ಆ್ಯಪ್ನಗರ

ಹವಾಮಾನ ಬದಲಾವಣೆ ನಿಯಂತ್ರಣಕ್ಕೆ ಭಾರತ ಬದ್ಧ

ಭೂಮಿಯನ್ನು ಮಾತೆಯೆಂದು ಗೌರವಿಸುವ ಭಾರತವು ಜಾಗತಿಕ ಹವಾಮಾನ ಬದಲಾವಣೆಯ ದುಷ್ಪರಿಣಾಮಗಳ ನಿಯಂತ್ರಣಕ್ಕೆ ಬದ್ಧವಾಗಿದೆ ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್‌ ಹೇಳಿದ್ದಾರೆ.

Vijaya Karnataka 28 Sep 2018, 9:01 am
ವಿಶ್ವಸಂಸ್ಥೆ: ಭೂಮಿಯನ್ನು ಮಾತೆಯೆಂದು ಗೌರವಿಸುವ ಭಾರತವು ಜಾಗತಿಕ ಹವಾಮಾನ ಬದಲಾವಣೆಯ ದುಷ್ಪರಿಣಾಮಗಳ ನಿಯಂತ್ರಣಕ್ಕೆ ಬದ್ಧವಾಗಿದೆ ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್‌ ಹೇಳಿದ್ದಾರೆ. ಅಲ್ಲದೇ ಈ ವಿಚಾರದಲ್ಲಿ ವಿಶ್ವದ ಸಾರಥ್ಯ ವಹಿಸಲು ಭಾರತ ಸಿದ್ಧವಾಗಿದೆ ಎಂದಿದ್ದಾರೆ.
Vijaya Karnataka Web susu1_1464861642


ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 73ನೇ ಅಧಿವೇಶನದ ವೇಳೆ ವಿಶ್ವಸಂಸ್ಥೆ ಮಹಾ ಕಾರ‍್ಯದರ್ಶಿ ಆ್ಯಂಟೋನಿಯೊ ಗುಟರೆಸ್‌ ಅವರು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಸುಷ್ಮಾ ಅವರು ಹವಾಮಾನ ಬದಲಾವಣೆ ನಿಯಂತ್ರಣಕ್ಕೆ ಭಾರತ ಕೈಗೊಂಡಿರುವ ಉಪಕ್ರಮಗಳ ಕುರಿತು ಮಾಹಿತಿ ನೀಡಿದರು.

ಜಾಗತಿಕ ತಾಪಮಾನ ಹೆಚ್ಚಿಸುವ ಇಂಧನಗಳ ಹಾಗೂ ಇಂಗಾಲಾಮ್ಲ ಹೊರಸೂಸುವ ವಾಹನಗಳ ಬಳಕೆ ಕಡಿಮೆ ಮಾಡುವುದು ಸೇರಿದಂತೆ ಅನೇಕ ಕ್ರಮಗಳನ್ನು ಜಾರಿಗೆ ತರುವಲ್ಲಿ ಭಾರತ ಬದ್ಧತೆ ಪ್ರದರ್ಶಿಸಿದೆ. ನವೀಕರಿಸಬಹುದಾದ ಸೌರಶಕ್ತಿ ಉತ್ಪಾದನೆಯಲ್ಲಿ ಭಾರತ 5ನೇ ಸ್ಥಾನದಲ್ಲಿದೆ. 2022ರ ಹೊತ್ತಿಗೆ 175 ಗಿಗಾವ್ಯಾಟ್‌ ಸೌರಶಕ್ತಿ ಹಾಗೂ ಪವನ ಶಕ್ತಿ ಉತ್ಪಾದಿಸುವ ಗುರಿ ಹೊಂದಿದೆ ಎಂದು ಹೇಳಿದರು. ಈ ವೇಳೆ ಅವರು ದೇಶದಲ್ಲಿ 30 ಕೋಟಿ ಎಲ್‌ಇಡಿ ವಿದ್ಯುತ್‌ ದೀಪಗಳನ್ನು ಅಳವಡಿಸಿರುವ ವಿಚಾರವನ್ನೂ ಸಭೆಯ ಗಮನಕ್ಕೆ ತಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ