ಆ್ಯಪ್ನಗರ

ಸಂಸದರ ವೇತನ 30% ಕಡಿತ, ಪ್ರದೇಶಾಭಿವೃದ್ಧಿ ನಿಧಿ 2 ವರ್ಷ ಸ್ಥಗಿತ - ಲೋಕಸಭೆ ಒಪ್ಪಿಗೆ

​ಕೊರೊನಾ ಸೋಂಕು ಹಾವಳಿ ನಿಯಂತ್ರಣಕ್ಕೆ ಹಣದ ಅಗತ್ಯ ಇದೆ. ಇದಕ್ಕೆ ಬೇಕಾದ ದೇಣಿಗೆ ನಮ್ಮ ಮನೆಯಿಂದಲೇ ಶುರುವಾಗಬೇಕಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ವಿಧೇಯಕ ಮಂಡಿಸಿ ನುಡಿದರು.

Times Now 15 Sep 2020, 11:50 pm
ಹೊಸದಿಲ್ಲಿ: ಕೋವಿಡ್‌ - 19 ಸಾಂಕ್ರಾಮಿಕ ಹಾವಳಿಯಿಂದ ಉಂಟಾಗಿರುವ ಹಣಕಾಸು ಬಿಕ್ಕಟ್ಟು ನಿಭಾಯಿಸಲು ಸಂಸದರ ವೇತನದಲ್ಲಿ ಶೇ. 30ರಷ್ಟು ಕಡಿತಗೊಳಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ತಿದ್ದುಪಡಿ ವಿಧೇಯಕ್ಕೆ ಮಂಗಳವಾರ ಲೋಕಸಭೆ ಅನುಮೋದನೆ ನೀಡಿದೆ.
Vijaya Karnataka Web Union Minister Pralhad Joshi


ಸಂಸತ್‌ ಸದಸ್ಯರ ವೇತನ, ಭತ್ಯೆ ಮತ್ತು ಪಿಂಚಣಿ ತಿದ್ದುಪಡಿ ವಿಧೇಯವನ್ನು ಸೋಮವಾರ ಕೆಳಮನೆಯಲ್ಲಿ ಮಂಡಿಸಲಾಗಿತ್ತು. ವೇತನ ಕಡಿತಕ್ಕೆ ಸಂಬಂಧಿಸಿದಂತೆ ಈ ಮೊದಲು ಜಾರಿಗೊಳಿಸಲಾಗಿದ್ದ ಸುಗ್ರೀವಾಜ್ಞೆಗೆ ಇದು ಪರ್ಯಾಯವಾಗಲಿದೆ.

"ಕೊರೊನಾ ವೈರಸ್‌ ಸೋಂಕು ಹಾವಳಿ ನಿಯಂತ್ರಣಕ್ಕೆ ಹಣದ ಅಗತ್ಯ ಇದೆ. ಇದಕ್ಕೆ ಬೇಕಾದ ದೇಣಿಗೆ ನಮ್ಮ ಮನೆಯಿಂದಲೇ ಶುರುವಾಗಬೇಕಿದೆ," ಎಂದು ವಿಧೇಯಕ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

"ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನೂ 2020-21, 2021-22ನೇ ಸಾಲಿಗೆ ಸ್ಥಗಿತಗೊಳಿಸಲಾಗುವುದು. ಇದು ಎರಡು ವರ್ಷಕ್ಕೆ ಸೀಮಿತವಾಗಿರುವ ತಾತ್ಕಾಲಿಕ ವ್ಯವಸ್ಥೆ," ಎಂದು ಅವರು ಸ್ಪಷ್ಟಪಡಿಸಿದರು. ವೇತನ ಕಡಿತ ಸಂಬಂಧ ಕೇಂದ್ರ ಸರಕಾರವು ಏ.6ರಂದೇ ಸುಗ್ರೀವಾಜ್ಞೆ ಹೊರಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ