ತಿರುವನಂತಪುರಂ: ಕೇರಳದ ವಿವಿಧೆಡೆ ವರುಣನ ರೌದ್ರಾವತಾರ ಮುಂದುವರಿದಿದ್ದು, ಈವರೆಗೆ ಧಾರಾಕಾರ ಮಳೆಗೆ 16 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ಭಾರಿ ಬಿರುಗಾಳಿ ಸಹಿತ ಮಳೆಯಿಂದಾಗಿ 188.41 ಹೆಕ್ಟೇರ್ ಪ್ರದೇಶದಲ್ಲಿನ 6.84 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಅಲ್ಲದೆ, ವರ್ಷಧಾರೆಯಿಂದ 1,109 ಮನೆಗಳು ಭಾಗಶಃ ಹಾನಿಗೀಡಾಗಿದ್ದು, 61 ಮನೆಗಳು ಸಂಪೂರ್ಣ ಕುಸಿದಿವೆ ಎಂದು ಕಂದಾಯ ಸಚಿವ ಇ. ಚಂದ್ರಶೇಖರನ್ ತಿಳಿಸಿದ್ದಾರೆ.
ಕುಂಭದ್ರೋಣ ಮಳೆಯ ಅವಾಂತರಕ್ಕೆ ತಿರುವನಂತಪುರಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಹೆಚ್ಚು ಸಾವು-ನೋವು ಸಂಭವಿಸಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದ್ದು, ನದಿಗಳು ಭೋರ್ಗರೆಯುತ್ತಿವೆ.
ಪ್ರವಾಹದಲ್ಲಿ ಸಿಲುಕಿದ್ದ 32 ಕುಟುಂಬಗಳ 122 ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ. ಮಳೆಯಿಂದಾಗಿ ಇಡುಕ್ಕಿ, ಕಲ್ಲಿಕೋಟೆ, ಕಣ್ಣೂರು ಜಿಲ್ಲೆಗಳಲ್ಲಿ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಅನೇಕ ಕಡೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಮನೆಗಳು ಕುಸಿದು ಬಿದ್ದಿವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದೆ.
ಮೃತರ ಕುಟುಂಬಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಮನೆ ಕುಸಿತದಿಂದ ನಷ್ಟಕ್ಕೊಳಗಾದವರಿಗೂ ಪರಿಹಾರ ಒದಗಿಸುವ ಭರವಸೆಯನ್ನು ಸರಕಾರ ನೀಡಿದೆ.
ಭಾರಿ ಬಿರುಗಾಳಿ ಸಹಿತ ಮಳೆಯಿಂದಾಗಿ 188.41 ಹೆಕ್ಟೇರ್ ಪ್ರದೇಶದಲ್ಲಿನ 6.84 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ. ಅಲ್ಲದೆ, ವರ್ಷಧಾರೆಯಿಂದ 1,109 ಮನೆಗಳು ಭಾಗಶಃ ಹಾನಿಗೀಡಾಗಿದ್ದು, 61 ಮನೆಗಳು ಸಂಪೂರ್ಣ ಕುಸಿದಿವೆ ಎಂದು ಕಂದಾಯ ಸಚಿವ ಇ. ಚಂದ್ರಶೇಖರನ್ ತಿಳಿಸಿದ್ದಾರೆ.
ಕುಂಭದ್ರೋಣ ಮಳೆಯ ಅವಾಂತರಕ್ಕೆ ತಿರುವನಂತಪುರಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಹೆಚ್ಚು ಸಾವು-ನೋವು ಸಂಭವಿಸಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದ್ದು, ನದಿಗಳು ಭೋರ್ಗರೆಯುತ್ತಿವೆ.
ಪ್ರವಾಹದಲ್ಲಿ ಸಿಲುಕಿದ್ದ 32 ಕುಟುಂಬಗಳ 122 ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ. ಮಳೆಯಿಂದಾಗಿ ಇಡುಕ್ಕಿ, ಕಲ್ಲಿಕೋಟೆ, ಕಣ್ಣೂರು ಜಿಲ್ಲೆಗಳಲ್ಲಿ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಅನೇಕ ಕಡೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಮನೆಗಳು ಕುಸಿದು ಬಿದ್ದಿವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದೆ.
ಮೃತರ ಕುಟುಂಬಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಮನೆ ಕುಸಿತದಿಂದ ನಷ್ಟಕ್ಕೊಳಗಾದವರಿಗೂ ಪರಿಹಾರ ಒದಗಿಸುವ ಭರವಸೆಯನ್ನು ಸರಕಾರ ನೀಡಿದೆ.