ಆ್ಯಪ್ನಗರ

ಎಲ್ಲಿದ್ದಾನೆ ನಿತ್ಯಾನಂದ..? 'ಬ್ಲೂ' ಕಾರ್ನರ್ ನೋಟಿಸ್ ಹೊರಡಿಸಿದೆ ಇಂಟರ್‌ ಪೋಲ್..!

ಹೊಸ ದಿಲ್ಲಿ: ಅತ್ಯಾಚಾರ ಹಾಗೂ ದೇಣಿಗೆ ಸಂಗ್ರಹಕ್ಕೆ ಮಕ್ಕಳ ಬಳಕೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನ ವಿರುದ್ಧ ಇಂಟರ್‌ಪೋಲ್‌ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸಿದೆ.

Vijaya Karnataka Web 22 Jan 2020, 8:33 pm
ಹೊಸ ದಿಲ್ಲಿ: ಅತ್ಯಾಚಾರ ಹಾಗೂ ದೇಣಿಗೆ ಸಂಗ್ರಹಕ್ಕೆ ಮಕ್ಕಳ ಬಳಕೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನ ವಿರುದ್ಧ ಇಂಟರ್‌ಪೋಲ್‌ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸಿದೆ.
Vijaya Karnataka Web interpol issues blue corner notice against godman nithyananda swami
ಎಲ್ಲಿದ್ದಾನೆ ನಿತ್ಯಾನಂದ..? 'ಬ್ಲೂ' ಕಾರ್ನರ್ ನೋಟಿಸ್ ಹೊರಡಿಸಿದೆ ಇಂಟರ್‌ ಪೋಲ್..!



​ನಿತ್ಯಾನಂದನಿಗಾಗಿ ವಿಶ್ವಾದ್ಯಂತ ಹುಡುಕಾಟ..!

ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಯೋಗಿನಿ ಸರ್ವಜ್ಞ ಪೀಠಂ ಆಶ್ರಮದಲ್ಲಿನ ನಾಲ್ಕು ವಿದ್ಯಾರ್ಥಿಗಳ ಅಪಹರಣ ಹಾಗೂ ಅವರನ್ನು ಆಶ್ರಮಕ್ಕೆ ದೇಣಿಗೆ ಸಂಗ್ರಹಿಸಲು ಬಳಸಿಕೊಂಡ ಆರೋಪದ ಮೇಲೆ ನಿತ್ಯಾನಂದ ವಿರುದ್ಧ ಗುಜರಾತ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಇದೇ ವಿಚಾರವಾಗಿ ಗುಜರಾತ್‌ ಪೊಲೀಸರು ದೇಶ ಬಿಟ್ಟು ಪರಾರಿಯಾಗಿರುವ ನಿತ್ಯಾನಂದನಿಗೆ ನೋಟಿಸ್‌ ಜಾರಿ ಮಾಡುವಂತೆ ಮನವಿ ಮಾಡಿದ್ದರು.

​ಪಾಸ್‌ ಪೋರ್ಟ್‌ ಇಲ್ಲದೆ ಪರಾರಿಯಾದ..!

ಬಿಡದಿ ಬಳಿಯ ಆಶ್ರಮದಲ್ಲಿ ಆತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಬಿಡದಿ ಪೊಲೀಸರು ದೂರು ದಾಖಲಿಸಿದ್ದಾರೆ. ಈ ಪ್ರಕರಣದ ವಿಚಾರಣೆಗೆ ನಿತ್ಯಾನಂದ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್‌ ಆತನ ಬಂಧನಕ್ಕೆ ವಾರೆಂಟ್‌ ಜಾರಿ ಮಾಡಿತ್ತು. ಹೀಗಾಗಿ ಆತ ಪಾಸ್‌ಪೋರ್ಟ್‌ ಇಲ್ಲದೆ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾನೆ.

​ನಿತ್ಯಾನಂದನ 'ಕೈಲಾಸ' ದೇಶದ ಕಥೆ ಸುಳ್ಳಾ..?

ಕಳೆದ ವರ್ಷ ಈಕ್ವೆಡಾರ್ ರಾಯಭಾರ ಕಚೇರಿ ನಿತ್ಯಾನಂದನಿಗೆ ಆಶ್ರಯ ನೀಡಿದೆ. ಅಲ್ಲದೆ ಆತ ದಕ್ಷಿಣ ಅಮೆರಿಕದಲ್ಲಿ ದ್ವೀಪ ಖರೀದಿಸಲು ಈಕ್ವೆಡಾರ್ ರಾಯಭಾರ ಕಚೇರಿ ಸಹಾಯ ಮಾಡಿದೆ ಎಂಬ ವರದಿಗಳು ಬಂದಿದ್ದವು. ಆದರೆ ಭಾರತದ ವಿದೇಶಾಂಗ ಸಚಿವಾಲಯ ಈವರದಿಗಳನ್ನು ತಳ್ಳಿ ಹಾಕಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ