ಆ್ಯಪ್ನಗರ

ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಅಪ್ಪುಗೆ, ಮೋದಿ ಪರ ಯುವಕರ ಬಂಧನ: ಕೈ ವಿರುದ್ಧ ಶಾ ವಾಗ್ದಾಳಿ

ಮಾನ್ಯತಾ ಟೆಕ್‌ ಪಾರ್ಕ್‌ನಲ್ಲಿ ನವ್ಯೋದ್ಯಮಿಗಳೊಂದಿಗೆ ಸೋಮವಾರ ಸಂಜೆ ರಾಹುಲ್‌ ಸಂವಾದ ಏರ್ಪಡಿಸಲಾಗಿತ್ತು. ರಾಹುಲ್‌ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಪಾರ್ಕ್‌ ಬಳಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಟೆಕ್ಕಿಗಳು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಮೋದಿ ಪರ ಘೋಷಣೆ ಕೂಗಿದ್ದರು.

TIMESOFINDIA.COM 19 Mar 2019, 2:22 pm
ಹೊಸದಿಲ್ಲಿ: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬೆಂಗಳೂರಿನಲ್ಲಿ ನಡೆದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮದ ವೇಳೆ ಮೋದಿ ಪರ ಘೋಷಣೆ ಕೂಗಿದ ಟೆಕ್ಕಿಗಳನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿದ್ದಾರೆ.

ಮಾನ್ಯತಾ ಟೆಕ್‌ ಪಾರ್ಕ್‌ನಲ್ಲಿ ನವೋದ್ಯಮಿಗಳೊಂದಿಗೆ ಸೋಮವಾರ ಸಂಜೆ ರಾಹುಲ್‌ ಸಂವಾದ ಏರ್ಪಡಿಸಲಾಗಿತ್ತು. ರಾಹುಲ್‌ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಪಾರ್ಕ್‌ ಬಳಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಟೆಕ್ಕಿಗಳು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಮೋದಿ ಪರ ಘೋಷಣೆ ಕೂಗಿದ್ದರು. ತಿರುಗೇಟು ನೀಡಲು ಕಾಂಗ್ರೆಸ್‌ ಕಾರ್ಯಕರ್ತರು ಮುಂದಾದರೂ ಟೆಕ್ಕಿಗಳ ಅಬ್ಬರದ ನಡುವೆ ಅವರ ಧ್ವನಿ ಮೊಳಗಲಿಲ್ಲ.

ಸಿಟ್ಟಿಗೆದ್ದ ಕಾಂಗ್ರೆಸ್‌ ಕಾರ್ಯಕರ್ತರು ಟೆಕ್ಕಿಗಳ ಮೇಲೆ ಕೈಮಾಡಲು ಮುಂದಾದರು. ಈ ಹಂತದಲ್ಲಿ ಕಾವೇರಿದ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ನಂತರ ಕೆಲವು ಟೆಕ್ಕಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.

'ತುಕ್ಡೆ ತುಕ್ಡೆ ಗ್ಯಾಂಗ್' ಸದಸ್ಯರನ್ನು ಅಪ್ಪಿಕೊಳ್ಳುವ ಕಾಂಗ್ರೆಸ್, ಮೋದಿ ಪರ ಘೋಷಣೆ ಕೂಗಿದವರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈಹಾಕಿದೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ.


ರಾಹುಲ್ ಗಾಂಧಿ ಉಲ್ಲೇಖಿಸಿ ವಾಕ್ ಪ್ರಹಾರ ನಡೆಸಿದ ಅವರು, 'ದೇಶದ ಯುವ ಜನತೆ ಯಾರನ್ನು ಅನುಸರಿಸುತ್ತಿದ್ದಾರೆ ಎನ್ನುವುದನ್ನು ಕಾಂಗ್ರೆಸ್‌ನ ಯುವರಾಜ ಅರ್ಥೈಸಿಕೊಳ್ಳಬೇಕು' ಎಂದಿದ್ದಾರೆ.



ರಾಹುಲ್ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಪರ ಘೋಷಣೆ ಕೂಗಿದ ಟೆಕ್ಕಿಗಳನ್ನು ಪೊಲೀಸರು ಬಂಧಿಸುತ್ತಿರುವ ವೀಡಿಯೋ ಶೇರ್ ಮಾಡಿಕೊಂಡಿರುವ ಕರ್ನಾಟಕ ಬಿಜೆಪಿ ಘಟಕ, 'ಇದು ಕಾಂಗ್ರೆಸ್-ಜೆಡಿಎಸ್ ಆಡಳಿತ ಇರುವ ರಾಜ್ಯದಲ್ಲಿನ ಪ್ರಜಾಪ್ರಭುತ್ವದ ನೈಜ ಮುಖ' ಎಂದು ವರ್ಣಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ