ಆ್ಯಪ್ನಗರ

ಜನತಾ ಕರ್ಫ್ಯೂಗೆ ಸರ್ವಪಕ್ಷಗಳ ಬೆಂಬಲ: ಪ್ರಜಾಪ್ರಭುತ್ವದ ಗೆಲುವು ಎಂದ ಸ್ಪೀಕರ್

ಕೊರೊನಾ ಹಾವಳಿಯನ್ನು ತಡೆಗಟ್ಟುವಲ್ಲಿ ಮುಂದಡಿ ಇಟ್ಟಿರುವ ಕೇಂದ್ರ ಸರ್ಕಾರ, ಮಾರಕ ವೈರಾಣು ವಿರುದ್ಧದ ಹೋರಾಟಕ್ಕೆ ಸರ್ವಸನ್ನದ್ಧವಾಗಿದೆ. ಇದೇ ಮಾ.22(ಭಾನುವಾರ)ರಂದು ಜನತಾ ಕರ್ಫ್ಯೂಗೆ ಪ್ರಧಾನಿ ಮೋದಿ ಕರೆ ನೀಡಿದ್ದು, ಈ ಕರೆಗೆ ಸರ್ವಪಕ್ಷಗಳು ಸಮ್ಮತಿ ನೀಡಿವೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಘೋಷಿಸಿದ್ದಾರೆ.

Vijaya Karnataka Web 20 Mar 2020, 5:52 pm
ನವದೆಹಲಿ: ಕೊರೊನಾ ವೈರಸ್ ಸಮರದ ಭಾಗವಾಗಿ ಪ್ರಧಾನಿ ಮೋದಿ ಇದೇ ಮಾ.22(ಭಾನುವಾರ)ರಂದು ಕರೆ ನೀಡಿರುವ ಜನತಾ ಕರ್ಫ್ಯೂಗೆ ಲೋಕಸಭೆಯಲ್ಲಿ ಸರ್ವಪಕ್ಷಗಳ ಸದಸ್ಯರು ಬೆಂಬಲ ನೀಡಿದ್ದಾರೆ.
Vijaya Karnataka Web Lok Sabha
ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಸರ್ವಪಕ್ಷ ಸದಸ್ಯರು ಬೆಂಬಲ ಘೋಷಿಸಿದ್ದಾರೆ.


ಈ ಕುರಿತು ಮಾತನಾಡಿರುವ ಸ್ಪೀಕರ್ ಓಂ ಬಿರ್ಲಾ, ಆಪತ್ಕಾಲದಲ್ಲಿ ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಸಂದರಿಗೆ ಧನ್ಯವಾದ ಎಂದು ಹೇಳಿದರು. ಅಲ್ಲದೇ ಒಂದು ನಿರ್ದಿಷ್ಟ ವಿಷಯದ ಮೇಲೆ ಇಡೀ ಸದನ ಒಂದಾಗುವುದು ಪ್ರಜಾಪ್ರಭುತ್ವದ ಗೆಲುವು ಎಂದು ಸ್ಪೀಕರ್ ಸಂತಸ ವ್ಯಕ್ತಪಡಿಸಿದರು.

ಮಾರ್ಚ್‌ 22ರಂದು ಜನತಾ ಕರ್ಫ್ಯೂಗೆ ಮೋದಿ ಕರೆ, ಹಾಗೆಂದರೇನು..?

ಇದೇ ವೇಳೆ ದೇಶದಲ್ಲಿ ಐವರನ್ನು ಬಲಿ ತೆಗೆದುಕೊಂಡಿರುವ ಮಾರಕ ಕೊರೋನಾ ವೈರಾಣು ಸೋಂಕು ನಿಯಂತ್ರಣಕ್ಕೆ ಲೋಕಸಭಾ ಸದಸ್ಯರು ಅಗತ್ಯ ಶ್ರಮ ವಹಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭರವಸೆ ವ್ಯಕ್ತಪಡಿಸಿದರು.


ಪ್ರಧಾನಿ ಮೋದಿಯವರ ಉದ್ದೇಶಿತ ಜನತಾ ಕರ್ಫ್ಯೂಗೆ ಲೋಕಸಭೆ ಸಹಕರಿಸಿದ್ದು, ಎಲ್ಲಾ ವಿಪಕ್ಷ ನಾಯಕರೂ ಸಹ ಜನತಾ ಕರ್ಫ್ಯೂನಲ್ಲಿ ಭಾಗವಹಿಸುವ ಭರವಸೆ ನೀಡಿದ್ದಾರೆ ಎಂದು ಓಂ ಬಿರ್ಲಾ ಸದನಕ್ಕೆ ಮಾಹಿತಿ ನೀಡಿದರು.

'ಕೊರೊನಾ ವೈರಸ್‌ಗೆ ಮದ್ದಿಲ್ಲ.. ಸಂಕಲ್ಪ, ಸಂಯಮವೇ ನಿಮ್ಮ ಅಸ್ತ್ರವಾಗಲಿ': ಪ್ರಧಾನಿ ಮೋದಿ ಕರೆ

ಸಂಕಷ್ಟದ ಸಮಯದಲ್ಲಿ ಒಗ್ಗಟ್ಟು ಪ್ರದರ್ಶಿಸುವುದೇ ಭಾರತದ ಪ್ರಜಾಪ್ರಭುತ್ವ ವಿಶೇಷ ಗುಣ. ಜಗತ್ತನ್ನು ವ್ಯಾಪಿಸುತ್ತಿರುವ ಸೋಂಕನ್ನು ನಾವು ಧೈರ್ಯದಿಂದ ಎದುರಿಸಲೇಬೇಕು ಎಂದು ಓಂಬಿರ್ಲಾ ಈ ವೇಳೆ ಘೋಷಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ