ಆ್ಯಪ್ನಗರ

ಪಾಕಿಸ್ತಾನವೇ ಭಯೋತ್ಪಾದನೆಯ ಕೇಂದ್ರ ಬಿಂದು: ಭಾರತ

ಉಗ್ರರ ಪಾಲಿಗೆ ಪಾಕಿಸ್ತಾನ ಅಂದಿಗೂ, ಇಂದಿಗೂ ಸ್ವರ್ಗವಾಗಿದೆ. ಭಯೋತ್ಪಾದನೆಗೆ ಪಾಕಿಸ್ತಾನವೇ ಮೂಲವಾಗಿದೆ ಎಂದು ಭಾರತ ತಿಳಿಸಿದೆ.

Vijaya Karnataka Web 19 Feb 2019, 8:31 pm
ಹೊಸದಿಲ್ಲಿ: ಭಯೋತ್ಪಾದನೆ ವಿಚಾರದಲ್ಲಿ ಪಾಕಿಸ್ತಾನ ಎಲ್ಲರನ್ನೂ ಹಾದಿ ತಪ್ಪಿಸುತ್ತಿದೆ. ಪಾಕಿಸ್ತಾನವನ್ನು ಯಾವುದೇ ಕಾರಣಕ್ಕೂ ನಂಬಲು ಸಾಧ್ಯವಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.
Vijaya Karnataka Web ಪುಲ್ವಾಮಾ
ಪುಲ್ವಾಮಾ


ಭಾರತ ಯುದ್ಧ ಮಾಡಿದರೆ ತಕ್ಕ ತಿರುಗೇಟು ನೀಡುತ್ತೇನೆ ಎಂದು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿಕಗೆ ಭಾರತ ತಿರುಗೇಟು ನೀಡಿದೆ.

ಉಗ್ರರ ಪಾಲಿಗೆ ಪಾಕಿಸ್ತಾನ ಅಂದಿಗೂ, ಇಂದಿಗೂ ಸ್ವರ್ಗವಾಗಿದೆ. ಭಯೋತ್ಪಾದನೆಗೆ ಪಾಕಿಸ್ತಾನವೇ ಮೂಲವಾಗಿದೆ ಎಂದು ಭಾರತ ತಿಳಿಸಿದೆ.

ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಇಮ್ರಾನ್ ಖಾನ್‌ ನೀಡಿದ ಹೇಳಿಕೆಯನ್ನು ಭಾರತ ಸಂಪೂರ್ಣ ಅಲ್ಲಗಳೆದಿದೆ.

ಭಯೋತ್ಪಾದನೆ ಹತ್ತಿಕ್ಕುವ ವಿಷಯದಲ್ಲಿ ಪಾಕಿಸ್ತಾನ ಹೇಳುವುದು ಒಂದು ಮಾಡುವುದು ಒಂದು. ಅಂತಾಷ್ಟ್ರೀಯ ಸಮುದಾಯವನ್ನು ದಾರಿ ತಪ್ಪಿಸುತ್ತಿದೆ ಎಂದು ಭಾರತ ತಿಳಿಸಿದೆ.

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಪ್ರಚಾರ ಪಡೆಯಲು ಹೇಳಿದಂತಿದೆ ಎಂದು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದರು.

ಇದು ನಿಜಕ್ಕೂ ವಿಷಾದಕರ ವಿಷಯ ಎಂದು ಭಾರತ ವಿದೇಶಾಂಗ ವ್ಯವಹಾರ ಸಚಿವಾಲಯ ತಿಳಿಸಿದೆ.

ಇಮ್ರಾನ್ ಖಾನ್‌ ಹೇಳಿಕೆಯನ್ನು ನಾವು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ. ಭಾರತದ ಪ್ರಜಾಪ್ರಭುತ್ವ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ನಮ್ಮ ಸಂವಿಧಾನ, ಪ್ರಜಾಪ್ರಭುತ್ವ, ವ್ಯವಸ್ಥೆ ಮತ್ತು ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಲು ಭಾರತಕ್ಕೆ ಸಾಧ್ಯವೇ ಇಲ್ಲ ಎಂದು ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಾದರೂ ಪಾಕ್‌ ಪ್ರೇರಿತ ಉಗ್ರ ಚಟುವಟಿಕೆಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸೂಕ್ತ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ತಿಳಿಸಿದೆ.

ಈ ಹಿಂದೆ ಮುಂಬೈ ಮೇಲೆ ದಾಳಿ ನಡೆದಾಗಲೂ ಪಾಕಿಸ್ತಾನಕ್ಕೆ ಸಾಕ್ಷ್ಯಗಳನ್ನು ನೀಡಲಾಗಿತ್ತು. ಆದರೆ ಪಾಕಿಸ್ತಾನ ಇದುವರೆಗೂ ಯಾವುದೇ ಕ್ರಮವನ್ನೂ ಕೈಗೊಳ್ಳಲಿಲ್ಲ ಎಂದು ಭಾರತ ದೂರಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ