ಆ್ಯಪ್ನಗರ

ಕರ್ನಾಟಕ, ಗೋವಾ 'ರಾಜ್ಯ'ಕೀಯ ಬಿಕ್ಕಟ್ಟು ಸಂಸತ್ತಿನಲ್ಲಿ ಪ್ರತಿಧ್ವನಿ

ಸಂಸತ್ತಿನ ಉಭಯ ಸದನಗಳಲ್ಲಿಯೂ ಕರ್ನಾಟಕ ರಾಜಕೀಯ ಬಿಕ್ಕಟ್ಟು ಪ್ರತಿಧ್ವನಿಸಿದ್ದು ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಧರಣಿ ನಡೆಸಿದಾಗ ಕಲಾಪಕ್ಕೆ ಭಾರಿ ಅಡ್ಡಿ ಉಂಟಾಗಿದೆ.

Vijaya Karnataka Web 11 Jul 2019, 9:18 pm
ಹೊಸದಿಲ್ಲಿ: ಕರ್ನಾಟಕ ಮತ್ತು ಗೋವಾದಲ್ಲಿನ ರಾಜಕೀಯ ಸ್ಥಿತಿ ರಾಜ್ಯಸಭೆಯಲ್ಲಿ ಗುರುವಾರ ಕೂಡ ಪ್ರತಿಧ್ವನಿಸಿತು.
Vijaya Karnataka Web ಸಂಸತ್‌ ಭವನ
ಸಂಸತ್‌ ಭವನ


ಈ ಎರಡೂ ರಾಜ್ಯಗಳ ರಾಜಕೀಯ ಕುರಿತ ಕಾಂಗ್ರೆಸ್ ಪ್ರಸ್ತಾಪಿಸಿತು.

ಬೆಳಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ವಿಷಯ ಪ್ರಸ್ತಾಪಿಸಿ, ಕರ್ನಾಟಕದಲ್ಲಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಕರ್ನಾಟಕ ಮತ್ತು ಗೋವಾದಲ್ಲಿನ ಪರಿಸ್ಥಿತಿ ಪ್ರಜಾಪ್ರಭುತ್ವದ ಮೇಲಿನ ಹಲ್ಲೆಯಾಗಿದೆ ಎಂದು ಆನಂದ್‌ ಶರ್ಮಾ ಹೇಳಿದರು.

ಇದನ್ನು ತೀವ್ರವಾಗಿ ಆಕ್ಷೇಪಿಸಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಕಾಂಗ್ರೆಸ್‌ನ ಸದ್ಯದ ಸ್ಥಿತಿಗೆ ಬಿಜೆಪಿ ಹೊಣೆ ಎಂಬ ಆರೋಪ ಆಶ್ಚರ್ಯಕರವಾಗಿದೆ ಎಂದರು.

ರಾಜಕೀಯ ಬಿಕ್ಕಟ್ಟು ವಿಷಯವಾಗಿ ಕಾಂಗ್ರೆಸ್ ಸದಸ್ಯರು ಘೋಷಣೆಗಳನ್ನು ಕೂಗತ್ತಾ ಸಭಾತ್ಯಾಗ ನಡೆಸಿದರು. ಕರ್ನಾಟಕ ಮತ್ತು ಗೋವಾ ರಾಜ್ಯದಲ್ಲಿನ ಪರಿಸ್ಥಿತಿ ಕುರಿತು ಲೋಕಸಭೆಯಲ್ಲೂ ಸಭಾತ್ಯಾಗ ನಡೆಸಿದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ