ಆ್ಯಪ್ನಗರ

ಜಾಧವ್‌ ಪ್ರಕರಣ ತೀರ್ಪಿಗೆ ಎಲ್ಲಡೆ ಸಂತಸ: ಯಾರು ಏನು ಪ್ರತಿಕ್ರಿಯೆ ನೀಡಿದ್ರು ಗೊತ್ತೇ?

ಕುಲಭೂಷಣ್‌ ಜಾಧವ್‌ ಪ್ರಕರಣದಲ್ಲಿ ಭಾರತದ ಪರ ಅಂತಾರಾಷ್ಟ್ರೀಯ ನ್ಯಾಯಾಲಯ ನೀಡಿರುವ ತೀರ್ಪಿಗೆ ದೇಶಾದ್ಯಂತ ಸಂತಸ ವ್ಯಕ್ತವಾಗಿದೆ. ಮುಂಬಯಿ ಸೇರಿದಂತೆ ಅನೇಕ ಭಾಗದಲ್ಲಿ ಸಂಭ್ರಮಾಚರಣೆ ನಡೆದಿದೆ. ಪಕ್ಷಬೇಧ ಮರೆತು ಎಲ್ಲಾ ರಾಜಕೀಯ ನಾಯಕರು ತೀರ್ಪನ್ನು ಸ್ವಾಗತಿಸಿದ್ದಾರೆ.

Vijaya Karnataka Web 17 Jul 2019, 7:48 pm
Vijaya Karnataka Web bhushan
ಹೊಸದಿಲ್ಲಿ: ಭಾರತ ನೌಕಾಪಡೆ ಮಾಜಿ ಅಧಿಕಾರಿ ಕುಲಭೂಷಣ್‌ ಜಾಧವ್‌ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿಗೆ ದೇಶಾದ್ಯಂತ ಸಂತಸ ವ್ಯಕ್ತವಾಗಿದೆ.

ದೇಶದ ವಿವಿಧ ರಾಜಕೀಯ ನಾಯಕರು ಸೇರಿದಂತೆ ಸಾಮಾನ್ಯ ನಾಗರಿಕರೂ, ಜಾಧವ್‌ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ನ್ಯಾಯಾಲಯ ನೀಡಿರುವ ತೀರ್ಪನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.



ಜಾಧವ್‌ ಅವರಿಗೆ ಕೌನ್ಸಿಲರ್‌ ಆಕ್ಸಸ್‌ ನೀಡಬೇಕು. ಮಿಲಿಟರಿ ಕೋರ್ಟ್‌ನಲ್ಲಿ ನೀಡಿರುವ ಮರಣದಂಡನೆ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌, ಲೇಖಕ ಜಾವೇದ್‌ ಅಖ್ತರ್‌,ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸೇರಿದಂತೆ ಅನೇಕ ಮಂದಿ ತೀರ್ಪನ್ನು ಸ್ವಾಗತಿಸಿದ್ದಾರೆ.


ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಇದು ದೇಶಕ್ಕೆ ದೊರೆತ ಬಹುದೊಡ್ಡ ಜಯ ಎಂದು ಟ್ವಿಟರ್‌ ಮೂಲಕ ತಿಳಿಸಿದ್ದಾರೆ.


ಜಾಧವ್‌ ಕುಟುಂಬ ಸೇರಿದಂತೆ ಸ್ನೇಹಿತ ವಲಯ ಕೋರ್ಟ್‌ ತೀರ್ಪನ್ನು ಸ್ವಾಗತಿಸಿದ್ದು, ಮುಂಬಯಿನಲ್ಲಿ ಬಲೂನ್‌ಗಳನ್ನು ಆಗಸಕ್ಕೆ ಬಿಡುವ ಮೂಲಕ ಸಂಭ್ರಮಿಸಿದ್ದಾರೆ.


ಜಾಧವ್‌ ಪ್ರಕರಣದ ತೀರ್ಪಿಗೆ ಸಂಬಂಧಿಸಿದಂತೆ ಕುಟುಂಬ ವರ್ಗ ಹಾಗೂ ಸ್ನೇಹಿತರು ದೇವಾಲಯಗಳಲ್ಲಿ ವಿಶೇಷ ಪೂಜೆ ಪುರಸ್ಕಾರಗಳನ್ನೂ ಮಾಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ