ಆ್ಯಪ್ನಗರ

ನಾನು ಸಾಮಾನ್ಯಳು ಮತ್ತು ಅಜ್ಞಾನಿ, ಸಾಧ್ವಿ ಪ್ರಜ್ಞಾಳೊಂದಿಗೆ ಹೋಲಿಸಬೇಡಿ: ಉಮಾ ಭಾರತಿ

ಮಧ್ಯಪ್ರದೇಶದ ರಾಜಕೀಯದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ನಿಮ್ಮ ಸ್ಥಾನವನ್ನು ತುಂಬುತ್ತಾರಾ ಎಂದು ಕೇಳುತ್ತಾರೆ ಎಂದು ವರದಿಗಾರರು ಪ್ರಶ್ನಿಸಿದಾಗ, ನಾನು ಸಾಮಾನ್ಯಳು ಮತ್ತು ಅಜ್ಞಾನಿ. ಅವರು ಮಹಾ ಸಂತರು , ದಯವಿಟ್ಟು ಅವರೊಂದಿಗೆ ಹೋಲಿಸಬೇಡಿ ಎಂದು ಕೇಳಿಕೊಂಡರು.

Times Now 29 Apr 2019, 12:12 pm
ಕಾಟ್ನಿ: ನಾನು ಸಾಮಾನ್ಯಳು ಮತ್ತು ಅಜ್ಞಾನಿ ದಯವಿಟ್ಟು ಸಾಧ್ವಿ ಪ್ರಜ್ಞಾ ಸಿಂಗ್ ಅವರೊಂದಿಗೆ ನನ್ನನ್ನು ಹೋಲಿಸಬೇಡಿ ಎಂದು ಮಾಜಿ ಕೇಂದ್ರ ಸಚಿವೆ, ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಮನವಿ ಮಾಡಿದ್ದಾರೆ.
Vijaya Karnataka Web Uma Bharti


ಮಧ್ಯಪ್ರದೇಶದ ರಾಜಕೀಯದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ನಿಮ್ಮ ಸ್ಥಾನವನ್ನು ತುಂಬುತ್ತಾರಾ ಎಂದು ಕೇಳುತ್ತಾರೆ ಎಂದು ವರದಿಗಾರರು ಪ್ರಶ್ನಿಸಿದಾಗ, ನಾನು ಸಾಮಾನ್ಯಳು ಮತ್ತು ಅಜ್ಞಾನಿ. ಅವರು ಮಹಾ ಸಂತರು , ದಯವಿಟ್ಟು ಅವರೊಂದಿಗೆ ಹೋಲಿಸಬೇಡಿ ಎಂದು ಕೇಳಿಕೊಂಡರು.

ಮಾಲೇಗಾಂವ್ ಸ್ಫೋಟದ ಆರೋಪಿಯಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಬಿಜೆಪಿ ಮಧ್ಯ ಪ್ರದೇಶದ ಭೋಪಾಲ್ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಅಲ್ಲಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ ಪ್ರತಿಸ್ಪರ್ಧಿಯಾಗಿದ್ದಾರೆ.

ಭೋಪಾಲ್‌ನಲ್ಲಿ ಮೇ 12ರಂದು ಮತದಾನ ನಡೆಯಲಿದೆ.

ಉಮಾ ಭಾರತಿ ಈ ಬಾರಿ ಕಣಕ್ಕಿಳಿಯುತ್ತಿಲ್ಲ ಎಂದು ಘೋಷಿಸಿದ್ದಾರೆ. ಆದರೆ ರಾಜಕೀಯದಿಂದ ನಾನೆಂದಿಗೂ ಸನ್ಯಾಸ ತೆಗೆದುಕೊಳ್ಳುವುದಿಲ್ಲ ಎಂದವರು ಹೇಳಿದ್ದಾರೆ.

ಅವರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ನೇಮಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ