ಆ್ಯಪ್ನಗರ

ಕೇಂದ್ರ ಸರ್ಕಾರದ ನೀತಿ ಬೆಂಬಲಿಸಿ ರಾಹುಲ್ ಗಾಂಧಿ ಕ್ಷಮೆ ಕೇಳಿದ ನಟಿ ಖುಷ್ಬೂ..!

ನವ ಶಿಕ್ಷಣ ನೀತಿ 2020 ರ ಪ್ರಕಾರ ಐದನೆಯ ತರಗತಿ ತನಕ ವಿದ್ಯಾರ್ಥಿಗಳು ಶಿಕ್ಷಣವನ್ನು ತಮ್ಮ ಮಾತೃಭಾಷೆಯಲ್ಲೇ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರ ಈ ನೀತಿಯನ್ನು ಪ್ರಕಟ ಮಾಡುತ್ತಿದ್ದಂತೆ ಕಾಂಗ್ರೆಸ್‌ ನಾಯಕಿ, ನಟಿ ಖುಷ್ಬೂ ಸುಂದರ್ ಅವರು ಕೂಡ ಕೇಂದ್ರದ ನಡೆಯನ್ನು ಸ್ವಾಗತಿಸಿದ್ದಾರೆ. ಅಲ್ಲದೇ ಈ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಲ್ಲಿ ಕ್ಷಮೆಯನ್ನೂ ಯಾಚಿಸಿದ್ದಾರೆ.

TIMESOFINDIA.COM 31 Jul 2020, 3:50 pm
ಹೊಸದಿಲ್ಲಿ: ಕೇಂದ್ರ ಸರ್ಕಾರ ‘ನೂತನ ಶಿಕ್ಷಣ ನೀತಿ 2020’ಯನ್ನು ನಿನ್ನೆ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರದ ನವ ಶಿಕ್ಷಣ ನೀತಿಗೆ ದೇಶದೆಲ್ಲೆಡೆ ಸ್ವಾಗತ ದೊರೆತರೆ, ಅನೇಕ ಮಂದಿ ಇದನ್ನು ವಿರೋಧಿಸಿದ್ದಾರೆ.
Vijaya Karnataka Web Kushboo


ನವ ಶಿಕ್ಷಣ ನೀತಿ 2020 ರ ಪ್ರಕಾರ ಐದನೆಯ ತರಗತಿ ತನಕ ವಿದ್ಯಾರ್ಥಿಗಳು ಶಿಕ್ಷಣವನ್ನು ತಮ್ಮ ಮಾತೃಭಾಷೆಯಲ್ಲೇ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರ ಈ ನೀತಿಯನ್ನು ಪ್ರಕಟ ಮಾಡುತ್ತಿದ್ದಂತೆ ಕಾಂಗ್ರೆಸ್‌ ನಾಯಕಿ, ನಟಿ ಖುಷ್ಬೂ ಸುಂದರ್ ಅವರು ಕೂಡ ಕೇಂದ್ರದ ನಡೆಯನ್ನು ಸ್ವಾಗತಿಸಿದ್ದಾರೆ. ಅಲ್ಲದೇ ಈ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಲ್ಲಿ ಕ್ಷಮೆಯನ್ನೂ ಯಾಚಿಸಿದ್ದಾರೆ.

'ನನಗೆ ಸಂವಿಧಾನವೇ ಸುಪ್ರೀಂ, ಯಾರ ಒತ್ತಡವೂ ಇಲ್ಲ' : ರಾಜಸ್ಥಾನ ರಾಜ್ಯಪಾಲ

ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ಖುಷ್ಬೂ ಸುಂದರ್, ‘ಹೊಸ ಶಿಕ್ಷಣ ನೀತಿ 2020’ ಕುರಿತು ನನ್ನ ನಿಲುವು ನಮ್ಮ ಪಕ್ಷಕ್ಕಿಂತ ವಿಭಿನ್ನವಾಗಿದೆ. ಇದಕ್ಕಾಗಿ ನಾನು ರಾಹುಲ್ ಗಾಂಧಿಯವರಲ್ಲಿ ಕ್ಷಮೆ ಯಾಚಿಸುತ್ತೇನೆ. ಕೈಗೊಂಬೆ ಅಥವಾ ರೋಬೋಟ್‌ನಂತೆ ಎಲ್ಲದಕ್ಕೂ ತಲೆ ಅಲ್ಲಾಡಿಸುವ ಬದಲು ನಾನು ಸತ್ಯಗಳ ಬಗ್ಗೆ ಮಾತನಾಡಲು ಇಚ್ಛಿಸುತ್ತೇನೆ. ನಮ್ಮ ನಾಯಕರೊಂದಿಗೆ ನಾವು ಎಲ್ಲವನ್ನೂ ಒಪ್ಪಲು ಸಾಧ್ಯವಿಲ್ಲ. ಆದರೆ ನಾಗರಿಕರಾದ ನಾವು ಧೈರ್ಯವಾಗಿ ನಮ್ಮ ಅಭಿಪ್ರಾಯ ಮತ್ತು ಆಲೋಚನೆಗಳನ್ನು ವ್ಯಕ್ತಪಡಿಸಬಹುದು ಎಂದು ಟ್ವೀಟ್ ಮಾಡಿದ್ದಾರೆ.


ವಿವಾಹೇತರ ಸಂಬಂಧ ಹೊಂದಿದ್ದಕ್ಕೆ ಮಹಿಳೆಗೆ ಗಂಡನನ್ನು ಹೆಗಲ ಮೇಲೆ ಹೊತ್ತು ನಡೆಯು

ಸರಣಿ ಟ್ವೀಟ್ ಮಾಡಿರುವ ಖುಷ್ಬೂ ಇನ್ನೊಂದು ಟ್ವೀಟ್‌ನಲ್ಲಿ ಬಿಜೆಪಿ ವಿರುದ್ಧ ಮಾತನಾಡಿದ್ದು, ರಾಜಕೀಯ ಎಂದರೆ ಕೇವಲ ಶಬ್ದ ಮಾಡುವುದಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುವುದು. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಇದನ್ನು ಅರ್ಥೈಸಿಕೊಳ್ಳಬೇಕಿದೆ. ವಿರೋಧಪಕ್ಷವಾಗಿ ನಾವು ಎಲ್ಲವನ್ನೂ ವಿವರವಾಗಿ ನೋಡಿ ನಿಮ್ಮ ನ್ಯೂನತೆಯನ್ನು ಎತ್ತಿ ಹಿಡಿಯುತ್ತೇವೆ. ಹೊಸ ಶಿಕ್ಷಣ ನೀತಿಗೆ ಸಂಬಂಧಿಸಿದ ನ್ಯೂನತೆಗಳ ಬಗ್ಗೆ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಖುಷ್ಬೂ ಆಗ್ರಹಿಸಿದ್ದಾರೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ: ಮಾಯಾವತಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ