ಆ್ಯಪ್ನಗರ

ನಿರಶನ ಕೈಬಿಟ್ಟ ಕನ್ಹಯ್ಯ

ದೇಶದ್ರೋಹದ ಆರೋಪದ ಮೇಲೆ ವಿವಿ ಆಡಳಿತ ಕೈಗೊಂಡಿದ್ದ ಕ್ರಮ ವಿರೋಧಿಸಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ನಿರಶನವನ್ನು ಜೆಎನ್‌ಯು ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ ಶನಿವಾರ ಅಂತ್ಯಗೊಳಿಸಿದ್ದಾರೆ.

ಏಜೆನ್ಸೀಸ್ 8 May 2016, 4:00 am
ಹೊಸದಿಲ್ಲಿ: ದೇಶದ್ರೋಹದ ಆರೋಪದ ಮೇಲೆ ವಿವಿ ಆಡಳಿತ ಕೈಗೊಂಡಿದ್ದ ಕ್ರಮ ವಿರೋಧಿಸಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ನಿರಶನವನ್ನು ಜೆಎನ್‌ಯು ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ ಶನಿವಾರ ಅಂತ್ಯಗೊಳಿಸಿದ್ದಾರೆ.
Vijaya Karnataka Web kanhaiya kumar withdrew his fast
ನಿರಶನ ಕೈಬಿಟ್ಟ ಕನ್ಹಯ್ಯ


9 ದಿನಗಳ ಕಾಲ ಉಪವಾಸ ನಡೆಸಿ, ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಚಿಕ್ಸಿತ್ಸೆಗಾಗಿ ಏಮ್ಸ್‌ಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.ವೈದ್ಯರು ವಿಶ್ರಾಂತಿಗೆ ಸೂಚಿಸಿರುವುದರಿಂದ ಕುಮಾರ್ ನಿರಶನ ಅಂತ್ಯಗೊಳಿಸಿದ್ದಾರೆ. ಆದರೆ, ನಾವು ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ, ಗುರುವಾರವೇ ಐವರು ವಿದ್ಯಾರ್ಥಿಗಳು ಉಪವಾಸ ಅಂತ್ಯಗೊಳಿಸಿದ್ದಾರೆ.

ವಿವಿ ಮನವಿ:

ಈ ನಡುವೆ ಪ್ರತಿಭಟನೆಗೆ ಹೊರಗಿನವರಿಗೆ ಆಮಂತ್ರಣ ನೀಡದಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜೆಎನ್‌ಯುನ ರಜಿಸ್ಟ್ರಾರ್ ಪ್ರಮೋದ್ ಕುಮಾರ್ ಮನವಿ ಮಾಡಿದ್ದಾರೆ.

ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದು, ಹೊರಗಿನವರು ಬಂದು ಪ್ರತಿಭಟನೆ ಮಾಡುವುದರಿಂದ ಉಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ಹಾಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಅವರು ವಿದ್ಯಾರ್ಥಿಗಳಲ್ಲಿ ಕೇಳಿಕೊಂಡಿದ್ದಾರೆ. ಮತ್ತೊಂದೆಡೆ ಶುಕ್ರವಾರ ಸಿವಿಲ್ ಸೊಸೈಟಿ ಸದಸ್ಯರು ಜೆಎನ್‌ಯು ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು, ಭಾನುವಾರ ವಿವಿಯ ಹಳೆ ವಿದ್ಯಾರ್ಥಿಗಳ ಸಂಘಟನೆ ಬೆಂಬಲ ನೀಡಿ ಪ್ರತಿಭಟನೆ ನಡೆಸಲಿದೆ.

ಪ್ರತ್ಯೇಕ ನೋಟಿಸ್:

ಈ ಹಿನ್ನೆಲೆಯಲ್ಲಿ ಪ್ರತ್ಯೇಕ ನೋಟಿಸ್ ಜಾರಿಗೊಳಿಸಿರುವ ವಿವಿ, ಆಡಳಿತ ವಿಭಾಗದ ಸುತ್ತ ಅನುಮತಿ ಇಲ್ಲದೇ ಸಾರ್ವಜನಿಕ ಸಭೆ ನಡೆಸದಂತೆ ಎಚ್ಚರಿಕೆಯನ್ನೂ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ