ಆ್ಯಪ್ನಗರ

ಶಬರಿಮಲೆ ತೀರ್ಪಿಗೆ ಪ್ರತಿಕ್ರಿಯೆ: ಕೇರಳ ಇಬ್ಭಾಗ

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರೂ ಹೋಗಬಹುದು ಎಂಬ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ಕೇರಳದಲ್ಲಿ ತೀವ್ರ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

TIMESOFINDIA.COM 29 Sep 2018, 1:39 pm
ಹೊಸದಿಲ್ಲಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ 10 ರಿಂದ 50 ವರ್ಷದ ಮಹಿಳೆಯರೂ ಹೋಗಬಹುದು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆ ಕೇರಳದಲ್ಲಿ ವಿವಿಧ ಬಗೆಯ ಪ್ರತಿಕ್ರಿಯೆಗಳು ಬಂದಿವೆ.
Vijaya Karnataka Web kerala


ಸುಪ್ರೀಂ ನೀಡಿರುವ ತೀರ್ಪು ಸ್ವಾಗತಿಸಿರುವ ಕೇರಳ ಪ್ರವಾಸೋದ್ಯಮ ಹಾಗೂ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್, ಆದೇಶ ಜಾರಿಗೊಳಿಸಲು ಟ್ರಾವಂಕೂರು ದೇವಸ್ವಂ ಬೋರ್ಡ್‌ಗೆ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

ತಂತ್ರಿಗಳು ಹಾಗೂ ರಾಜ ಮನೆತನಗಳ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದೇವೆ. ಆದರೆ, ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಜಾರಿಗೆ ಸೂಚನೆ ನೀಡುತ್ತೇವೆ ಎಂದು ಟಿಡಿಪಿ ಅಧ್ಯಕ್ಷ ಎ.ಪದ್ಮಕುಮಾರ್ ತಿಳಿಸಿದ್ದಾರೆ.

ಆದರೆ, ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರು ಸುಪ್ರೀಂ ಕೋರ್ಟ್ ತೀರ್ಪಿಗೆ ತಂತ್ರಿ ಕಂಠರಾರು ರಾಜೀವರ್ ಮತ್ತು ಪಂದಳ ರಾಜಮನೆತನದ ಪ್ರತಿನಿಧಿ ಶಶಿ ವರ್ಮಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಕೇಂದ್ರ ಪ್ರವಾಸೋದ್ಯಮ ಸಚಿವ ಆಲ್ಫೋನ್ಸ್ ಕಣ್ಣಂತಾನಂ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಪ್ರತಿ ಓದಿದ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳ ಪೈಕಿ ಸಿಪಿಎಂ ಮಾತ್ರವೇ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಶ್ಲಾಘಿಸಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ ಎಚ್ಚರಿಕೆಯ ಪ್ರತಿಕ್ರಿಯೆ ನೀಡಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ