ಆ್ಯಪ್ನಗರ

Food Poison: ಆನ್‌ಲೈನ್‌ನಲ್ಲಿ ತರಿಸಿದ ಬಿರಿಯಾನಿ ಸೇವಿಸಿ ಯುವತಿ ಸಾವು: ತನಿಖೆಗೆ ಆದೇಶ

Food Poisoning in Kerala: ಕೇರಳದಲ್ಲಿ ಫುಡ್ ಪಾಯ್ಸನಿಂಗ್‌ನಿಂದ ಮತ್ತೊಬ್ಬ ಯುವತಿ ಮೃತಪಟ್ಟಿದ್ದಾಳೆ. ಕಾಸರಗೋಡಿನಲ್ಲಿ ಆನ್‌ಲೈನ್‌ನಿಂದ ತರಿಸಿಕೊಂಡಿದ್ದ ಬಿರಿಯಾನಿ ಸೇವಿಸಿದ ನಂತರ ಅಸ್ವಸ್ಥಗೊಂಡಿದ್ದ ಯುವತಿ, ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾಳೆ.

Authored byಅಮಿತ್ ಎಂ.ಎಸ್ | Vijaya Karnataka Web 7 Jan 2023, 5:53 pm

ಹೈಲೈಟ್ಸ್‌:

  • ಕೇರಳದ ಕಾಸರಗೋಡಿನಲ್ಲಿ ವಿಷಯುಕ್ತ ಆಹಾರ ಸೇವನೆಯಿಂದ ಯುವತಿ ಸಾವು
  • ಸ್ಥಳೀಯ ಹೋಟೆಲ್‌ನಿಂದ ಆನ್‌ಲೈನ್ ಮೂಲಕ ಬಿರಿಯಾನಿ ತರಿಸಿಕೊಂಡಿದ್ದ ಯುವತಿ
  • ಘಟನೆ ಬಗ್ಗೆ ತನಿಖೆ ನಡೆಸಲು ಆದೇಶಿಸಿದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web biryani
ಕಾಸರಗೋಡು: ಕೇರಳದಲ್ಲಿ ಶಂಕಿತ ವಿಷಾಹಾರ ಸೇವನೆಯ ಮತ್ತೊಂದು ಘಟನೆ ನಡೆದಿದೆ. ಸ್ಥಳೀಯ ಹೋಟೆಲ್‌ನಿಂದ ಬಿರಿಯಾನಿ ಖಾದ್ಯವನ್ನು ಆನ್‌ಲೈನ್ ಮೂಲಕ ತರಿಸಿಕೊಂಡಿದ್ದ 20 ವರ್ಷದ ಯುವತಿ, ಅದನ್ನು ಸೇವಿಸಿದ ಬಳಿಕ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.
ಕಾಸರಗೋಡು ಸಮೀಪದ ಪೆರುಂಬಲಾ ನಿವಾಸಿ ಅಂಜು ಶ್ರೀಪಾರ್ವತಿ ಮೃತ ದುರ್ದೈವಿ. ಡಿಸೆಂಬರ್ 31ರಂದು ಕಾಸರಗೋಡಿನ ರೊಮಾನ್ಸಿಯಾ ಎಂಬ ಹೆಸರಿನ ರೆಸ್ಟೋರೆಂಟ್‌ನಿಂದ ಆನ್‌ಲೈನ್ ಮೂಲಕ ಆಕೆ 'ಕುಳಿಮಂತಿ'ಯನ್ನು ತರಿಸಿಕೊಂಡು ಸೇವಿಸಿದ್ದಳು. ಅದರ ಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದು, ಅಂದಿನಿಂದಲೂ ಚಿಕಿತ್ಸೆ ಪಡೆಯುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಹಾಸನ: ಬಿಸಿ ಊಟದಲ್ಲಿ ಸಿಕ್ಕ ಹಲ್ಲಿ ಬಾಲ, 34 ಮಕ್ಕಳು ಅಸ್ವಸ್ಥ

"ಆಕೆಯ ಪೋಷಕರು ದೂರು ಸಲ್ಲಿಸಿದ ಬಳಿಕ ಪ್ರಕರಣವನ್ನು ದಾಖಲು ಮಾಡಲಾಗಿದೆ. ಯುವತಿ ಚಿಕಿತ್ಸೆ ಸ್ಪಂದಿಸದೆ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾಳೆ" ಎಂದು ಪೊಲೀಸರು ಹೇಳಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ವಿವರಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಆಕೆಯನ್ನು ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಆಕೆ ಮೃತಪಟ್ಟಿದ್ದಾಳೆ. ಈ ಘಟನೆ ಕುರಿತು ತನಿಖೆ ನಡೆಸುವಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆದೇಶಿಸಿದ್ದಾರೆ.
ಜೊಮ್ಯಾಟೋದಲ್ಲಿ 365 ದಿನದಲ್ಲಿ 3,330 ಆರ್ಡರ್‌ ಮಾಡಿದ ಭೂಪ!

"ಈ ದುರಂತಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಆಹಾರ ಆರೋಗ್ಯ ಆಯುಕ್ತರಿಗೆ ನಿರ್ದೇಶನಗಳನ್ನು ನೀಡಲಾಗಿದೆ. ಘಟನೆಯನ್ನು ಡಿಎಂಒ ಪರಿಶೀಲಿಸುತ್ತಿದ್ದಾರೆ" ಎಂದು ಅವರು ಪಟ್ಟಣಂತಿಟ್ಟದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದರು.

ವಿಷಪೂರಿತ ಆಹಾರ ಪೂರೈಕೆ ಮಾಡಿದ ಆರೋಪ ಎದುರಿಸುತ್ತಿರುವ ಹೋಟೆಲ್‌ಗಳ ಪರವಾನಗಿಗಳನ್ನು ಆಹಾರ ಸುರಕ್ಷತೆ ಮತ್ತು ಮಾನದಂಡ ಕಾಯ್ದೆ (ಎಫ್‌ಎಸ್‌ಎಸ್‌ಎ) ಅಡಿ ರದ್ದುಗೊಳಿಸಲಾಗುವುದು ಎಂದು ಸಚಿವೆ ಎಚ್ಚರಿಕೆ ನೀಡಿದ್ದಾರೆ.

ಈ ವಾರದ ಆರಂಭದಲ್ಲಿ, ಕೊಟ್ಟಾಯಂ ವೈದ್ಯಕೀಯ ಕಾಲೇಜಿನ ನರ್ಸ್ ಒಬ್ಬರು ಕೋಯಿಕ್ಕೋಡ್‌ನ ಹೋಟೆಲ್ ಒಂದರಲ್ಲಿ ಆಹಾರ ಸೇವಿಸಿದ ಬಳಿಕ ಮೃತಪಟ್ಟಿದ್ದರು.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ