ಆ್ಯಪ್ನಗರ

ಲೋಕಸಭೆ ಚುನಾವಣೆ: 500 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲು 'ಮೋದಿ ಸರಕಾರ್' ತೀರ್ಮಾನ

ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ನರೇಂದ್ರ ಮೋದಿ ಅವರ ಸರಕಾರವು ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಜಾರಿಗೊಳಿಸಿದ ಸಮಾಜ ಕಲ್ಯಾಣ ಯೋಜನೆಗಳ ಕುರಿತು ಸಮೀಕ್ಷೆ ನಡೆಸಲು ...

Vijaya Karnataka 30 Nov 2018, 5:30 am
ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ನರೇಂದ್ರ ಮೋದಿ ಅವರ ಸರಕಾರವು ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಜಾರಿಗೊಳಿಸಿದ ಸಮಾಜ ಕಲ್ಯಾಣ ಯೋಜನೆಗಳ ಕುರಿತು ಸಮೀಕ್ಷೆ ನಡೆಸಲು ಮುಂದಾಗಿದೆ.
Vijaya Karnataka Web namo2


ಬಡ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕ ನೀಡುವ ಪ್ರಧಾನಮಂತ್ರಿ ಉಜ್ವಲ ಯೋಜನೆ ಸೇರಿದಂತೆ ಸರಕಾರ ರೂಪಿಸಿದ ಯೋಜನೆಗಳಿಂದ ಜನರ ಜೀವನಮಟ್ಟ ಎಷ್ಟರಮಟ್ಟಿಗೆ ಬದಲಾಗಿದೆ ಎನ್ನುವುದನ್ನು ತಿಳಿದುಕೊಳ್ಳುವುದು ಸಮೀಕ್ಷೆಯ ಉದ್ದೇಶ. ದೇಶದ 500 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಯಲಿದ್ದು, ಪ್ರತಿ ಜಿಲ್ಲೆಯಲ್ಲಿ ತಲಾ 1,000 ಫಲಾನುಭವಿಗಳಿಂದ ಮಾಹಿತಿ ಪಡೆಯಲಾಗುತ್ತದೆ. ಇದಕ್ಕೆ ತಗಲುವ ವೆಚ್ಚವನ್ನು ಸಂಬಂಧಿಸಿದ ಸಚಿವಾಲಯಗಳು ಭರಿಸಲಿವೆ.

2019ರ ಫೆಬ್ರುವರಿಯಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದ್ದು, ಅಷ್ಟರ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.

ಸಮೀಕ್ಷೆ ನಡೆಸುವ ಹೊಣೆಯನ್ನು ಯಾವ ಸಂಸ್ಥೆಗೆ ನೀಡಬೇಕು ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ದೀನ ದಯಾಳ್‌ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ, ಸ್ಕಿಲ್‌ ಇಂಡಿಯಾ, ಉಜ್ವಲ ಯೋಜನೆ, ಜನಧನ ಯೋಜನೆ ಕೇಂದ್ರ ಸರಕಾರ ಅನುಷ್ಠಾನಗೊಳಿಸಿದ ಪ್ರಮುಖ ಯೋಜನೆಗಳಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ