ಆ್ಯಪ್ನಗರ

ಕಾಶ್ಮೀರ ಎನ್‌ಕೌಂಟರ್: ಮತ್ತೆರಡು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರದಿಂದ ಮೂರನೇ ಎನ್‌ಕೌಂಟರ್ ನಡೆಸಲಾಗಿದೆ. ಮಂಗಳವಾರ ತಡ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯುವಲ್ಲಿ ಭದತ್ರಾ ಪಡೆ ಯಶಸ್ವಿಯಾಗಿದೆ.

Vijaya Karnataka Web 10 Jun 2020, 9:42 am

ಹೈಲೈಟ್ಸ್‌:

  • ಶೋಪಿಯಾನ್ ಜಿಲ್ಲೆಯಲ್ಲಿ ಮುಂದುವರಿದ ಕಾರ್ಯಾಚರಣೆ.
  • ಈ ಮಧ್ಯೆ ಪಾಕಿಸ್ತಾನದಿಂದ ಅಪ್ರಚೋದಿತ ದಾಳಿ.
  • ಐಇಡಿ ನಾಶಗೊಳಿಸಿದ ಭಾರತೀಯ ಸೇನೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಾರ್ಯಾಚರಣೆ ಮುಂದುವರಿಸಿರುವ ಭಾರತೀಯ ಭದ್ರತಾ ಪಡೆ ಮತ್ತೆರಡು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದೆ.
ಸುಗೂ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ 1.30ರ ಹೊತ್ತಿಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಆಎಫ್) ಹಾಗೂ ಜಮ್ಮು ಹಾಗೂ ಕಾಶ್ಮೀರ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸಿತ್ತು. ಮೂವರು ಉಗ್ರರಿಗೆ ಬಲೆ ಬೀಸಲಾಗಿದ್ದು, ಕಾರ್ಯಾಚರಣೆ ಜಾರಿಯಲ್ಲಿದೆ.

ಗಡಿಯಲ್ಲಿ ಉಗ್ರ ಸಂಹಾರ; ಈ ವರ್ಷ 93 ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ

ಇದು ಭಾನುವಾರದಿಂದ ಶೋಪಿಯಾನ್ ಜಿಲ್ಲೆಯಲ್ಲಿ ನಡೆಯುತ್ತಿರುವ ಮೂರನೇ ಕಾರ್ಯಾಚರಣೆಯಾಗಿದೆ. ಕಳೆದೆರಡು ಎನ್‌ಕೌಂಟರ್‌ಗಳಲ್ಲಾಗಿ ಒಂಬತ್ತು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಗಡಿಯಲ್ಲಿ ಪಾಕ್ ಅಪ್ರಚೋದಿತ ದಾಳಿ...
ಈ ಮಧ್ಯೆ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿದೆ. ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಕದನ ವಿರಾಮ ನಿಯಮ ಉಲ್ಲಂಘಿಸಿರುವ ಪಾಕಿಸ್ತಾನ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.

ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ 4 ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ

ಬಾರಾಮುಲ್ಲಾದಲ್ಲಿ ಐಇಡಿ ನಾಶ

ಈ ಮಧ್ಯೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹಾಗೂ ರಾಷ್ಟ್ರೀಯ ರೈಫಲ್ಸ್, ಬಾರಾಮುಲ್ಲಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಪ್ರೂವೈಸ್ಡ್ ಎಕ್ಸ್‌ಪ್ಲೋಸಿವ್ ಡಿವೈಸ್ (ಐಇಡಿ) ಪತ್ತೆ ಹಚ್ಚಿದ್ದು. ಇದನ್ನು ಬಳಿಕ ಬಾಂಬ್ ನಿಷ್ಕ್ರಿಯ ದಳ ನಾಶಗೊಳಿಸಿದೆ. ಈ ಮೂಲಕ ಪಾಕಿಸ್ತಾನ ಭಯೋತ್ಪಾದಕರ ಯೋಜನೆಯನ್ನು ವಿಫಲಗೊಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ