ಆ್ಯಪ್ನಗರ

Vande Bharat Train: ಶುಕ್ರವಾರ ದೇಶದ 3ನೇ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Train: ಈಗಾಗಲೇ ದೇಶದಲ್ಲಿ 2 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ಮೊದಲ ರೈಲು ದಿಲ್ಲಿಯಿಂದ ವೈಷ್ಣೋದೇವಿವರೆಗೆ ಇದ್ದರೆ, ಮತ್ತೊಂದು ರೈಲು ದಿಲ್ಲಿಯಿಂದ ವಾರಣಾಸಿಗೆ ಸಂಚರಿಸುತ್ತಿದೆ. ಇದೀಗ ಮೂರನೆ ರೈಲು ಗಾಂಧಿ ನಗರದಿಂದ ಮುಂಬೈಗೆ ಪ್ರಯಾಣ ಮಾಡಲಿದೆ. ವೇಗ, ಸುರಕ್ಷತೆ ಹಾಗೂ ಅತ್ಯುತ್ತಮ ಸೇವೆಗಳೇ ಈ ರೈಲಿನ ವಿಶೇಷತೆ. ಚೆನ್ನೈನ ಕೋಚ್ ಫ್ಯಾಕ್ಟರಿಯಲ್ಲಿ ಈ ರೈಲುಗಳು ತಯಾರಾಗುತ್ತಿವೆ. ವಂದೇ ಭಾರತ್ ರೈಲು ಗರಿಷ್ಠ 160 ಕಿ. ಮೀ. ವೇಗದಲ್ಲಿ ಸಂಚರಿಸುತ್ತವೆ.

Authored byದಿಲೀಪ್ ಡಿ. ಆರ್. | Vijaya Karnataka Web 29 Sep 2022, 4:09 pm

ಹೈಲೈಟ್ಸ್‌:

  • ರೈಲಿನ ಎಲ್ಲಾ ಕೋಚ್‌ಗಳಲ್ಲೂ ಆಟೋ ಮ್ಯಾಟಿಕ್ ಡೋರ್‌ಗಳು ಇರುತ್ತವೆ
  • ಜಿಪಿಎಸ್ ಆಧಾರಿತ ಆಡಿಯೋ ವಿಶ್ಯುಯಲ್ಸ್ ಪ್ರಯಾಣಿಕ ಮಾಹಿತಿ ವ್ಯವಸ್ಥೆ ಇರುತ್ತದೆ
  • ಉಚಿತ ವೈಫೈ ವ್ಯವಸ್ಥೆ ಇರುತ್ತದೆ. ಸೀಟ್‌ಗಳು ಆರಾಮದಾಯವಾಗಿ ಇರುತ್ತವೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web vande.
ಶುಕ್ರವಾರ ದೇಶದ 3ನೇ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಹೊಸ ದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಲಿದ್ದಾರೆ. ವಂದೇ ಭಾರತ್ ಸರಣಿಯ ಮೂರನೇ ರೈಲು ಇದಾಗಿದ್ದು, ಗಾಂಧೀ ನಗರದಿಂದ ಮುಂಬೈಗೆ ಸಂಚರಿಸಲಿದೆ. ದೇಶೀಯ ನಿರ್ಮಿತ ವಂದೇ ಭಾರತ್ ರೈಲಿನ 3ನೇ ಆವೃತ್ತಿ ಇದಾಗಿದ್ದು, ಮೊದಲ 2 ರೈಲುಗಳಿಗಿಂತಾ ವಿನೂತನ ಹಾಗೂ ಸುಧಾರಿತ ತಂತ್ರಜ್ಞಾನ ಅಳವಡಿಸಲಾಗಿದೆ.
ಫೆಬ್ರುವರಿ 15, 2019ರಂದು ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಹೊಸ ದಿಲ್ಲಿ - ಕಾನ್ಪುರ - ಅಲಹಾಬಾದ್ - ವಾರಣಾಸಿ ಮಾರ್ಗದಲ್ಲಿ ಈ ರೈಲು ಸಂಚರಿಸುತ್ತಿದೆ. ಮೇಕ್ ಇನ್ ಇಂಡಿಯಾ ಘೋಷವಾಕ್ಯದಡಿ ಈ ಸ್ವದೇಶಿ ತಂತ್ರಜ್ಞಾನದ ರೈಲು ನಿರ್ಮಾಣ ಯೋಜನೆ ಚಾಲನೆಯಲ್ಲಿದೆ.

ಮುಂದಿನ ವರ್ಷ ಬೆಂಗಳೂರು - ಹುಬ್ಬಳ್ಳಿ ನಡುವೆ ವಂದೇ ಭಾರತ್ ಹೈಸ್ಪೀಡ್ ಎಕ್ಸ್ ಪ್ರೆಸ್ ರೈಲು
ಆಗಸ್‌ 15, 2021ರಲ್ಲಿ ಕೆಂಪು ಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಸ್ವಾತಂತ್ರ್ಯದ 75ನೇ ವರ್ಷಾಚರಣೆ ವೇಳೆ 75 ವಂದೇ ಭಾರತ್ ರೈಲುಗಳು ದೇಶದಲ್ಲಿ ಸಂಚರಿಸಲಿವೆ ಎಂದು ಹೇಳಿದ್ದರು.

ವಂದೇ ಭಾರತ್ ರೈಲಿನ ವಿಶೇಷತೆ ಏನು?

ವೇಗ, ಸುರಕ್ಷತೆ ಹಾಗೂ ಅತ್ಯುತ್ತಮ ಸೇವೆಗಳೇ ಈ ರೈಲಿನ ವಿಶೇಷತೆ. ಚೆನ್ನೈನ ಕೋಚ್ ಫ್ಯಾಕ್ಟರಿಯಲ್ಲಿ ಈ ರೈಲುಗಳು ತಯಾರಾಗುತ್ತಿವೆ. ವಂದೇ ಭಾರತ್ ರೈಲು ಗರಿಷ್ಠ 160 ಕಿ. ಮೀ. ವೇಗದಲ್ಲಿ ಸಂಚರಿಸುತ್ತವೆ. ಶತಾಬ್ದಿಯಷ್ಟೇ ವೇಗವಾಗಿ ಸಂಚರಿಸುತ್ತವಾದರೂ ಪ್ರಯಾಣದ ಅನುಭವ ಚನ್ನಾಗಿರುತ್ತದೆ. ಇತರ ರೈಲುಗಳಿಗೆ ಹೋಲಿಸಿದರೆ ಪ್ರಯಾಣದ ಅವಧಿ ಶೇ. 45ರಷ್ಟು ಕಡಿತ ಆಗುತ್ತದೆ.

ಕರ್ನಾಟಕಕ್ಕೆ 2 ರಿಂದ 3 'ವಂದೇ ಭಾರತ್' ರೈಲಿಗಾಗಿ ಡಿಮ್ಯಾಂಡ್: ಬೆಂಗಳೂರು ಸಂಪರ್ಕಿಸುವ 3 ಮಾರ್ಗಗಳಲ್ಲಿ ಸೆಮಿ ಹೈಸ್ಪೀಡ್ ರೈಲು
ಎಲ್ಲಾ ಕೋಚ್‌ಗಳಲ್ಲೂ ಆಟೋ ಮ್ಯಾಟಿಕ್ ಡೋರ್‌ಗಳು ಇರುತ್ತವೆ. ಜಿಪಿಎಸ್ ಆಧಾರಿತ ಆಡಿಯೋ ವಿಶ್ಯುಯಲ್ಸ್ ಪ್ರಯಾಣಿಕ ಮಾಹಿತಿ ವ್ಯವಸ್ಥೆ ಇರುತ್ತದೆ. ಉಚಿತ ವೈಫೈ ವ್ಯವಸ್ಥೆ ಇರುತ್ತದೆ. ಸೀಟ್‌ಗಳು ಆರಾಮದಾಯವಾಗಿ ಇರುತ್ತವೆ. ಟಾಯ್ಲೆಟ್‌ಗಳು ಬಯೋ ವ್ಯಾಕ್ಯೂಮ್ ತಂತ್ರಜ್ಞಾನ ಆಧಾರಿತವಾಗಿರುತ್ತವೆ. ಪ್ರತಿ ಸೀಟ್‌ಗೂ ಪ್ರತ್ಯೇಕ ಲೈಟ್ ವ್ಯವಸ್ಥೆ ಇರುತ್ತದೆ.

ಪ್ರತಿ ಕೋಚ್‌ನಲ್ಲೂ ಪ್ಯಾಂಟ್ರಿ ಇರುತ್ತದೆ. ಪ್ರಯಾಣಿಕರಿಗೆ ಬಿಸಿ ಬಿಸಿ ಆಹಾರ ವಿತರಣೆ ಮಾಡಲಾಗುತ್ತದೆ. ಬಿಸಿ ಹಾಗೂ ತಂಪು ಪಾನೀಯಗಳು ಲಭ್ಯವಾಗುತ್ತವೆ. ರೈಲು ಸಾಗುವಾಗ ಪ್ರಯಾಣಿಕರಿಗೆ ಹೆಚ್ಚಿನ ಶಬ್ಧ ಕೇಳಿ ಬರೋದಿಲ್ಲ. ಪ್ರತಿಯೊಂದು ವಂದೇ ಭಾರತ್ ರೈಲಿನಲ್ಲಿ 1,128 ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ.


ಎಲ್ಲಕ್ಕಿಂತಾ ಹೆಚ್ಚಾಗಿ ವಂದೇ ಭಾರತ್ ರೈಲಿನಲ್ಲಿ ಅಪಘಾತ ತಡೆ ವ್ಯವಸ್ಥೆಗೆ ತುಂಬಾನೇ ಸುಧಾರಿತ ತಂತ್ರಜ್ಞಾನ ಬಳಸಲಾಗಿದೆ. ಪ್ರತಿ ಕೋಚ್‌ನಲ್ಲೂ ತುರ್ತು ನಿರ್ಗಮನ ಕಿಟಕಿ ಇರುತ್ತದೆ. ಪ್ರತಿ ಕೋಚ್‌ನಲ್ಲೂ ಸಿಸಿಟಿವಿ ಕ್ಯಾಮರಾ ಇರುತ್ತದೆ. ಅಗ್ನಿ ಅನಾಹುತ ತಡೆಯುವ ವ್ಯವಸ್ಥೆ ಕೂಡಾ ಸುಧಾರಿತವಾಗಿದೆ.

ಈಗಾಗಲೇ ದೇಶದಲ್ಲಿ 2 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ಮೊದಲ ರೈಲು ದಿಲ್ಲಿಯಿಂದ ವೈಷ್ಣೋದೇವಿವರೆಗೆ ಇದ್ದರೆ, ಮತ್ತೊಂದು ರೈಲು ದಿಲ್ಲಿಯಿಂದ ವಾರಣಾಸಿಗೆ ಸಂಚರಿಸುತ್ತಿದೆ. ಇದೀಗ ಮೂರನೆ ರೈಲು ಗಾಂಧಿ ನಗರದಿಂದ ಮುಂಬೈಗೆ ಪ್ರಯಾಣ ಮಾಡಲಿದೆ. ಮುಂದಿನ 3 ವರ್ಷಗಳಲ್ಲಿ 400 ವಂದೇ ಭಾರತ್ ರೈಲುಗಳನ್ನು ಓಡಿಸುವ ಉದ್ದೇಶ ಸರ್ಕಾರಕ್ಕಿದೆ.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ