ಆ್ಯಪ್ನಗರ

ಸಡಿಲ ಹೇಳಿಕೆ: ಪ್ರಜ್ಞಾ ಸಿಂಗ್‌ ಠಾಕೂರ್‌ಗೆ ನಡ್ಡಾ ಎಚ್ಚರಿಕೆ

''ಶಾಸಕರು, ಪಾಲಿಕೆ ಸದಸ್ಯರು ಮತ್ತು ಜನ ಪ್ರತಿನಿಧಿಗಳ ಜತೆಗೂಡಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದು ಸಂಸದರ ಕರ್ತವ್ಯ. ಇದನ್ನು ಎಲ್ಲರೂ ಗಮನದಲ್ಲಿ ಇಟ್ಟುಕೊಳ್ಳಬೇಕು. ನಾವು ಇಲ್ಲಿಗೆ ಬಂದಿರುವುದು ಚರಂಡಿ ಸ್ವಚ್ಛಗೊಳಿಸುವುದಕ್ಕಲ್ಲ. ಖಂಡಿತ, ನಿಮ್ಮ ಶೌಚಾಲಯಗಳನ್ನು ಸ್ವಚ್ಛಗೊಳಿಸಲಂತೂ ಅಲ್ಲವೇ ಅಲ್ಲ,'' ಎಂದು ಹೇಳುವ ಮೂಲಕ ಬಿಜೆಪಿ ವರಿಷ್ಠರ ಆಕ್ರೋಶಕ್ಕೆ ಗುರಿಯಾಗಿದ್ದರು.

Agencies 23 Jul 2019, 5:00 am
ಹೊಸದಿಲ್ಲಿ: ತಾವು ಸಂಸದೆಯಾಗಿ ಆಯ್ಕೆಯಾಗಿರುವುದು ಟಾಯ್ಲೆಟ್‌ ಸ್ವಚ್ಛ ಮಾಡುವುದಕ್ಕಾಗಿ ಅಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಅವರ 'ಸ್ವಚ್ಛ ಭಾರತ' ಅಭಿಯಾನವನ್ನೇ ಅಣಕವಾಡಿದ್ದ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರನ್ನು ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ತೀವ್ರವಾಗಿ ತರಾಟೆಗೆ ಒಳಪಡಿಸಿದ್ದಾರೆ.
Vijaya Karnataka Web j p nadda pulls up pragya singh thakur for her toilet remarks
ಸಡಿಲ ಹೇಳಿಕೆ: ಪ್ರಜ್ಞಾ ಸಿಂಗ್‌ ಠಾಕೂರ್‌ಗೆ ನಡ್ಡಾ ಎಚ್ಚರಿಕೆ


ಸೋಮವಾರ ಪಕ್ಷದ ಪ್ರಧಾನ ಕಚೇರಿಗೆ ಭೋಪಾಲ ಸಂಸದೆ ಪ್ರಜ್ಞಾ ಸಿಂಗ್‌ ಅವರನ್ನು ಕರೆಸಿಕೊಂಡ ನಡ್ಡಾ, ಪಕ್ಷದ ಧೋರಣೆಗೆ ವ್ಯತಿರಿಕ್ತವಾದ ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡದಿರುವಂತೆ ತಾಕೀತು ಮಾಡಿದರು. ಕಾರ್ಯಾಧ್ಯಕ್ಷರ ಜತೆಗಿನ ಮಾತುಕತೆ ನಂತರ ಹೊರ ಬಂದ ಪ್ರಜ್ಞಾ, ಸುದ್ದಿಗಾರರ ಜತೆ ಮಾತಾನಾಡದೇ ಕಾರು ಹತ್ತಿ ಹೊರಟು ಹೋದರು.

ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ್ದ ಅವರು, ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ತಾವು ನಿರ್ವಹಿಸುವ ಪಾತ್ರದ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು. ''ಶಾಸಕರು, ಪಾಲಿಕೆ ಸದಸ್ಯರು ಮತ್ತು ಜನ ಪ್ರತಿನಿಧಿಗಳ ಜತೆಗೂಡಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದು ಸಂಸದರ ಕರ್ತವ್ಯ. ಇದನ್ನು ಎಲ್ಲರೂ ಗಮನದಲ್ಲಿ ಇಟ್ಟುಕೊಳ್ಳಬೇಕು. ನಾವು ಇಲ್ಲಿಗೆ ಬಂದಿರುವುದು ಚರಂಡಿ ಸ್ವಚ್ಛಗೊಳಿಸುವುದಕ್ಕಲ್ಲ. ಖಂಡಿತ, ನಿಮ್ಮ ಶೌಚಾಲಯಗಳನ್ನು ಸ್ವಚ್ಛಗೊಳಿಸಲಂತೂ ಅಲ್ಲವೇ ಅಲ್ಲ,'' ಎಂದು ಹೇಳುವ ಮೂಲಕ ಬಿಜೆಪಿ ವರಿಷ್ಠರ ಆಕ್ರೋಶಕ್ಕೆ ಗುರಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ