ಆ್ಯಪ್ನಗರ

ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ, ಒಬ್ಬನ ಬಂಧನ

ಗುರುವಾರ ತಡರಾತ್ರಿ ಈ ಕಾರ್ಯಾಚರಣೆ ನಡೆದಿದ್ದು, ಮೃತ ಉಗ್ರರ ಗುರುತು ಪತ್ತೆಯಾಗಿಲ್ಲ.

Vijaya Karnataka 3 Nov 2018, 4:49 pm
ಶ್ರೀನಗರ: ಜಮ್ಮು-ಕಾಶ್ಮೀರದ ಹಂದ್ವಾರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಬಲಿ ಪಡೆದಿವೆ. ಇಲ್ಲಿನ ಪೊಹ್ರುಪೆತ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಸಿಬ್ಬಂದಿ ಶೋಧಕಾರ್ಯಕ್ಕೆ ಮುಂದಾದರು.
Vijaya Karnataka Web Teror


ಈ ವೇಳೆ ಉಗ್ರರು ಗುಂಡು ಹಾರಿಸಿದ್ದರಿಂದ, ಯೋಧರು ಪ್ರತಿದಾಳಿ ನಡೆಸಿದರು. ಗುರುವಾರ ತಡರಾತ್ರಿ ಈ ಕಾರ್ಯಾಚರಣೆ ನಡೆದಿದ್ದು, ಮೃತ ಉಗ್ರರ ಗುರುತು ಪತ್ತೆಯಾಗಿಲ್ಲ. ಅಡಗುತಾಣದಲ್ಲಿ ಬೇರೆ ಉಗ್ರರು ಇಲ್ಲವೆಂಬುದನ್ನು ಖಚಿತಪಡಿಸಿಕೊಂಡ ಬಳಿಕ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. ಶುಕ್ರವಾರ ಕುಪ್ವಾರಾ ವಲಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಲ್‌ ಬದರ್‌ ಸಂಘಟನೆಯ ಉಗ್ರನೊಬ್ಬನನ್ನು ಸೆರೆ ಹಿಡಿಯಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ