ಆ್ಯಪ್ನಗರ

ಸಿಎಎ, ಎನ್‌ಆರ್‌ಸಿಗೆ ವಿರೋಧ: ಕೇರಳದಲ್ಲಿ 620 ಕಿ.ಮೀ ಮಾನವ ಸರಪಳಿ ರಚನೆ

ಪೌರತ್ವ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರೋಧಿಸಿ ಕೇರಳದಲ್ಲಿ ಗಣರಾಜ್ಯೋತ್ಸವದ ದಿನದಂದೇ ಬೃಹತ್ ಮಾನವ ಸರಪಳಿ ರಚಿಸುವ ಮೂಲಕ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಕೇರಳ ಸಿಎಂ ಪಿಣರಾಯ್ ವಿಜಯನ್ ಸೇರಿದಂತೆ ಹಲವರು ಭಾಗಿಯಾಗಿದರು.

Vijaya Karnataka Web 26 Jan 2020, 6:09 pm
ತಿರುವನಂತಪುರಂ: ಪೌರತ್ವ ತಿದ್ದುಪಡಿ ಕಾಯ್ದೆ 2019 ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಗಣರಾಜ್ಯೋತ್ಸವ ದಿನದಂದೇ ಕೇರಳದಲ್ಲಿ ಬೃಹತ್ ಮಾನವ ಸರಪಳಿ ರಚಿಸುವ ಮೂಲಕ ಪ್ರತಿಭಟನೆ ಮಾಡಲಾಯಿತು.
Vijaya Karnataka Web human chain organised by left democratic front as a protest against caa
ಸಿಎಎ, ಎನ್‌ಆರ್‌ಸಿಗೆ ವಿರೋಧ: ಕೇರಳದಲ್ಲಿ 620 ಕಿ.ಮೀ ಮಾನವ ಸರಪಳಿ ರಚನೆ


ಕೇರಳದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣದ ಕಲಿಯಾಕ್ಕಾವಿಲೈವರೆಗೂ ಸುಮಾರು 620 ಕಿಲೋ ಮೀಟರ್ ಉದ್ದದ ಮಾನವ ಸರಪಳಿಯನ್ನು ರಚಿಸಲಾಯಿತು. ಸಿಪಿಐ(ಎಂ) ನೇತೃತ್ವದ ಎಡಪಕ್ಷಗಳು ಈ ಮಾವನ ಸರಪಳಿಯನ್ನು ರಚಿಸುವ ಮೂಲಕ ಪೌರತ್ವ ಕಾಯ್ದೆ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರುದ್ಧ ಘೋಷಣೆಗಳನ್ನು ಕೂಗಿದರು.


ಪೌರತ್ವ ಪ್ರತಿಭಟನೆ: ಮಂಗಳೂರಿಗೆ ವರದಿಗೆ ಬಂದಿದ್ದ ಕೇರಳ ಪತ್ರಕರ್ತರ ಬಂಧನ

ಬೃಹತ್ ಮಾನವ ಸರಪಳಿ ಪ್ರತಿಭಟನೆಯಲ್ಲಿ ಕೇರಳದ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಸಚಿವರು, ಶಾಸಕರು ಹಾಗೂ ಸಿಪಿಐ ಮುಖಂಡರು ಭಾಗಿಯಾದರು. ಸಿಎಎ ವಿರುದ್ಧ ಕೇರಳದಲ್ಲಿ ಹಲವಾರು ಪ್ರತಿಭಟನೆಗಳು ನಡೆದಿವೆ.

ಪೌರತ್ವ ಕಾಯ್ದೆ ಹಾಗೂ ಎನ್‌ಸಿಆರ್‌ ವಿರೋಧಿಸಿ ನಿರ್ಣಯ ಕೈಗೊಂಡ ಮೂರು ರಾಜ್ಯಗಳ ಪೈಕಿ ಕೇರಳ ಮೊದಲನೆಯದಾಗಿದೆ. ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಪಿಣರಾಯಿ ವಿಜಯನ್ “ಸಿಎಎ ವಿರುದ್ಧ ಇಂದು ಆಯೋಜಿಸಲಾದ ಮಾನವ ಸರಪಳಿ ಒಂದು ಬೃಹತ್ ಗೋಡಯಾಗಿ ಮಾರ್ಪಟ್ಟಿದೆ. ಈ ಕಾಯ್ದೆ ದೇಶದ ಜಾತ್ಯತೀತತೆಗೆ ಅಪಾಯಕಾರಿಯಾಗಿದೆ. ಈ ನೆಲದಲ್ಲಿ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್‌ ಕಾಯ್ದೆಗಳನ್ನು ಜಾರಿಗೆ ತರಲು ಅವಕಾಶ ನೀಡುವುದಿಲ್ಲ” ಎಂದರು.

ಕೇರಳದ ಮಹಾ ಮಾನವ ಸರಪಳಿಯಲ್ಲಿ ಲಕ್ಷಾಂತರ ಜನರು ಭಾಗಿಯಾಗಿದ್ದಾರೆ ಎಂದು ಆಯೋಜಕರಾದ ಎಲ್‌ಡಿಎಫ್ ಪಕ್ಷದ ಮುಖಂಡರು ಹೇಳಿದ್ದಾರೆ. ಇದೇ ವೇಳೆ ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿಭಟನಾಕಾರರು ಓದುವ ಮೂಲಕ ಸಿಎಎ ಹಾಗೂ ಎನ್‌ಆರ್‌ಸಿಗೆ ವಿರೋಧ ವ್ಯಕ್ತಪಡಿಸಿದರು.

ಮುಂದಿನ ಲೇಖನ