ಆ್ಯಪ್ನಗರ

ಕೊರೊನಾ ಪೀಡಿತ ಪ್ರದೇಶದಲ್ಲಿ ವೈದ್ಯಕೀಯ ಚಿಕಿತ್ಸೆ ನೆರವು: ಭಾರತ ಸ್ಪಷ್ಟನೆ; ಧನ್ಯವಾದ ಅರ್ಪಿಸಿದ ಚೀನಾ

ಕೊರೊನಾ ವೈರಾಣು ಪರಿಸ್ಥಿತಿ ಬಗ್ಗೆ ನಿಗಾ ವಹಿಸಲು ಸರಕಾರ ಸಮಿತಿಯೊಂದನ್ನು ರಚಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಇತರ ರಾಜ್ಯಗಳೊಂದಿಗೆ ಆರೋಗ್ಯ ಸಚಿವಾಲಯ ವಿಡಿಯೋ ಸಂವಾದಗಳನ್ನು ನಡೆಸುತ್ತಿದೆ.

Vijaya Karnataka Web 10 Feb 2020, 9:58 pm
ಹೊಸದಿಲ್ಲಿ: ಕೊರೊನಾ ವೈರಾಣು ಬೆದರಿಕೆಯನ್ನು ಸೂಕ್ತವಾಗಿ ನಿಭಾಯಿಸಲು ದೇಶ ಸಂಪೂರ್ಣ ಸಜ್ಜುಗೊಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಲೋಕಸಭೆಗೆ ತಿಳಿಸಿದ್ದಾರೆ.
Vijaya Karnataka Web ಕೊರೊನಾ
ಕೊರೊನಾ


ಈ ನಡುವೆ ಕೊರೊನಾದಿಂದ ತೀವ್ರ ತೊಂದರೆಗೆ ಸಿಲುಕಿರುವ ಚೀನಾದಲ್ಲಿ ವೈದ್ಯಕೀಯ ಚಿಕಿತ್ಸೆ ಒದಗಿಸಲು ಭಾರತ ಎಲ್ಲ ರೀತಿಯ ನೆರವು ನೀಡುತ್ತದೆ ಎಂದು ಸ್ಪಷ್ಟಪಡಿಸಿದೆ.

ವಿಷಯ ಕುರಿತಂತೆ ಮಾತನಾಡಿರುವ ಅವರು, ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಪರಿಸ್ಥಿತಿಯ ಮೇಲೆ ಸರ್ಕಾರ ನಿಕಟ ನಿಗಾ ಇರಿಸಿದೆ ಎಂದು ಹೇಳಿದರು.

ಕೊರೊನಾ ವೈರಾಣು ಪರಿಸ್ಥಿತಿ ಬಗ್ಗೆ ನಿಗಾ ವಹಿಸಲು ಸರಕಾರ ಸಮಿತಿಯೊಂದನ್ನು ರಚಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಇತರ ರಾಜ್ಯಗಳೊಂದಿಗೆ ಆರೋಗ್ಯ ಸಚಿವಾಲಯ ವಿಡಿಯೋ ಸಂವಾದಗಳನ್ನು ನಡೆಸುತ್ತಿದೆ ಎಂದು ಅವರು ವಿವರಿಸಿದರು.

ಕೊರೋನಾ ವೈರಾಣು ವಿರುದ್ಧ ತಾನು ಕೈಗೊಂಡಿರುವ ಹೋರಾಟಕ್ಕೆ ಭಾರತ ಬೆಂಬಲ ವ್ಯಕ್ತಪಡಿಸಿರುವುದಕ್ಕೆ ಚೈನಾ ಧನ್ಯವಾದದ ಜತೆಗೆ ಪ್ರಶಂಸೆ ವ್ಯಕ್ತಪಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ