ಆ್ಯಪ್ನಗರ

ಕಮಲದೊಂದಿಗೆ ಕೈ ಮಿಲಾಯಿಸಲು ಸೈ ಎಂದ ಕೆಸಿಆರ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಗೆ ತಮ್ಮ ಪಕ್ಷ ಮುಕ್ತವಾಗಿದೆ, ಎಂದು ತೆಲಂಗಾಣ ಮುಖ್ಯಮಂತ್ರಿ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ ಹೇಳಿದ್ದಾರೆ.

TIMESOFINDIA.COM 5 Aug 2018, 3:36 pm
ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಗೆ ತಮ್ಮ ಪಕ್ಷ ಮುಕ್ತವಾಗಿದೆ, ಎಂದು ತೆಲಂಗಾಣ ಮುಖ್ಯಮಂತ್ರಿ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ ಹೇಳಿದ್ದಾರೆ.
Vijaya Karnataka Web KCR- MOdi


ಮೂಲಗಳ ಪ್ರಕಾರ, ಇಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ರಾವ್, ಗಂಟೆಗೂ ಹೆಚ್ಚು ಕಾಲ 2019ರ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.

ಚುನಾವಣಾ ಪೂರ್ವ ಮೈತ್ರಿ ನಮ್ಮ ಪಕ್ಷಕ್ಕೆ ಯಾವುದೇ ಪ್ರಯೋಜನ ತರದು. ಒಂದು ವೇಳೆ ಬಿಜೆಪಿ ಬಹುಮತದಿಂದ ವಂಚಿತವಾದರೆ ಸರಕಾರ ರಚಿಸಲು ನಾವು ಕೈ ಜೋಡಿಸುತ್ತೇವೆ ಎಂದು ರಾವ್ ಭೇಟಿ ವೇಳೆ ವಾಗ್ದಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಎನ್‌ಡಿಎ ಭಾಗವಾಗಿಲ್ಲದ ಟಿಆರ್‌ಎಸ್, ಇತ್ತೀಚಿಗೆ ಟಿಡಿಪಿ ಮೋದಿ ಸರಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಮತದಾನ ಪ್ರಕ್ರಿಯೆಯಲ್ಲಿ ಅಂತರ ಕಾಯ್ದುಕೊಳ್ಳುವುದರ ಮೂಲಕ ಪರೋಕ್ಷವಾಗಿ ಕೇಂದ್ರ ಸರಕಾರದ ಪರ ನಿಂತಿತ್ತು.

ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಎನ್‌ಡಿಎ ಒಕ್ಕೂಟದಿಂದ ಹೊರಬಿದ್ದ ಬಳಿಕ ಬಿಜೆಪಿ ಟಿಆರ್‌ಎಸ್‌‌ನ್ನು ಸೆಳೆದುಕೊಳ್ಳಲು ಯತ್ನಿಸುತ್ತಿದೆ ಎನ್ನಲಾಗುತ್ತಿದೆ. ಅವಿಶ್ವಾಸ ನಡೆ ಚರ್ಚೆ ಸಂದರ್ಭದಲ್ಲಿ ಮೋದಿ ಅವರು, ಚಂದ್ರಬಾಬು ನಾಯ್ಡು ಅವರನ್ನು ಟೀಕಿಸುತ್ತ, ಅಭಿವೃದ್ಧಿ ಸೂಚ್ಯಂಕವನ್ನು ಮುಂದಿಟ್ಟುಕೊಂಡು ತೆಲಂಗಾಣವನ್ನು ಪ್ರಶಂಸಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಜೂನ್ ತಿಂಗಳಲ್ಲೂ ಕೂಡ ಕೆಸಿಆರ್ ಮೋದಿ ಅವರನ್ನು ಭೇಟಿಯಾಗಿದ್ದರು. 50 ದಿನಗಳೊಳಗೆ ಉಭಯ ನಾಯಕರ ಮರು ಭೇಟಿ ಎರಡು ಪಕ್ಷಗಳ ನಡುವೆ ಬೆಳೆಯುತ್ತಿರುವ ಸಾಮಿಪ್ಯದ ಗ್ರಹಿಕೆಯನ್ನು ಇನ್ನಷ್ಟು ಬಲಪಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ