ಆ್ಯಪ್ನಗರ

ಭಾರಿ ಮಳೆ: ಕೇರಳದಲ್ಲಿ 16 ಮಂದಿ ಬಲಿ

ಕೇರಳದ ವಿವಿಧೆಡೆ ವರುಣನ ರೌದ್ರಾವತಾರ ಮುಂದುವರಿದಿದ್ದು, ಈವರೆಗೆ ಧಾರಾಕಾರ ಮಳೆಗೆ 16 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

Vijaya Karnataka 12 Jun 2018, 5:00 am
ತಿರುವನಂತಪುರಂ: ಕೇರಳದ ವಿವಿಧೆಡೆ ವರುಣನ ರೌದ್ರಾವತಾರ ಮುಂದುವರಿದಿದ್ದು, ಈವರೆಗೆ ಧಾರಾಕಾರ ಮಳೆಗೆ 16 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
Vijaya Karnataka Web Heavy Rain in Kerala


ಭಾರಿ ಬಿರುಗಾಳಿ ಸಹಿತ ಮಳೆಯಿಂದಾಗಿ 188.41 ಹೆಕ್ಟೇರ್‌ ಪ್ರದೇಶದಲ್ಲಿನ 6.84 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಅಲ್ಲದೆ, ವರ್ಷಧಾರೆಯಿಂದ 1,109 ಮನೆಗಳು ಭಾಗಶಃ ಹಾನಿಗೀಡಾಗಿದ್ದು, 61 ಮನೆಗಳು ಸಂಪೂರ್ಣ ಕುಸಿದಿವೆ ಎಂದು ಕಂದಾಯ ಸಚಿವ ಇ. ಚಂದ್ರಶೇಖರನ್‌ ತಿಳಿಸಿದ್ದಾರೆ.

ಕುಂಭದ್ರೋಣ ಮಳೆಯ ಅವಾಂತರಕ್ಕೆ ತಿರುವನಂತಪುರಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಹೆಚ್ಚು ಸಾವು-ನೋವು ಸಂಭವಿಸಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದ್ದು, ನದಿಗಳು ಭೋರ್ಗರೆಯುತ್ತಿವೆ.

ಪ್ರವಾಹದಲ್ಲಿ ಸಿಲುಕಿದ್ದ 32 ಕುಟುಂಬಗಳ 122 ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ. ಮಳೆಯಿಂದಾಗಿ ಇಡುಕ್ಕಿ, ಕಲ್ಲಿಕೋಟೆ, ಕಣ್ಣೂರು ಜಿಲ್ಲೆಗಳಲ್ಲಿ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಅನೇಕ ಕಡೆ ಮರಗಳು, ವಿದ್ಯುತ್‌ ಕಂಬಗಳು ಉರುಳಿ ಮನೆಗಳು ಕುಸಿದು ಬಿದ್ದಿವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದೆ.

ಮೃತರ ಕುಟುಂಬಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಮನೆ ಕುಸಿತದಿಂದ ನಷ್ಟಕ್ಕೊಳಗಾದವರಿಗೂ ಪರಿಹಾರ ಒದಗಿಸುವ ಭರವಸೆಯನ್ನು ಸರಕಾರ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ