ಆ್ಯಪ್ನಗರ

ಧೋನಿ ಔಟಾಗಿದ್ದಕ್ಕೆ ಅಭಿಮಾನಿ ಸಾವು

ಕ್ರಿಕೆಟ್‌ನ ಹುಚ್ಚು ಅಭಿಮಾನ, ಈ ಅಭಿಮಾನಿಯ ಪ್ರಾಣಕ್ಕೆ ಎರವಾಗಿದೆ.

TIMESOFINDIA.COM 11 Jul 2019, 3:27 pm
ಕೋಲ್ಕತಾ: ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 18 ರನ್ ಅಂತರದ ಸೋಲಿಗೆ ಶರಣಾಗಿರುವ ಟೀಮ್ ಇಂಡಿಯಾ ವಿಶ್ವಕಪ್ ಕನಸು ಭಗ್ನಗೊಂಡಿದೆ. ಇದು ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ನುಂಗಲಾರದ ತುತ್ತಾಗಿದೆ. ಆದರೆ ಧೋನಿಯ ಈ ಅಭಿಮಾನಿಯ ಪಾಲಿಗದು ಪ್ರಾಣಘಾತಕವಾಗಿದೆ.
Vijaya Karnataka Web ms-dhoni-run-out-02


ಹೌದು ನಿನ್ನೆ ನಡೆದ ಪಂದ್ಯದಲ್ಲಿ ಧೋನಿ ಔಟಾಗುತ್ತಿದ್ದಂತೆ ಅಭಿಮಾನಿ ಶ್ರೀಕಾಂತ ಮೈಟಿ (33) ಕುಳಿತಲ್ಲಿಯೇ ಸಾವಿಗೀಡಾಗಿದ್ದಾರೆ. ಸೈಕಲ್ ಅಂಗಡಿ ಮಾಲೀಕರಾಗಿದ್ದ ಅವರು ಮೊಬೈಲ್‌ನಲ್ಲಿ ಕ್ರಿಕೆಟ್ ವೀಕ್ಷಿಸುತ್ತಿದ್ದಾಗ ಘಟನೆ ನಡೆದಿದೆ.

ನೆಲಕ್ಕುರುಳಿದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದೆವು. ಆದರೆ ಅವರಾಗಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಶ್ರೀಕಾಂತ್ ಅವರ ಸೈಕಲ್ ಅಂಗಡಿ ಪಕ್ಕದಲ್ಲಿಯೇ ಇದ್ದ ಸ್ವೀಟ್ ಅಂಗಡಿ ಮಾಲೀಕ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ