ಆ್ಯಪ್ನಗರ

ಲೋಕಸಭೆಯಲ್ಲೂ ಸದ್ದು ಮಾಡಿದ ಕರ್ನಾಟಕ ಆಪರೇಷನ್‌ ಕಮಲ ಆಡಿಯೋ ಟೇಪ್‌

ಕಲಾಪ ಸೇರಿದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಕುದುರೆ ವ್ಯಾಪಾರಕ್ಕೆ ಇಳಿದಿದೆ ಎಂದು ಆರೋಪಿಸಿದರು.

Vijaya Karnataka Web 11 Feb 2019, 6:14 pm
ಹೊಸದಿಲ್ಲಿ: ಕರ್ನಾಟಕ ರಾಜಕೀಯದಲ್ಲಿ ಭಾರಿ ವಿವಾದ, ಬಿರುಗಾಳಿ ಎಬ್ಬಿಸಿರುವ ಆಪರೇಷನ್‌ ಕಮಲ ಆಡಿಯೋ ಟೇಪ್‌ ಲೋಕಸಭೆಯಲ್ಲೂ ಸದ್ದು ಮಾಡಿದೆ.
Vijaya Karnataka Web ದೇವೇಗೌಡ, ಖರ್ಗೆ
ದೇವೇಗೌಡ, ಖರ್ಗೆ


ಆಪರೇಷನ್‌ ಕಮಲದ ವಿಷಯವನ್ನು ಲೋಕಸಭೆಯಲ್ಲಿ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್‌ನ ಎಚ್‌ಡಿ ದೇವೇಗೌಡ ಪ್ರಸ್ತಾಪಿಸಿದರು.

ಆಡಳಿತಾರೂಢ ಪಕ್ಷದ ಶಾಸಕರನ್ನು ಖರೀದಿಸಲು ಬಿಎಸ್‌ ಯಡಿಯೂರಪ್ಪ ಪ್ರಯತ್ನಿಸುತ್ತಿದ್ದಾರೆ ಎಂದು ಇಬ್ಬರೂ ನಾಯಕರು ಆರೋಪಿಸಿದರು.

ಈ ಆರೋಪವನ್ನು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅಲ್ಲಗಳೆದರು.

ಈ ವಿಷಯದ ಕುರಿತು ಚರ್ಚೆ ನಡೆದು ಭಾರಿ ವಾದ-ಪ್ರತಿವಾದ ನಡೆಯುತ್ತಿದ್ದಂತೆ ಕಾಂಗ್ರೆಸ್‌ನ ಸೋನಿಯಾ ಗಾಂಧಿ ಸೇರಿದಂತೆ ಹಲವು ಸದಸ್ಯರು ಸಭಾತ್ಯಾಗ ಮಾಡಿದರು.

ನಂತರ ಕಲಾಪ ಸೇರಿದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಕುದುರೆ ವ್ಯಾಪಾರಕ್ಕೆ ಇಳಿದಿದೆ ಎಂದು ಆರೋಪಿಸಿದರು.

ಸ್ಪೀಕರ್‌, ಜಡ್ಜ್‌, ಪ್ರಧಾನಿ ಹೆಸರುಗಳು ಕೂಡ ಆಡಿಯೋ ಟೇಪ್‌ ಕೇಳಿಬಂದಿದೆ ಎಂದು ಖರ್ಗೆ ಹೇಳಿದರು.

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು ಅಲ್ಲದೇ, ಕಾಂಗ್ರೆಸ್‌, ಜೆಡಿಎಸ್‌ನಲ್ಲಿಯೇ ಆಂತರಿಕ ಕಲಹ ಇದೆ. ಮುಖ್ಯಮಂತ್ರಿ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ. ಕುರ್ಚಿ ಉಳಿಸಿಕೊಳ್ಳಲು ಈ ರೀತಿಯ ತಂತ್ರ ಹೆಣೆಯಲಾಗಿದೆ ಎಂದು ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ