ಆ್ಯಪ್ನಗರ

ಕೇರಳ ಸಿಎಂ ಪಿಣರಾಯಿ ವಿಜಯನ್‌, ಸ್ಪೀಕರ್‌ ವಿರುದ್ಧ 'ಯುಡಿಎಫ್‌'ನಿಂದ ಅವಿಶ್ವಾಸ ನಿರ್ಣಯ

ಸ್ಪೀಕರ್‌ ಸಹ ಪ್ರಕರಣದ ಪ್ರಮುಖ ಆರೋಪಿಯೊಬ್ಬರ ಜಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ, ಸಿಎಂ ಜೊತೆ ಅವರೂ ಹುದ್ದೆ ತ್ಯಜಿಸಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಯುಡಿಎಫ್‌ ಸಂಚಾಲಕ ಬೆನ್ನಿ ಹೆನನ್ ಆರೋಪಿಸಿದ್ದಾರೆ.

Agencies 13 Jul 2020, 7:49 pm

ತಿರುವನಂತಪುರಂ: ಕೇರಳದ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಮುಂದುವರಿದಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್‌ ನೇತೃತ್ವದ ‘ಯುಡಿಎಫ್‌’ ಮೈತ್ರಿಕೂಟ ನಿರ್ಧರಿಸಿದೆ.
Vijaya Karnataka Web Pinarayi Vijayan


ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ಭಾಗವಾಗಿ ಈ ಕ್ರಮಕ್ಕೆ ಯುಡಿಎಫ್‌ ಮುಂದಾಗಿದೆ. ಅಲ್ಲದೆ, ಸ್ಪೀಕರ್‌ ಪಿ. ಶ್ರೀರಾಮಕೃಷ್ಣನ್‌ ವಿರುದ್ಧವೂ ನಿರ್ಣಯ ಮಂಡಿಸಲು ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಯುಡಿಎಫ್‌ ಸಂಚಾಲಕ ಬೆನ್ನಿ ಹೆನನ್‌ ತಿಳಿಸಿದ್ದಾರೆ.

"ಸ್ಪೀಕರ್‌ ಸಹ ಪ್ರಕರಣದ ಪ್ರಮುಖ ಆರೋಪಿಯೊಬ್ಬರ ಜಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಅವರೂ ಹುದ್ದೆ ತ್ಯಜಿಸಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ. ಆದ್ದರಿಂದ ನಾವು ರಾಜ್ಯದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಿದ್ದೇವೆ,’’ ಎಂದು ಬೆನ್ನಿ ಹೇಳಿದ್ದಾರೆ.
ಕೇರಳ ಗೋಲ್ಡ್ ಸ್ಮಗ್ಲಿಂಗ್ ಕೇಸ್; ಇಬ್ಬರು ಪ್ರಮುಖ ಆರೋಪಿಗಳು 8 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ

ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ ಜತೆ ನಂಟಿನ ಆರೋಪದ ಮೇರೆಗೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಪ್ರರಕಣದ ಕಿಂಗ್‌ ಪಿನ್‌ ಎನ್ನಲಾದ ಸ್ವಪ್ನಾ ಸುರೇಶ್‌ ಮತ್ತು ಆಕೆಯ ಸಹಚರ ಸಂದೀಪ್‌ ನಾಯರ್‌ ಅವರನ್ನು ಬೆಂಗಳೂರಿನಲ್ಲಿಬಂಧಿಸಲಾಗಿದ್ದು, ಕೊಚ್ಚಿಯ ವಿಶೇಷ ಕೋರ್ಟ್‌ ಭಾನುವಾರ ಅವರಿಬ್ಬರನ್ನು ಎನ್‌ಐಎ ಕಸ್ಟಡಿಗೆ ಒಪ್ಪಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ