ಆ್ಯಪ್ನಗರ

Exit Poll Results 2021: ಬಂಗಾಳದಲ್ಲಿ ಮಮತಾ ಹ್ಯಾಟ್ರಿಕ್‌, ಹಲವು ಕಡೆ ಬಿಜೆಪಿ ಕ್ಲಿಕ್‌

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಹೋರಾಟ ಕಂಡುಬಂದಿದೆ. ಈ ಬಾರಿಯ ಚುನಾವಣೆಯ ಮತ್ತೊಂದು ಗಮನಾರ್ಹ ಅಂಶ ಎಂದರೆ ಪ್ರಭಾವ ಅಲ್ಲದ ರಾಜ್ಯಗಳಲ್ಲಿ ಬಿಜೆಪಿ ನೆಲೆಯೂರಲು ಮುಂದಾಗಿದೆ.

Vijaya Karnataka Web 29 Apr 2021, 7:50 pm
ಹೊಸದಿಲ್ಲಿ: ಮಿನಿ ವಾರ್‌ ಎಂದೇ ಕುತೂಹಲಕ್ಕೆ ಕಾರಣವಾಗಿದ್ದ ಪಂಚರಾಜ್ಯ ಚುನಾವಣೆ ಗುರುವಾರ ಅಂತ್ಯಗೊಂಡಿದೆ. ಈಗ ಎಲ್ಲರ ಕಣ್ಣು ಚುನಾವಣೆ ಫಲಿತಾಂಶದ ಮೇಲಿದೆ. ಅದಕ್ಕಿಂತಲೂ ಮುಖ್ಯವಾಗಿ ಎಕ್ಸಿಟ್‌ ಪೋಲ್‌ (ಚುನಾವಣೋತ್ತರ ಸಮೀಕ್ಷೆ) ಮೇಲೆಯೂ ಜನರ ಆಸಕ್ತಿ ಹೆಚ್ಚಾಗಿದೆ.
Vijaya Karnataka Web ಎಕ್ಸಿಟ್‌ ಪೋಲ್‌
ಎಕ್ಸಿಟ್‌ ಪೋಲ್‌


ಕಳೆದ ಒಂದು ತಿಂಗಳ ಅವಧಿಯಲ್ಲಿ ನಡೆದ ಚುನಾವಣೆಯ ನಂತರ ಈಗ ಮತಗಟ್ಟೆ ಸಮೀಕ್ಷೆಗಳು ಹೊರಬಂದಿದ್ದು, ಯಾವ ಪಕ್ಷಕ್ಕೆ ಎಷ್ಟು ಸ್ಥಾನ ದಕ್ಕಲಿದೆ ಎಂಬ ಅಂದಾಜು ಈಗ ಸಿಕ್ಕಿದೆ. ಕರ್ನಾಟಕದಲ್ಲಿ ಮೂರು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದಿದೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವ ಕಲ್ಯಾಣ ಮತ್ತು ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಮತದಾನ ನಡೆದಿದೆ.

elections

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಹೋರಾಟ ಇದೆ ಎಂದು ಸಮೀಕ್ಷೆಗಳು ತಿಳಿಸಿದೆ.

ಪಶ್ಚಿಮ ಬಂಗಾಳದಲ್ಲಿ ಈ ಬಾರಿಯೂ ತೃಣಮೂಲ ಕಾಂಗ್ರೆಸ್‌ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ತಮಿಳುನಾಡಿನಲ್ಲಿ ಡಿಎಂಕೆ ಮುನ್ನಡೆ ದೊರೆಯುವ ಸಾಧ್ಯತೆ ಇದೆ, ಕೇರಳದಲ್ಲಿ ಎಲ್‌ಡಿಎಫ್‌ಗೆ ಮುನ್ನಡೆ ಸಾಧ್ಯತೆ ಎಂದು ಹೇಳಲಾಗಿದೆ. ಪುದುಚೇರಿಯಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟ ಮುನ್ನಡೆ ಪಡೆಯುವ ನಿರೀಕ್ಷೆ ಇದೆ.

ಪಶ್ಚಿಮ ಬಂಗಾಳದ 294 ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ 158, ಬಿಜೆಪಿಗೆ 115, ಎಡಪಕ್ಷಗಳಿಗೆ 19 ಸ್ಥಾನ ಲಭಿಸುವ ಸಾಧ್ಯತೆ ಇದೆ ಎಂದು ವಿಜಯ ಕರ್ನಾಟಕ ಸೋದರ ಸಂಸ್ಥೆ ಟೈಮ್ಸ್‌ ನೌ ಸಮೀಕ್ಷೆಗಳು ತಿಳಿಸಿವೆ.

ಕಳೆದ ಬಾರಿ ಚುನಾವಣೆಯಲ್ಲಿ ಬಂಗಾಳದಲ್ಲಿ ಕೇವಲ 3 ಸ್ಥಾನ ಪಡೆದಿದ್ದ ಬಿಜೆಪಿ ಈ ಬಾರಿ ನೂರರ ಗಡೆ ದಾಟುವ ನಿರೀಕ್ಷೆ ಮೂಡಿಸಿದೆ. ದೀದಿ ನೆಲದಲ್ಲಿ ಮೋದಿ ಅಲೆ ಹೆಚ್ಚಾಗಿ, ಕಮಲ ಅರಳುವ ಸಾಧ್ಯತೆ ಹೆಚ್ಚಾಗಿದೆ.

ತೃಣಮೂಲ ಕಾಂಗ್ರೆಸ್‌ ಸತತ ಮೂರನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿದು ಹ್ಯಾಟ್ರಿಕ್‌ ಸಾಧಿಸುವ ನಿರೀಕ್ಷೆ ಹೊಂದಿದೆ.

ತಮಿಳುನಾಡಿನಲ್ಲಿ ಈ ಬಾರಿ ಎಐಎಡಿಎಂಕೆ ಜತೆಗೂಡಿ ಬಿಜೆಪಿ ಮ್ಯಾಜಿಕ್‌ ಮಾಡುವ ನಿರೀಕ್ಷೆ ಗರಿ ಗೆದರಿತ್ತು. ಆದರೆ ತಮಿಳುನಾಡಿನ ಮತದಾರರು ಈ ಬಾರಿ ಡಿಎಂಕೆ ಕೈ ಹಿಡಿಯಲಿದ್ದಾರೆ ಎಂದು ಸಮೀಕ್ಷೆಗಳು ವರದಿ ನೀಡಿವೆ.

ಕೇರಳದಲ್ಲಿ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್ ವಿಜಯದ ಮಾಲೆ ತೊಡುವ ನಿರೀಕ್ಷೆ ಇದೆ.

ಕೇಂದ್ರದಲ್ಲಿರುವ ಆಡಳಿತಾರೂಢ ಬಿಜೆಪಿ ಈಗ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಮೇಲೆ ಕಣ್ಣು ಹಾಕಿದೆ. ಜತೆಗೆ ಕೇರಳದಲ್ಲಿಯೂ ಕಮಲ ಅರಳಿಸಲು ಮುಂದಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಹೋರಾಟ ಕಂಡುಬಂದಿದೆ. ಈ ಬಾರಿಯ ಚುನಾವಣೆಯ ಮತ್ತೊಂದು ಗಮನಾರ್ಹ ಅಂಶ ಎಂದರೆ ಪ್ರಭಾವ ಅಲ್ಲದ ರಾಜ್ಯಗಳಲ್ಲಿ ಬಿಜೆಪಿ ನೆಲೆಯೂರಲು ಮುಂದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ