ಆ್ಯಪ್ನಗರ

ಭಾರತ-ಪಾಕ್ ಮಧ್ಯೆ ಮುಂದುವರಿದ ರಾಜತಾಂತ್ರಿಕ ಜಟಾಪಟಿ

ಭಾರತ ಮತ್ತು ಪಾಕಿಸ್ತಾನದ ರಾಯಭಾರ ಕಚೇರಿ ಮತ್ತು ಅಧಿಕಾರಿಗಳ ಕುರಿತಾದ ಜಟಾಪಟಿ ಮತ್ತೆ ಮುಂದುವರಿದಿದೆ. ಪಾಕ್‌ ರಾಯಭಾರಿಗಳು ಮತ್ತು ರಾಜತಾಂತ್ರಿಕ ಅಧಿಕಾರಿಗಳಿಗೆ ಭಾರತ ಕಿರುಕುಳ ನೀಡುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದ್ದರೆ, ಇಸ್ಲಾಮಾಬಾದ್‌ನಲ್ಲಿ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪಾಕಿಸ್ತಾನ ತೊಂದರೆ ಉಂಟುಮಾಡುತ್ತಿರುವುದು ಉಭಯ ದೇಶಗಳ ಮಧ್ಯೆ ರಾಜತಾಂತ್ರಿಕ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ.

Vijaya Karnataka Web 30 Jun 2018, 4:50 pm
ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನದ ರಾಯಭಾರ ಕಚೇರಿ ಮತ್ತು ಅಧಿಕಾರಿಗಳ ಕುರಿತಾದ ಜಟಾಪಟಿ ಮತ್ತೆ ಮುಂದುವರಿದಿದೆ. ಪಾಕ್‌ ರಾಯಭಾರಿಗಳು ಮತ್ತು ರಾಜತಾಂತ್ರಿಕ ಅಧಿಕಾರಿಗಳಿಗೆ ಭಾರತ ಕಿರುಕುಳ ನೀಡುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದ್ದರೆ, ಇಸ್ಲಾಮಾಬಾದ್‌ನಲ್ಲಿ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪಾಕಿಸ್ತಾನ ತೊಂದರೆ ಉಂಟುಮಾಡುತ್ತಿರುವುದು ಉಭಯ ದೇಶಗಳ ಮಧ್ಯೆ ರಾಜತಾಂತ್ರಿಕ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ.
Vijaya Karnataka Web Ind PAK 1


ಪಾಕಿಸ್ತಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತೀಯ ರಾಯಭಾರಿಗಳು ಮತ್ತು ಅಧಿಕಾರಿಗಳಿಗೆ ನಿರ್ಭೀತಿಯಿಂದ ಕೆಲಸ ಮಾಡಲು ಪಾಕ್ ಅನುವು ಮಾಡಿಕೊಡುತ್ತಿಲ್ಲ. ಈ ಕುರಿತಾದ ನಿಯಮಗಳನ್ನು ಪಾಕ್ ಪಾಲಿಸುತ್ತಿಲ್ಲ.

ಇದಕ್ಕೆ ಪೂರಕವಾಗಿ ಕೆಲವೊಂದು ಪ್ರಕರಣಗಳು ಕೂಡ ನಡೆದಿದ್ದು, ಉಭಯ ರಾಷ್ಟ್ರಗಳ ಮಧ್ಯೆ ಸಂಘರ್ಷ ಸೃಷ್ಟಿಯಾಗಿದೆ. ದೆಹಲಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಾಕ್‌ನ ಮಹಿಳಾ ರಾಯಭಾರಿಯ ಹ್ಯಾಂಡ್‌ಬ್ಯಾಗ್ ಕಳ್ಳತನ ಮತ್ತು ಇಸ್ಲಾಮಾಬಾದ್‌ ಏರ್‌ಪೋರ್ಟ್‌ನಲ್ಲಿ ಭಾರತೀಯ ಅಧಿಕಾರಿಗೆ ಕಿರುಕುಳದಂತಹ ಹಲವು ಪ್ರಕರಣ ವರದಿಯಾಗಿದ್ದು, ಸಮಸ್ಯೆಯಾಗಿದೆ.

ಅಲ್ಲದೆ ಭಾರತೀಯ ಹೈಕಮೀಷನರ್ ಅಜಯ್ ಬಿಸಾರಿಯಾಗೆ ಪಾಕ್‌ನ ಗುರುದ್ವಾರ ಪಂಜಾ ಸಾಹಿಬ್‌ಗೆ ಪ್ರವೇಶ ನಿರಾಕರಿಸಿದ್ದು ಮತ್ತು ಸಿಖ್ ಯಾತ್ರಾರ್ಥಿಗಳನ್ನು ಭೇಟಿ ಮಾಡಲು ಅವಕಾಶ ನೀಡದೇ ಇದ್ದದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ