ಆ್ಯಪ್ನಗರ

ಕುಲಭೂಷಣ್‌ ಜಾಧವ್‌ ಬಿಡುಗಡೆ ಮಾಡಿ: ಪಾಕಿಸ್ತಾನಕ್ಕೆ ಜೈಶಂಕರ್‌ ಆಗ್ರಹ

ಅಂತಾರಾಷ್ಟ್ರೀಯ ನ್ಯಾಯಾಲಯ ಕಾನೂನನ್ನು ಎತ್ತಿ ಹಿಡಿದಿರುವುದರಿಂದ ಪಾಕಿಸ್ತಾನ, ಕುಲಭೂಷಣ್ ಜಾದವ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಜೈಶಂಕರ್ ಮನವಿ ಮಾಡಿದರು.

Vijaya Karnataka Web 18 Jul 2019, 8:30 pm
ಹೊಸದಿಲ್ಲಿ: ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಭಾರತೀಯ ಕುಲಭೂಷಣ್ ಜಾಧವ್ ಅವರನ್ನು ತಕ್ಷಣ ಬಿಡುಗಡೆ ಮಾಡಿ ಭಾರತಕ್ಕೆ ಕಳುಹಿಸಬೇಕೆಂದು ಪಾಕಿಸ್ತಾನಕ್ಕೆ ಭಾರತ ಒತ್ತಾಯಿಸಿದೆ.
Vijaya Karnataka Web ಎಸ್‌ ಜೈಶಂಕರ್‌
ಎಸ್‌ ಜೈಶಂಕರ್‌


ರಾಜ್ಯಸಭೆಯಲ್ಲಿ ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಹೇಳಿಕೆ ನೀಡಿದರು.

ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪು ಕೇವಲ ಭಾರತ ಮಾತ್ರವಲ್ಲ, ಅಂತಾರಾಷ್ಟ್ರೀಯ ಕಾನೂನುಗಳು ಮತ್ತು ಒಪ್ಪಂದಗಳಿಗೆ ಗೌರವ ಕೊಡುವ ಎಲ್ಲರಿಗೂ ದೊರೆತ ಸಮರ್ಥನೆಯಾಗಿದೆ ಎಂದು ಹೇಳಿದರು.

ಜಾಧವ್ ವಿರುದ್ಧ ಮಾಡಲಾದ ಎಲ್ಲ ಆರೋಪಗಳು ಸುಳ್ಳು. ಅವರು ನಿರಪರಾಧಿಯಾಗಿದ್ದಾರೆ. ಯಾವುದೇ ಕಾನೂನಿನ ಪ್ರಾತಿನಿಧಿತ್ವ ಇಲ್ಲದೆ ಅವರನ್ನು ಬಲವಂತವಾಗಿ ತಪ್ಪೊಪ್ಪಿಕೊಳ್ಳುವಂತೆ ಮಾಡಲಾಗಿದೆ ಎಂದು ಆರೋಪಿಸಿದರು.

ಪಾಕಿಸ್ತಾನ ಕುಲ್‌ಭೂಷಣ್ ಜಾಧವ್ ಜತೆ ಸಂಪರ್ಕ ಹೊಂದಲು ಭಾರತಕ್ಕೆ ಅವಕಾಶ ಮಾಡಿಕೊಡದ ಮೂಲಕ ವಿಯೆನ್ನಾ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ನ್ಯಾಯಾಲಯ ತೀರ್ಪಿನಲ್ಲಿ ತಿಳಿಸಿದೆ ಎಂದು ಸಚಿವ ಜೈಶಂಕರ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ