ಆ್ಯಪ್ನಗರ

ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆಯಲಿದೆ ಚಿರತೆ ಗಣತಿ

ಅಕ್ರಮ ಬೇಟೆ ಹಿಮಚಿರತೆಗಳ ಸಂತತಿಗೆ ಪ್ರಮುಖ ಬೆದರಿಕೆಯಾಗಿದೆ. ಜೀವಿ ಪರಿಸರದಲ್ಲಿ ಹಿಮಚಿರತೆಗಳದ್ದು, ಮಹತ್ವದ ಪಾತ್ರ ಹೊಂದಿದೆ ಎಂದು ಪ್ರಕಾಶ್‌ ಜಾವಡೇಕರ್‌ ತಿಳಿಸಿದ್ದಾರೆ.

Vijaya Karnataka Web 23 Oct 2019, 9:04 pm
ಹೊಸದಿಲ್ಲಿ: ಅಂತಾರಾಷ್ಟ್ರೀಯ ಹಿಮಚಿರತೆ ದಿನದ ಸಂದರ್ಭವಾಗಿ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಚಿರತೆ ಗಣತಿ ಕಾರ್ಯವನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಕೈಗೆತ್ತಿಕೊಂಡಿದೆ.
Vijaya Karnataka Web leopard census for first time in india
ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆಯಲಿದೆ ಚಿರತೆ ಗಣತಿ


ಹಿಮಚಿರತೆಗಳ ಸಂರಕ್ಷಣೆ ಹಾಗೂ ಹಿಮಾಲಯದ ಈ ಸುಂದರ ಮೃಗದ ಉಳಿವಿಗಾಗಿ ಪ್ರತಿವರ್ಷ ಅಕ್ಟೋಬರ್ 23ರಂದು ಈ ದಿನವನ್ನು ಆಚರಿಸಲಾಗುತ್ತಿದೆ.

ಹೊಸದಿಲ್ಲಿಯಲ್ಲಿ ಜಾಗತಿಕ ಹಿಮಚಿರತೆ ಮತ್ತು ಜೀವಿ ಪರಿಸರ ಸಂರಕ್ಷಣೆ ಕಾರ್ಯಕ್ರಮದ 4ನೇ ಪರಿಶೀಲನಾ ಸಮಿತಿ ಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನ ಭಾಷಣ ಮಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಹಿಮಾಲಯ ಶ್ರೇಣಿಯ ಎಲ್ಲ ದೇಶಗಳು ಒಗ್ಗೂಡಿ, ಹಿಮಚಿರತೆ ಗಣತಿ ನಡೆಸಬಹುದಾಗಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ದಶಕದಲ್ಲಿ ಹಿಮಚಿರತೆ ಸಂಖ್ಯೆಯನ್ನು ದುಪ್ಪಟ್ಟುಗೊಳಿಸಲು ಈ ದೇಶಗಳು ಶ್ರಮಿಸಬೇಕೆಂದು ಅವರು ಹೇಳಿದರು. ಹಿಮಾಚಲ ಪ್ರದೇಶ, ಉತ್ತರಾಖಂಡ್, ಸಿಕ್ಕಿಂ ಅರುಣಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಕ್‌ಗಳಲ್ಲಿ 400 ರಿಂದ 700 ಹಿಮಚಿರತೆಗಳಿರಬಹುದೆಂದು ಅಂದಾಜಿಸಲಾಗಿದೆ ಎಂದು ಪ್ರಕಾಶ್‌ ಜಾವಡೇಕರ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ