ಆ್ಯಪ್ನಗರ

ಕೇರಳ ಚಿನ್ನ ಕಳ್ಳಸಾಗಣೆಯ ತನಿಖೆಗಿಳಿದ ಎನ್‌ಐಎ, ಸ್ಮಗ್ಲಿಂಗ್‌ ಕಿಂಗ್‌ಪಿನ್‌ಗೆ ಐಸಿಸ್‌ ನಂಟು?

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸುಮಾರು 15 ಕೋಟಿ ರೂ. ಮೌಲ್ಯದ 30 ಕೆ.ಜಿ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಜುಲೈ 5ರಂದು ವಶಪಡಿಸಿಕೊಂಡಿದ್ದಾರೆ. ಆ ಬಳಿಕ ತಲೆ ಮರೆಸಿಕೊಂಡಿರುವ ಸ್ವಪ್ನಾ ಸುರೇಶ್‌, ಆನ್‌ಲೈನ್‌ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

Agencies 11 Jul 2020, 12:14 am

ಕೊಚ್ಚಿ: ರಾಜತಾಂತ್ರಿಕ ರಕ್ಷಣೆ ಹೆಸರಿನಲ್ಲಿ ಭಾರಿ ಪ್ರಮಾಣದ ಚಿನ್ನವನ್ನು ಕಳ್ಳಸಾಗಣೆ ಮಾಡಿರುವುದು ಭಯೋತ್ಪಾದನಾ ಕೃತ್ಯಕ್ಕೆ ಸಮ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೇರಳ ಹೈಕೋರ್ಟ್‌ಗೆ ತಿಳಿಸಿದೆ. ಅಲ್ಲದೇ, ಪ್ರಕರಣದ ಕಿಂಗ್‌ಪಿನ್‌ ಸ್ವಪ್ನಾ ಸುರೇಶ್‌ಗೆ ಐಸಿಸ್‌ ಉಗ್ರ ಸಂಘಟನೆ ಜತೆ ನಂಟು ಇದೆ ಎಂದೂ ತಿಳಿಸಿದೆ.
Vijaya Karnataka Web Sapna Suresh


ಸ್ವಪ್ನಾ ಸುರೇಶ್‌ ಜಾಮೀನು ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ ಎನ್‌ಐಎ ಪರ ವಕೀಲರು, "ಆರೋಪಿ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ತಡೆ) ಕಾಯಿದೆ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗೆ ಐಸಿಸ್‌ ಜತೆ ನಂಟು ಇರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿದೆ. ಆದ್ದರಿಂದ ಜಾಮೀನು ನೀಡಬಾರದು," ಎಂದು ವಾದಿಸಿದರು. ಪ್ರಥಮ ವರ್ತಮಾನ ವರದಿ (ಎಫ್‌ಐಆರ್‌) ಪ್ರತಿ ನೀಡುವಂತೆ ಸ್ವಪ್ನಾ ಪರ ವಕೀಲರು ಮನವಿ ಮಾಡಿದಾಗ, "ಸೂಕ್ಷ್ಮ ಪ್ರಕರಣವಾಗಿರುವುದರಿಂದ ಈ ಹಂತದಲ್ಲಿಎಫ್‌ಐಆರ್‌ ನೀಡಲಾಗದು," ಎಂದು ಎನ್‌ಐಎ ವಕೀಲರು ವಾದಿಸಿದರು.
ಕೇರಳ ಚಿನ್ನ ಕಳ್ಳಸಾಗಾಣಿಕೆ ಹಗರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ!

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸುಮಾರು 15 ಕೋಟಿ ರೂ. ಮೌಲ್ಯದ 30 ಕೆ.ಜಿ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಜುಲೈ 5ರಂದು ವಶಪಡಿಸಿಕೊಂಡಿದ್ದಾರೆ. ಆ ಬಳಿಕ ತಲೆ ಮರೆಸಿಕೊಂಡಿರುವ ಸ್ವಪ್ನಾ ಸುರೇಶ್‌, ಆನ್‌ಲೈನ್‌ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಿಗೂ ವಾದ ಮಂಡಿಸಲು ಅವಕಾಶ ನೀಡಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜುಲೈ 16ಕ್ಕೆ ಮುಂದೂಡಿದೆ.
ಕೇರಳ ಹಗರಣ: ‘ಚಾರಿತ್ರ್ಯ ಪ್ರಮಾಣ ಪತ್ರ’ ಪಡೆದಿದ್ದ ಕಿಂಗ್‌ಪಿನ್‌ ಸ್ವಪ್ನಾ, ಸಿಎಂ ರಾಜೀನಾಮೆಗೆ ಹೆಚ್ಚಿದ ಒತ್ತಡ

ನಾಲ್ವರ ವಿರುದ್ಧ ಎಫ್‌ಐಆರ್‌

ಕೇರಳ ಸರಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಪ್ನಾ ಸುರೇಶ್‌, ಯುಎಇ ರಾಯಭಾರ ಕಚೇರಿ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ಸರಿತ್‌ ಕುಮಾರ್‌, ಸಂದೀಪ್‌ ನಾಯರ್‌ ಮತ್ತು ಫಜಿಲ್‌ ಫರೀದ್‌ ವಿರುದ್ಧ ಎನ್‌ಐಎ ಚಿನ್ನ ಕಳ್ಳಸಾಗಣೆಗೆ ಸಂಬಂಧಿಸಿ ಎಫ್‌ಐಆರ್‌ ದಾಖಲಿಸಿದೆ. ಈ ಪೈಕಿ ಸರಿತ್ ‌ಕುಮಾರ್‌ನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಆತ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ ಮಾಹಿತಿ ತಂತ್ರಜ್ಞಾನ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್‌ ಸೇರಿ ಹಲವರ ಹೆಸರು ಹೇಳಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಸಂದೀಪ್‌ ನಾಯರ್‌ ಪತ್ನಿಯು ಸ್ವಪ್ನಾ ಮತ್ತು ಸರಿತ್‌ ಅವರಿಂದ ಚಿನ್ನ ಪಡೆದು ಸಂಬಂಧಿಸಿದವರಿಗೆ ತಲುಪಿಸುವಂತೆ ಪತಿ ಮೇಲೆ ಒತ್ತಡ ಹೇರಿದ್ದಳು ಎನ್ನಲಾಗಿದೆ.
ಕೇರಳದಲ್ಲಿ ‘ಬಂಗಾರ’ದ ಬಿರುಗಾಳಿ, ಪಿಣರಾಯಿ ಸರಕಾರಕ್ಕೆ ಮುಜುಗರ ತಂದಿತ್ತ ಸಪ್ನಾ ಸುರೇಶ್‌

ಸಿಎಂ ವಿರುದ್ಧ ಪ್ರತಿಭಟನೆಪ್ರಕರಣದಲ್ಲಿ ಮುಖ್ಯಮಂತ್ರಿ ಕಾರ್ಯಾಲಯದ ಅಧಿಕಾರಿಗಳ ಹೆಸರೂ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸಿಎಂ ಪಿಣರಾಯಿ ವಿಜಯನ್‌ ರಾಜೀನಾಮೆಗೆ ಆಗ್ರಹಿಸಿ ಕೇರಳ ಸ್ಟುಡೆಂಟ್ಸ್‌ ಯೂನಿಯನ್‌, ಮುಸ್ಲಿಂ ಯೂತ್‌ ಲೀಗ್‌, ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ