ಆ್ಯಪ್ನಗರ

ಹೀಗಿದೆ ಅಯೋಧ್ಯೆ ಭೂಮಿ ಪೂಜೆ ಭವ್ಯ ವೇದಿಕೆ: ಪ್ರಧಾನಿ ಮೋದಿ ಬರುವಿಕೆಗಾಗಿ ಕಾಯುತ್ತಿದೆ ದೇಶ!

ಭವ್ಯ ರಾಮ ಮಂದಿರದ ಭೂಮಿ ಪೂಜೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭಧ್ಯ ವೇದಿಕೆ ಎಲ್ಲರ ಗಮನ ಸೆಳೆದಿದ್ದು, ವಿಶಾಲ ವೇದಿಕೆಯನ್ನು ಅತ್ಯಂತ ಸುಂದರವಾಗಿ ಸಜ್ಜುಗೊಳಿಸಲಾಗಿದೆ. ಭೂಮಿ ಪೂಜೆಯ ನೇರ ಪ್ರಸಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

Vijaya Karnataka Web 5 Aug 2020, 9:25 am
ಅಯೋಧ್ಯೆ: ಇಂದು(ಬುಧವಾರ) ಪ್ರಧಾನಿ ಮೋದಿ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಭವ್ಯ ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ ಅಯೋಧ್ಯೆಗೆ ಬರುವುದನ್ನು ಇಡೀ ದೇಶ ಕಾತರದಿಂದ ಕಾಯುತ್ತಿದೆ.
Vijaya Karnataka Web Statge
ಭೂಮಿ ಪೂಜೆ ವಿಶಾಲ ವೇದಿಕೆ


ಈ ಮಧ್ಯೆ ಭೂಮಿ ಪೂಜೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭಧ್ಯ ವೇದಿಕೆ ಎಲ್ಲರ ಗಮನ ಸೆಳೆದಿದ್ದು, ವಿಶಾಲ ವೇದಿಕೆಯನ್ನು ಅತ್ಯಂತ ಸುಂದರವಾಗಿ ಸಜ್ಜುಗೊಳಿಸಲಾಗಿದೆ.

LIVE ಅಪ್ಡೇಟ್ಸ್: ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಗೆ ಕ್ಷಣಗಣನೆ

ವಿಶಾಲ ವೇದಿಕೆಯ ಮಧ್ಯಭಾಗದಲ್ಲಿ ಗುಲಾಬಿ ಬಣ್ಣದ ಎಲ್‌ಇಡಿ ಪರದೆಯನ್ನು ಹಾಕಲಾಗಿದ್ದು, ಭೂಮಿ ಪೂಜೆಯ ನೇರ ಪ್ರಸಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ವೇದಿಕೆಯಲ್ಲಿ ಪ್ರಧಾನಿ ಮೋದಿ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಮಹಾಂತ್ ನೃತ್ಯ ಗೋಪಾಲ್‌ದಾಸ್ ಉಪಸ್ಥಿತರಿಲಿದ್ದಾರೆ.

ವಾಷಿಂಗ್ಟನ್ ಡಿಸಿಯಲ್ಲಿ ಸೇರಿದ ಅನಿವಾಸಿ ಭಾರತೀಯರು: ಸಪ್ತ ಸಾಗರದಾಚೆ ಭೂಮಿ ಪೂಜೆ ಸಂಭ್ರಮ!

ಉಳಿದ ಗಣ್ಯರಿಗೆ ವೇದಿಕೆ ಮುಂಭಾಗದಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ಭೂಮಿ ಪೂಜೆ ಕಾರ್ಯಕ್ರಮ ಶುರುವಾಗುವುದನ್ನು ಇಡೀ ದೇಶ ಕಾತರದಿಂದ ಕಾಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ