ಆ್ಯಪ್ನಗರ

ಮತ್ತೊಮ್ಮೆ ಉಗ್ರ ದಾಳಿ ನಡೆಸಿದರೆ ಸರ್ವ ನಾಶ ಮಾಡಲು ನಾವು ಸಿದ್ಧ: ಭಾರತ ಖಡಕ್‌ ಎಚ್ಚರಿಕೆ

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಸರ್ಜಿಕಲ್‌ ಸ್ಟ್ರೈಕ್ ನಂತರ ಪಾಕಿಸ್ತಾನ ಅಂತಾರಾಷ್ಟ್ರೀಯದ ಸಮುದಾಯದ ಕದ ತಟ್ಟುತ್ತಿದೆ. ಮಧ್ಯಸ್ಥಿಕೆಗೆ ಆಗ್ರಹಿಸುತ್ತಿದೆ. ಭಾರತದ ರಾಜತಾಂತ್ರಿಕ ಮಟ್ಟದ ಕಾರ್ಯಾಚರಣೆ ಯಶಸ್ವಿಯಾಗಿದ್ದು ಪಾಕ್‌ ಆಟ ನಡೆಯುತ್ತಿಲ್ಲ.

Vijaya Karnataka Web 5 Mar 2019, 6:23 pm
ಹೊಸದಿಲ್ಲಿ: ಒಂದು ವೇಳೆ ಭಾರತದಲ್ಲಿ ಮತ್ತೊಮ್ಮೆ ವಿಧ್ವಂಸಕ ಕೃತ್ಯಗಳು ನಡೆದರೆ, ಉಗ್ರ ದಾಳಿಗಳು ನಡೆದರೆ ಉಗ್ರರ ನೆಲೆಗಳನ್ನು ಸರ್ವನಾಶ ಮಾಡಲು ನಾವು ಸಂಪೂರ್ಣ ಸಜ್ಜಾಗಿದ್ದೇವೆ ಎಂದು ಭಾರತ ಎಚ್ಚರಿಕೆ ನೀಡಿದೆ.
Vijaya Karnataka Web ಭಾರತೀಯ ಸೇನೆ
ಭಾರತೀಯ ಸೇನೆ


ಭಾರತದ ಸರ್ಜಿಕಲ್‌ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಎಫ್‌-16 ಯುದ್ಧ ವಿಮಾನವನ್ನು ಬಳಕೆ ಮಾಡಿರುವ ಕುರಿತು ಅಮೆರಿಕಕ್ಕೆ ಸಾಕ್ಷ್ಯ ನೀಡಲಾಗಿದೆ. ಅಮೆರಿಕ ಈ ಕುರಿತು ತನಿಖೆ ನಡೆಸುತ್ತದೆ ಎಂಬ ವಿಶ್ವಾಸವಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕೋಟ್‌ ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದ ನಂತರ ಪಾಕಿಸ್ತಾನದ ಮೇಲೆ ಭಾರತ ನಿರಂತರ ಒತ್ತಡ ಹೇರುತ್ತಿದೆ. ಭಯೋತ್ಪಾದನೆ ನಿಗ್ರಹ ವಿಷಯದಲ್ಲಿ ಪಾಕಿಸ್ತಾನ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಾಗತಿಕ ಮಟ್ಟದಲ್ಲಿ ಒತ್ತಡ ಹೇರುತ್ತಿದೆ.

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಸರ್ಜಿಕಲ್‌ ಸ್ಟ್ರೈಕ್ ನಂತರ ಪಾಕಿಸ್ತಾನ ಅಂತಾರಾಷ್ಟ್ರೀಯದ ಸಮುದಾಯದ ಕದ ತಟ್ಟುತ್ತಿದೆ. ಮಧ್ಯಸ್ಥಿಕೆಗೆ ಆಗ್ರಹಿಸುತ್ತಿದೆ. ಆದರೆ ಭಾರತದ ರಾಜತಾಂತ್ರಿಕ ಮಟ್ಟದ ಕಾರ್ಯಾಚರಣೆ ಯಶಸ್ವಿಯಾಗಿರುವುದರಿಂದ ಪಾಕಿಸ್ತಾನದ ಯಾವುದೇ ಆಟ ನಡೆಯುತ್ತಿಲ್ಲ.

ಮತ್ತೊಮ್ಮೆ ಪಾಕ್‌ ಮೂಲದ ಉಗ್ರ ಸಂಘಟನೆಗಳು ಬಾಲ ಬಿಚ್ಚಿದರೆ ಎಲ್ಲವನ್ನೂ 'ಕಟ್‌' ಮಾಡಲಾಗುತ್ತದೆ ಎಂದು ಭಾರತ ಈಗ ನೇರವಾಗಿ ಎಚ್ಚರಿಕೆ ರವಾನಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ