ಆ್ಯಪ್ನಗರ

ಹಾಸನಕ್ಕೆ ಪ್ರಜ್ವಲ್‌ ರೇವಣ್ಣ, ದೊಡ್ಡ ಗೌಡರಿಗೆ ಬೆಂಗಳೂರು ಉತ್ತರ?

ಬೆಂಗಳೂರು ಉತ್ತರ ಕ್ಷೇತ್ರವನ್ನು ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಿಜೆಪಿ ಸಂಸದರೇ ಪ್ರತಿನಿಧಿಸಿದ್ದಾರೆ. ಡಿ.ಬಿ.ಚಂದ್ರೇಗೌಡರ ಬಳಿಕ ಈಗ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸಂಸದ. ಗೌಡರ ಸ್ಪರ್ಧೆ ಖಚಿತವಾದರೆ ಇಲ್ಲಿ ಡಿವಿಎಸ್‌-ಎಚ್‌ಡಿಡಿ ನಡುವೆ ಪೈಪೋಟಿ ಏರ್ಪಡಲಿದೆ.

Vijaya Karnataka 29 Dec 2018, 10:32 pm
ಬೆಂಗಳೂರು : 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರು ಹಾಸನದಿಂದ ಸ್ಪರ್ಧಿಸಲಿದ್ದಾರೆ ಎಂದು ಸ್ವತಃ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರೇ ಪ್ರಕಟಿಸಿದ್ದಾರೆ.
Vijaya Karnataka Web ದೇವೇಗೌಡ
ದೇವೇಗೌಡ


ಈ ನಡುವೆ, ಮೊಮ್ಮಗನಿಗಾಗಿ ತಮ್ಮ ಕ್ಷೇತ್ರವನ್ನು ಬಿಟ್ಟುಕೊಡಲಿರುವ ದೇವೇಗೌಡರ ಸ್ಪರ್ಧೆ ಎಲ್ಲಿಂದ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಲಭ್ಯ ಮಾಹಿತಿಗಳ ಪ್ರಕಾರ, ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

ಎಚ್‌.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್‌ ಸ್ಪರ್ಧೆಯೊಂದಿಗೆ ಗೌಡರ ಕುಟುಂಬದ ಮೂರನೇ ತಲೆಮಾರಿನ ರಾಜಕೀಯ ಪ್ರವೇಶಕ್ಕೆ ಭೂಮಿಕೆ ಸಿದ್ಧವಾದಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಈಗಿರುವ ಜೆಡಿಎಸ್‌ ಸಂಸದರ ಸಂಖ್ಯೆ 2ರಿಂದ ಆರಕ್ಕೆ ಹೆಚ್ಚಿಸಿಕೊಳ್ಳುವ ಆಲೋಚನೆಯಲ್ಲಿರುವ ದೇವೇಗೌಡರು ಹಾಸನ ಮತ್ತು ಮಂಡ್ಯದಲ್ಲಿ ಸುಲಭ ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ. ಹಾಗಾಗಿ ಹಾಸನಕ್ಕೆ ಮೊಮ್ಮಗನನ್ನು ನಿಲ್ಲಿಸಿ ಬೆಂಗಳೂರು ಉತ್ತರದ ಮೂಲಕ ಮೂರನೇ ಸ್ಥಾನ ಗಿಟ್ಟಿಸಿಕೊಳ್ಳುವ ತಂತ್ರ ಹೂಡಿದ್ದಾರೆ. ಇನ್ನು ಕಾಂಗ್ರೆಸ್‌ ಜತೆಗಿನ ಮೈತ್ರಿ ಫಲವಾಗಿ ಇನ್ನಷ್ಟು ಸ್ಥಾನ ಗೆಲ್ಲುವ ತಂತ್ರಗಾರಿಕೆ ಅವರದು.

ಕಳೆದ 8 ವರ್ಷಗಳಿಂದ ಪ್ರಜ್ವಲ್‌ ಜಿಲ್ಲೆಯಲ್ಲಿ ಓಡಾಡಿ ಪಕ್ಷ ಸಂಘಟಿಸುವ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಹಾಸನವನ್ನು ಪ್ರಜ್ವಲ್‌ಗೆ ಬಿಟ್ಟುಕೊಡುತ್ತೇನೆ.
-ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು, ''ಜೆಡಿಎಸ್‌-ಕಾಂಗ್ರೆಸ್‌ ಸೀಟು ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಲಿವೆ. ಸೀಟು ಹಂಚಿಕೆ ಪ್ರಕ್ರಿಯೆ ಚರ್ಚೆ ಆಗಬೇಕಿದೆ. ಮಾರ್ಚ್‌ ಮೊದಲ ವಾರದಲ್ಲಿ ಏಳೆಂಟು ಜಿಲ್ಲೆಗಳಲ್ಲಿ ಪ್ರವಾಸ ಮಾಡುವೆ. ಮೈತ್ರಿ ಮಾಡಿಕೊಂಡಿದ್ದೇವೆಂದು ಪೂರ್ತಿ ಸಲಿಗೆ ಬಿಡುವುದಿಲ್ಲ. ಪ್ರಾದೇಶಿಕ ಪಕ್ಷದ ಉಳಿವು ಮುಖ್ಯ. ಚರ್ಚೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕಿದೆ'' ಎಂದು ಸ್ಪಷ್ಟಪಡಿಸಿದರು.

''ಫೆಬ್ರವರಿ ಇಲ್ಲವೇ ಮಾರ್ಚಿ ಮೊದಲ ವಾರದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿವೆ. ನಾವು ಮೈಮರೆತು ಕೂತಿಲ್ಲ. ಕಾಂಗ್ರೆಸ್‌ ಜತೆ ಚುನಾವಣೆಗೆ ಹೋದರೆ ಅನುಕೂಲ ಎಂಬುದು ನನ್ನ ಭಾವನೆ, ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಲೆಕ್ಕಾಚಾರ ಮಾಡಿಯೇ ತೀರ್ಮಾನ ಕೈಗೊಳ್ಳುವೆ. ಎಲ್ಲಿಂದ ಸ್ಪರ್ಧಿಸಬೇಕು ಎಂಬುದು ಇನ್ನೂ ತೀರ್ಮಾನ ಆಗಿಲ್ಲ'' ಎಂದು ದೇವೇಗೌಡರು ಹೇಳಿದರು.

ಎಚ್‌ಡಿಡಿ ವರ್ಸಸ್‌ ಡಿವಿಎಸ್‌

ಕ್ಷೇತ್ರ ಮರು ವಿಂಗಡಣೆ ಬಳಿಕ ಒಕ್ಕಲಿಗ ಸಮುದಾಯದ ಪ್ರಾಬಲ್ಯ ಹೊಂದಿರುವ ಬೆಂಗಳೂರು ಉತ್ತರ ಕ್ಷೇತ್ರವನ್ನು ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಿಜೆಪಿ ಸಂಸದರೇ ಪ್ರತಿನಿಧಿಸಿದ್ದಾರೆ. ಡಿ.ಬಿ.ಚಂದ್ರೇಗೌಡರ ಬಳಿಕ ಈಗ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸಂಸದ. ಗೌಡರ ಸ್ಪರ್ಧೆ ಖಚಿತವಾದರೆ ಇಲ್ಲಿ ಡಿವಿಎಸ್‌-ಎಚ್‌ಡಿಡಿ ನಡುವೆ ಪೈಪೋಟಿ ಏರ್ಪಡಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ