ಆ್ಯಪ್ನಗರ

ಪ್ರಧಾನಿ ಮೋದಿ ಭಾಷಣದಿಂದ ದೇಶಕ್ಕೆ ನಿರಾಶೆ: ಕಾಂಗ್ರೆಸ್ ಆರೋಪ!

ಪ್ರಧಾನಿ ಮೋದಿ ಅವರ ಇಂದಿನ ಭಾಷಣವನ್ನು ಟೀಕಿಸಿರುವ ಪ್ರತಿಪಕ್ಷ ಕಾಂಗ್ರೆಸ್, ದೇಶ ಪ್ರಧಾನಿ ಮೋದಿ ಅವರ ಭಾಷಣದಿಂದ ನಿರಾಶವಾಗಿದೆ ಎಂದು ಹೇಳಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸುರ್ಜೆವಾಲಾ, ಪ್ರಧಾನಿ ಮೋದಿ ಅವರ ಇಂದಿನ ಭಾಷಣ ಮಾಧ್ಯಮ ಪ್ರಚಾರದಂತಿತ್ತು ಎಂದು ಕಿಡಿಕಾರಿದ್ದಾರೆ.

Vijaya Karnataka Web 12 May 2020, 11:58 pm
ನವದೆಹಲಿ: ಪ್ರಧಾನಿ ಮೋದಿ ಅವರ ಇಂದಿನ ಭಾಷಣವನ್ನು ಟೀಕಿಸಿರುವ ಪ್ರತಿಪಕ್ಷ ಕಾಂಗ್ರೆಸ್, ದೇಶ ಪ್ರಧಾನಿ ಮೋದಿ ಅವರ ಭಾಷಣದಿಂದ ನಿರಾಶವಾಗಿದೆ ಎಂದು ಹೇಳಿದೆ.
Vijaya Karnataka Web Randeep Surjewala
ಸಂಗ್ರಹ ಚಿತ್ರ


ಪ್ರಮುಖವಾಗಿ ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದು ಮತ್ತು ಅವರಿಗೆ ಸೂಕ್ತ ಆರ್ಥಿಕ ನೆರವು ನೀಡುವ ಕುರಿತು ಪ್ರಧಾನಿ ಮೋದಿ ಭಾಷಣದಲ್ಲಿ ಸೂಕ್ತ ಉಲ್ಲೇಖವಿರಲಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸುರ್ಜೆವಾಲಾ, ಪ್ರಧಾನಿ ಮೋದಿ ಅವರ ಇಂದಿನ ಭಾಷಣ ಮಾಧ್ಯಮ ಪ್ರಚಾರದಂತಿತ್ತು ಎಂದು ಕಿಡಿಕಾರಿದ್ದಾರೆ.

ಆತ್ಮ ನಿರ್ಭರ ಭಾರತ ಸಂಕಲ್ಪ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ!

ರಸ್ತೆಗಳಲ್ಲಿರುವ ಲಕ್ಷಾಂತರ ಕಾರ್ಮಿಕರ ನೆರವಿಗೆ ಬರುವ ಕುರಿತು ಸೂಕ್ತ ಮಾಹಿತಿಯೇ ನೀಡದ ಪ್ರಧಾನಿ, ಎಂದಿನಂತೆ ಮಾಮೂಲಿ ಭಾಷಣ ಮಾಡಿದ್ದಾರೆ ಎಂದು ಸುರ್ಜೆವಾಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ದೇಶದ ಆರ್ಥಿಕ ಸ್ಥಿರತೆಗಾಗಿ ಪ್ರಧಾನಿ ಮೋದಿ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿರುವ ನಡೆಯನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ವಾಗತಿಸಿದ್ದಾರೆ.

ಆತ್ಮಬಲದಿಂದ ಆರ್ಥಿಕತೆವರೆಗೆ..! ಪ್ರಧಾನಿ ಮೋದಿ ಭಾಷಣದ Top 10 ಹೈಲೈಟ್ಸ್‌..

ಆರ್ಥಿಕ ಪ್ಯಾಕೇಜ್ ಘೋಷಣೆಯನ್ನು ಸರಿಯಾದ ಮಾರ್ಗ ಎಂದು ಬಣ್ಣಿಸಿರುವ ಅಶೋಕ್ ಗೆಹ್ಲೋಟ್, ಆರ್ಥಿಕ ಸ್ಥಿರತೆಗಾಗಿ ಇದು ಅತ್ಯಂತ ಅವಶ್ಯ ಎಂದು ಹೇಳಿದ್ದಾರೆ.


ವಲಸೆ ಕಾರ್ಮಿಕರ ಕುರಿತು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದು, ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಮನೆಗೆ ಸೇರಿಸುವುದು ಮತ್ತು ಅವರಿಗೆ ಆರ್ಥಿಕ ನೆರವು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ