ಆ್ಯಪ್ನಗರ

#Unite2FightCorona ಕರೆ ನೀಡಿದ ಪ್ರಧಾನಿ: ಜನ ಚಳವಳಿಗೆ ಸೋಲಿಲ್ಲ ಎಂದ ಮೋದಿ!

#Unite2FightCorona ಅಭಿಯಾನಕ್ಕೆ ಕರೆ ನೀಡಿರುವ ಪ್ರಧಾನಿ ಮೋದಿ, ಭಾರತದ ಜನ ಚಳವಳಿಗಳು ಇದುವರೆಗೂ ಸೋಲು ಕಂಡಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಭಾರತದ ಹೋರಾಟಕ್ಕೆ ಜಯ ಶತಸಿದ್ಧ ಎಂದು ಮೋದಿ ಭರವಸೆ ವ್ಯಕ್ತಪಡಿಸಿದ್ದಾರೆ.

Vijaya Karnataka Web 8 Oct 2020, 9:51 am
ಹೊಸದಿಲ್ಲಿ: ಮಾರಕ ಕೊರೊನಾ ವೈರಸ್ ವಿರುದ್ಧದ ಭಾರತದ ಹೋರಾಟವನ್ನು ಜನಾಂದೋಲನ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ, ಭಾರತದ ಜನ ಚಳವಳಿಗಳು ಇದುವರೆಗೂ ಸೋಲು ಕಂಡಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
Vijaya Karnataka Web Modi PM Neww
ಸಂಗ್ರಹ ಚಿತ್ರ


#Unite2FightCorona ಅಭಿಯಾನಕ್ಕೆ ಕರೆ ನೀಡಿರುವ ಪ್ರಧಾನಿ ಮೋದಿ, ಈ ಹಿಂದಿಗಿಂತಲೂ ಹೆಚ್ಚಿನ ಒಗ್ಗಟ್ಟು ಪ್ರದರ್ಶನದ ಮೂಲಕ ಮಾರಕ ವೈರಾಣುವನ್ನು ಸೋಲಿಸುವಂತೆ ಮನವಿ ಮಾಡಿದ್ಧಾರೆ.

ಲಸಿಕೆ ಬರೋವರೆಗೂ.....ಪ್ರಧಾನಿ ಮೋದಿ ನೀಡಿದ ಕೊರೊನಾ ಎಚ್ಚರಿಕೆ ನಿಮಗೂ ಕೇಳಿಸಿತಾ?
ಮಾಸ್ಕ್ ಧಾರಣೆ, ಹ್ಯಾಂಡ್ ಸ್ಯಾನಿಟೈಸರ್‌ಗಳ ಬಳಕೆ ಹಾಗೂ ಸಾಮಾಜಿಕ ಅಂತರ ಕಾಪಾಡುವ ತಮ್ಮ ಜವಾಬ್ದಾರಿಗಳನ್ನು ಜನ ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ ಎಂದು ಪ್ರಧಾನಿ ಮನವಿ ಮಾಡಿದ್ದಾರೆ.

#Unite2FightCorona ಅಭಿಯಾನದ ಮೂಲಕ ಹೆಚ್ಚಿನ ಸಾಮಾಜಿಕ ಜವಾಬ್ದಾರಿಗಳನ್ನು ನಿರ್ವಹಿಸೋಣ. ಕೊರೊನಾ ವಾರಿಯರ್ಸ್‌ಗಳಿಗೆ ನೈತಿಕ ಬೆಂಬಲ ನೀಡುವ ಮೂಲಕ ಕೊರೊನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸೋಣ ಎಂದು ಪ್ರಧಾನಿ ಮೋದಿ ಜನತೆಗೆ ಕರೆ ನೀಡಿದ್ದಾರೆ.'


ಕೋವಿಡ್ ವಿರುದ್ಧದ ಭಾರತದ ಹೋರಾಟ ಜನಾಂದೋಲನವಾಗಿದ್ದು, ಈ ದೇಶದಲ್ಲಿ ಹುಟ್ಟುವ ಯಾವುದೇ ಜನ ಚಳವಳಿ ಇದುವರೆಗೂ ವಿಫಲವಾಗಿಲ್ಲ ಎಂದು ಪ್ರಧಾನಿ ಮೋದಿ ಮಾರ್ಮಿಕವಾಗಿ ಹೇಳಿದರು.

ಕೊರೊನಾ ಹೋರಾಟ ಸರಿಯಾದ ಮಾರ್ಗದಲ್ಲಿ ಸಾಗುತ್ತಿದೆ: ಪ್ರಧಾನಿ ಮನ್ ಕಿ ಬಾತ್!

ಇದೇ ವೇಳೆ ಭಾರತದ ಕೊರೊನಾ ವೈರಸ್ ಗುಣಮುಖಸಂಖ್ಯೆ 57 ಲಕ್ಷಕ್ಕೆ ತಲುಪಿದ್ದು, ಶೇಕಡಾವಾರು ಗುಣಮುಖ ಪ್ರಮಾಣ ಏರುಗತಿಯಲ್ಲಿ ಸಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ