ಆ್ಯಪ್ನಗರ

Kashmiri Pandits Killings: ಕಾಶ್ಮೀರಿ ಪಂಡಿತರ ಹತ್ಯೆ ಮೋದಿ ಸರ್ಕಾರದ ವೈಫಲ್ಯ: ಓವೈಸಿ ಆಕ್ರೋಶ

Kashmiri Pandits Killings: ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕಾಶ್ಮೀರಿ ಪಂಡಿತರಾದ ಸುನೀಲ್ ಕುಮಾರ್ ಎಂದು ಗುರ್ತಿಸಲಾಗಿದೆ. ಈತನ ಸಹೋದರ ಪುನೀತ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಣಿವೆ ರಾಜ್ಯಕ್ಕೆ ಕಾಶ್ಮೀರಿ ಪಂಡಿತರು ವಾಪಸ್ ಆಗುತ್ತಿದ್ದಂತೆಯೇ ಪಂಡಿತರನ್ನು ಗುರಿಯಾಗಿಸಿ ಈ ದಾಳಿಗಳು ನಡೆಯುತ್ತಿವೆ. ಅಷ್ಟೇ ಅಲ್ಲ, ವಲಸೆ ಕಾರ್ಮಿಕರನ್ನೂ ಭಯೋತ್ಪಾದಕರೂ ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಕೃತ್ಯ ತಡೆಯಲು ಸಾಧ್ಯವಾಗದ ಮೋದಿ ಸರ್ಕಾರವೇ ಇದಕ್ಕೆಲ್ಲಾ ಹೊಣೆ ಎಂದು ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Authored byದಿಲೀಪ್ ಡಿ. ಆರ್. | Vijaya Karnataka Web 16 Aug 2022, 6:28 pm

ಹೈಲೈಟ್ಸ್‌:

  • ಜಮ್ಮು ಮತ್ತು ಕಾಶ್ಮೀರಕ್ಕೆ ಲೆಫ್ಟಿನೆಂಟ್ ಗವರ್ನರ್‌ಗಳನ್ನು ಬಿಜೆಪಿ ನೇಮಕ ಮಾಡಿದೆ
  • ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ ಇದೆ
  • ಹೀಗಾಗಿ ಇದು ಬಿಜೆಪಿ ಸರ್ಕಾರದ ವೈಫಲ್ಯ: ಓವೈಸಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web owaisis.
ಕಾಶ್ಮೀರಿ ಪಂಡಿತರ ಹತ್ಯೆ ಮೋದಿ ಸರ್ಕಾರದ ವೈಫಲ್ಯ: ಓವೈಸಿ ಆಕ್ರೋಶ
ಹೈದರಾಬಾದ್ (ತೆಲಂಗಾಣ): ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆಯನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರವಾಗಿ ಖಂಡಿಸಿದ್ದಾರೆ. ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರಿಗೆ ರಕ್ಷಣೆ ನೀಡುವಲ್ಲಿ ಹಾಗೂ ಪುನರ್ವಸತಿ ಕಲ್ಪಿಸುವಲ್ಲಿ ನರೇಂದ್ರ ಮೋದಿ ಸಾರಥ್ಯದ ಕೇಂದ್ರ ಸರ್ಕಾರ ಸಂಪೂರ್ಣವಾಗಿ ಸೋತಿದೆ ಎಂದು ಅಸಾದುದ್ದೀನ್ ಓವೈಸಿ ಕಿಡಿ ಕಾರಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಲೆಫ್ಟಿನೆಂಟ್ ಗವರ್ನರ್‌ಗಳನ್ನು ಬಿಜೆಪಿ ನೇಮಕ ಮಾಡಿದೆ. ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ ಇದೆ. ಹೀಗಾಗಿ, ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರಿಗೆ ರಕ್ಷಣೆ ನೀಡಲು ಸಾಧ್ಯವಾಗದೇ ಇರೋದು ನೇರವಾಗಿ ಬಿಜೆಪಿ ಸರ್ಕಾರದ ವೈಫಲ್ಯವಾಗಿದೆ ಎಂದು ಓವೈಸಿ ಚಾಟಿ ಬೀಸಿದ್ದಾರೆ.

Kashmiri Pandits Killings: ಕಣಿವೆ ರಾಜ್ಯದಲ್ಲಿ ಉಗ್ರರ ಗುಂಡಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತ ಬಲಿ
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ಆರ್ಟಿಕಲ್ 370 ರದ್ದತಿ ಮೂಲಕ ಕೊನೆಗೊಳಿಸಲಾಗಿದೆ. ಇಷ್ಟಾದರೂ ಕಣಿವೆ ರಾಜ್ಯದಲ್ಲಿ ಹಿಂಸೆ ನಿಂತಿಲ್ಲ. ಶಾಂತಿ ಮರು ಸ್ಥಾಪನೆ ಆಗಿಲ್ಲ. ಹಾಗೆ ನೋಡಿದ್ರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ಆಗುತ್ತಿರುವ ಮೊದಲ ದಾಳಿ ಇದಲ್ಲ. ಈ ಹಿಂದೆ ಹಲವು ಬಾರಿ ದಾಳಿಗಳಾಗಿವೆ. ಕಾಶ್ಮೀರಿ ಪಂಡಿತರ ಹತ್ಯೆಯಾಗಿದೆ. ಕೇಂದ್ರ ಸರ್ಕಾರವು ಕಾಶ್ಮೀರಿ ಪಂಡಿತರಿಗೆ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ಸೋತಿದೆ. ಇದೀಗ ಕಾಶ್ಮೀರಿ ಪಂಡಿತರು ಕಣಿವೆ ರಾಜ್ಯ ತೊರೆಯಲು ನಿರ್ಧರಿಸಿದ್ದಾರೆ ಎಂದು ಓವೈಸಿ ಹೇಳಿದರು.

ಮಂಗಳವಾರ ಕಾಶ್ಮೀರಿ ಪಂಡಿತರೊಬ್ಬರ ಹತ್ಯೆಯಾಗಿದೆ. ಇದು ಮೋದಿ ಸರ್ಕಾರದ ವೈಫಲ್ಯಕ್ಕೆ ಮತ್ತೊಂದು ಸಾಕ್ಷ್ಯ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

Hajj Pilgrims: ಹಜ್ ಯಾತ್ರಿಕರನ್ನು ಆರತಿ ಎತ್ತಿ ಸ್ವಾಗತಿಸಿದ ಕಾಶ್ಮೀರಿ ಪಂಡಿತರು
ಕಣಿವೆ ರಾಜ್ಯದಲ್ಲಿ ಶಾಂತಿ ಕಾಪಾಡುವುದು, ಕಾಶ್ಮೀರಿ ಪಂಡಿತರ ಜೀವ ರಕ್ಷಣೆ ಮಾಡೋದು ಹಾಗೂ ಪುನರ್ವಸತಿ ಕಲ್ಪಿಸುವ ವೇಳೆ ಅವರ ಹಿತಾಸಕ್ತಿ ಕಾಪಾಡುವುದು ಮೋದಿ ಸರ್ಕಾರದ ಕರ್ತವ್ಯ ಎಂದು ಓವೈಸಿ ಹೇಳಿದ್ದಾರೆ.

ಜಮ್ಮು - ಕಾಶ್ಮೀರದ ಸೋಫಿಯಾನ್‌ನಲ್ಲಿ ಉಗ್ರರ ಗುಂಡಿನ ದಾಳಿಗೆ ಮಂಗಳವಾರ ಬೆಳಗ್ಗೆ ಕಾಶ್ಮೀರಿ ಪಂಡಿತರೊಬ್ಬರು ಬಲಿಯಾಗಿದ್ದಾರೆ. ಮೃತರ ಸಹೋದರ ಕೂಡಾ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಬಳಿಕ ಓವೈಸಿ ತಮ್ಮ ಹೇಳಿಕೆ ನೀಡಿದ್ದಾರೆ.


ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಸುನೀಲ್ ಕುಮಾರ್ ಎಂದು ಗುರ್ತಿಸಲಾಗಿದೆ. ಈತನ ಸಹೋದರ ಪುನೀತ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಣಿವೆ ರಾಜ್ಯಕ್ಕೆ ಕಾಶ್ಮೀರಿ ಪಂಡಿತರು ವಾಪಸ್ ಆಗುತ್ತಿದ್ದಂತೆಯೇ ಪಂಡಿತರನ್ನು ಗುರಿಯಾಗಿಸಿ ಈ ದಾಳಿಗಳು ನಡೆಯುತ್ತಿವೆ. ಅಷ್ಟೇ ಅಲ್ಲ, ವಲಸೆ ಕಾರ್ಮಿಕರನ್ನೂ ಭಯೋತ್ಪಾದಕರೂ ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕಣಿವೆ ರಾಜ್ಯದಲ್ಲಿ ಕೇವಲ 5 ದಿನಗಳ ಅಂತರದಲ್ಲಿ 7 ನಾಗರಿಕರನ್ನು ಹತ್ಯೆ ಮಾಡಲಾಗಿತ್ತು. ಇದರಲ್ಲಿ ಕಾಶ್ಮೀರಿ ಪಂಡಿತರು, ಸಿಖ್ಖರು ಹಾಗೂ ಇಬ್ಬರು ಇಬ್ಬರು ಹಿಂದೂ ವಲಸೆ ಕಾರ್ಮಿಕರು ಇದ್ದರು. ಇದಾದ ಬಳಿಕ ಅಸಂಖ್ಯಾತ ಹಿಂದೂ ಕುಟುಂಬಗಳು ಮತ್ತೆ ಕಣಿವೆ ರಾಜ್ಯವನ್ನು ತೊರೆದು ವಲಸೆ ಹೋಗಿದ್ದರು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ