ಆ್ಯಪ್ನಗರ

ಕೃಷಿ ಕಾನೂನು ರದ್ದತಿಗಾಗಿ ವಿಶೇಷ ಸಂಸತ್ ಅಧಿವೇಶನಕ್ಕೆ ಆಗ್ರಹಿಸಿದ ರೈತ ಸಂಘಟನೆಗಳು!

ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ವಿಶೇಷ ಸಂಸತ್ ಅಧಿವೇಶನವನ್ನು ಕರೆಯಬೇಕು ಎಂದು, ರೈತ ಸಂಘಟನೆಗಳು ಕೇಂದ್ರ ಸರ್ಕಾರವನ್ನು ಆಗ್ರಹಿಸಿವೆ. ಕಾನೂನು ರದ್ದಾಗುವುವರೆಗೂ ದೇಶಾದ್ಯಂತ ಮೋದಿ ಸರ್ಕಾರ ಹಾಗೂ ಕಾರ್ಪೋರೇಟ್ ಸಂಸ್ಥೆಗಳ ಪ್ರತಿಕೃತಿಗಳನ್ನು ದಹನ ಮಾಡಲಾಗುವುದು ಎಂದು ಎಚ್ಚರಿಸಿವೆ.

Vijaya Karnataka Web 2 Dec 2020, 7:12 pm
ಹೊಸದಿಲ್ಲಿ: ನೂತನ ಕೃಷಿ ಕಾನೂನುಗಳ ಪೂರ್ವಾಪರ ಚರ್ಚಿಸಲು ನಾಳೆ(ಡಿ.03-ಗುರುವಾರ), ಕೇಂದ್ರ ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಮೂರನೇ ಸುತ್ತಿನ ಸಭೆ ನಡೆಯಲಿದೆ.
Vijaya Karnataka Web Delhi Chalo
ವಿಶೇಷ ಸಂಸತ್ ಅಧಿವೇಶನಕ್ಕೆ ಆಗ್ರಹಿಸಿದ ರೈತ ಸಂಘಟನೆಗಳು


ಈ ಮಧ್ಯೆ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ವಿಶೇಷ ಸಂಸತ್ ಅಧಿವೇಶನವನ್ನು ಕರೆಯಬೇಕು ಎಂದು, ರೈತ ಸಂಘಟನೆಗಳು ಕೇಂದ್ರ ಸರ್ಕಾರವನ್ನು ಆಗ್ರಹಿಸಿವೆ.

ಈ ಕುರಿತು ಮಾತನಾಡಿರುವ ಕ್ರಾಂತಿಕಾರಿ ಕಿಸಾನ್ ಸಂಘದ ಮುಖ್ಯಸ್ಥ ದರ್ಶನ್ ಪಾಲ್, ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಕೂಡಲೇ ಸಂಸತ್ತಿನ ವಿದೇಶ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರದಿಂದ ಬುಲೆಟ್ ಅಥವಾ ನ್ಯಾಯ ಎರಡರಲ್ಲಿ ಒಂದು ಸಿಗಲಿದೆ: ರೈತ ನಾಯಕ!

ಕೃಷಿ ಕಾನೂನುಗಳ ರೈತರ ಪಾಲಿಗೆ ಮರಣ ಶಾಸನವಾಗಿದ್ದು, ಈ ಕೂಡಲೇ ಈ ಕಾನೂನುಗಳನ್ನು ಕೇಂದ್ರ ಸರ್ಕಾರ ಮರಳಿ ಪಡೆಯಬೇಕು. ಸಂತ್ತಿನ ಅನುಮೋದನೆ ಪಡೆಯಲು ವಿಶೇಷ ಅಧಿವೇಶನ ಕರೆಯಬೇಕು ಎಂದು ದರ್ಶನ್ ಪಾಲ್ ಆಗ್ರಹಿಸಿದರು.



ಇನ್ನು ಕೃಷಿ ಕಾನೂನುಗಳ ಜಾರಿ ವಿರೋಧಿಸಿ ತಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿರುವ ರೈತ ಸಂಘಟನೆಗಳು, ಈ ಕಾನೂನು ರದ್ದಾಗುವುವರೆಗೂ ದೇಶಾದ್ಯಂತ ಮೋದಿ ಸರ್ಕಾರ ಹಾಗೂ ಕಾರ್ಪೋರೇಟ್ ಸಂಸ್ಥೆಗಳ ಪ್ರತಿಕೃತಿಗಳನ್ನು ದಹನ ಮಾಡಲಾಗುವುದು ಎಂದು ಎಚ್ಚರಿಸಿವೆ.

ಇನ್ನು ನಾಳಿನ(ಗುರುವಾರ) ಸಭೆಯ ಕುರಿತು ಮಾತನಾಡಿರುವ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಮೂರನೇ ಸುತ್ತಿನ ಸಭೆ ಫಲಪ್ರದವಾಗುವ ಭರವಸೆ ಇದೆ ಎಂದು ಹೇಳಿದ್ದಾರೆ.

ಕೇಂದ್ರ-ರೈತ ಸಂಘಟನೆಗಳ ಹಗ್ಗಜಗ್ಗಾಟ: ದೆಹಲಿಯಲ್ಲಿ ರೈತರಿಗೆ ಚಳಿ ಕಾಟ!

ಒಟ್ಟಿನಲ್ಲಿ ನಾಳಿನ(ಗುರುವಾರ) ಸಭೆಗೂ ಮುನ್ನವೇ ರೈತ ಸಂಘಟನೆಗಳು ವಿಶೇಷ ಸಂಸತ್ ಅಧಿವೇಶನಕ್ಕೆ ಆಗ್ರಹಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ