, ಅದರ ಈಡೇರಿಕೆಗೆ ಪ್ರಯತ್ನ ಮುಂದುವರಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುಜರಾತಿನ ವಲ್ಸಾದ್ನಲ್ಲಿರುವ ಜುಜ್ವಾದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಪ್ರಧಾನಿ, ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ಒಂದು ಪೈಸೆ ಕೂಡ ಲಂಚ ಕೊಡಬೇಡಿ. ಅದು ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿಯೇ ಕೊನೆಗೊಂಡ ಹೀನ ಪದ್ಧತಿಯಾಗಿದೆ. ಲಂಚದ ಹಾವಳಿ ಇಲ್ಲದೆಯೇ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸಬ್ಸಿಡಿ ಮೊತ್ತದೊಂದಿಗೆ ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಿಸಬಹುದಾಗಿದೆ ಎಂದು ಹೇಳಿದರು. 2022ರ ಹೊತ್ತಿಗೆ ದೇಶದ ಗ್ರಾಮೀಣ ಭಾಗದಲ್ಲಿ 2.95 ಕೋಟಿ ಮನೆಗಳನ್ನು ನಿರ್ಮಿಸುವ ಗುರಿ ಹಮ್ಮಿಕೊಳ್ಳಲಾಗಿದೆ ಎಂದರು. ಜುನಾಗಢದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ''70 ವರ್ಷಗಳ ಹಿಂದೆಯೇ ಸ್ವಚ್ಛ ಭಾರತ ಯೋಜನೆ ಸಾಕಾರಗೊಳಿಸಿದ್ದಿದ್ದರೆ, ಭಾರತವು ರೋಗಮುಕ್ತವಾಗಿರುತ್ತಿತ್ತು ,'' ಎಂದರು. ಇದಕ್ಕೂ ಮುನ್ನ ಗುಜರಾತಿನ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಘಟಿಕೋತ್ಸವ ಹಾಗೂ ಸೋಮನಾಥ ದೇವಾಲಯದ ಟ್ರಸ್ಟ್ ಸಭೆಯಲ್ಲಿ ಪಾಲ್ಗೊಂಡಿದ್ದರು.
ಗುಜರಾತಿನ ವಲ್ಸಾದ್ನಲ್ಲಿರುವ ಜುಜ್ವಾದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಪ್ರಧಾನಿ, ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ಒಂದು ಪೈಸೆ ಕೂಡ ಲಂಚ ಕೊಡಬೇಡಿ. ಅದು ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿಯೇ ಕೊನೆಗೊಂಡ ಹೀನ ಪದ್ಧತಿಯಾಗಿದೆ. ಲಂಚದ ಹಾವಳಿ ಇಲ್ಲದೆಯೇ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸಬ್ಸಿಡಿ ಮೊತ್ತದೊಂದಿಗೆ ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಿಸಬಹುದಾಗಿದೆ ಎಂದು ಹೇಳಿದರು. 2022ರ ಹೊತ್ತಿಗೆ ದೇಶದ ಗ್ರಾಮೀಣ ಭಾಗದಲ್ಲಿ 2.95 ಕೋಟಿ ಮನೆಗಳನ್ನು ನಿರ್ಮಿಸುವ ಗುರಿ ಹಮ್ಮಿಕೊಳ್ಳಲಾಗಿದೆ ಎಂದರು. ಜುನಾಗಢದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ''70 ವರ್ಷಗಳ ಹಿಂದೆಯೇ ಸ್ವಚ್ಛ ಭಾರತ ಯೋಜನೆ ಸಾಕಾರಗೊಳಿಸಿದ್ದಿದ್ದರೆ, ಭಾರತವು ರೋಗಮುಕ್ತವಾಗಿರುತ್ತಿತ್ತು ,'' ಎಂದರು. ಇದಕ್ಕೂ ಮುನ್ನ ಗುಜರಾತಿನ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಘಟಿಕೋತ್ಸವ ಹಾಗೂ ಸೋಮನಾಥ ದೇವಾಲಯದ ಟ್ರಸ್ಟ್ ಸಭೆಯಲ್ಲಿ ಪಾಲ್ಗೊಂಡಿದ್ದರು.