ಹೊಸದಿಲ್ಲಿ: ದೇಶದ ವಿವಿಧ ಭಾಗದಲ್ಲಿ ನಡೆದ ಚುನಾವಣೆಗಳಲ್ಲಿ ಸಾಲು ಸಾಲು ಸೋಲು ಕಂಡಿದ್ದರೂ, ವಿಪಕ್ಷಗಳ ಅಹಂಕಾರ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ ಎಂದು ಪ್ರಧಾನಿ ಮೋದಿ ಚಾಟಿ ಬೀಸಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ಮೋದಿ, ಕೆಲವರು 2014ರಲ್ಲೇ ಉಳಿದುಕೊಂಡು ಬಿಟ್ಟಿದ್ದಾರೆ ಎಂದು ವಿಪಕ್ಷಗಳತ್ತ ವ್ಯಂಗ್ಯದ ಬಾಣ ಬಿಟ್ಟರು. ಭಾರತವೂ ಸೇರಿದಂತೆ ಇಡೀ ವಿಶ್ವ ಕೊರೊನಾ ಮಹಾಮಾರಿಯ ಸಂಕಟವನ್ನು ಎದುರಿಸುತ್ತಿದೆ. ಕೊರೊನಾ ಕಾಲದಲ್ಲಿ ಭಾರತ ತೋರಿದ ಒಗ್ಗಟ್ಟಿನ ಪ್ರದರ್ಶನ ಕಂಡು ಇಡೀ ವಿಶ್ವ ಬೆರಗಾಗಿದೆ. ಆದರೆ ನಮ್ಮಲ್ಲೇ ಕೆಲವರು ಈ ಹೋರಾಟವನ್ನು ದುರ್ಬಲಗೊಳಿಸಲು ಹುನ್ನಾರ ನಡೆಸಿದ್ದು ಮಾತ್ರ ವಿಪರ್ಯಾಸ ಎಂದು ಪ್ರಧಾನಿ ಮೋದಿ ವಿಪಕ್ಷಗಳ ಮೇಲೆ ಪರೋಕ್ಷ ವಾಗ್ದಾಳಿ ನಡೆಸಿದರು.
ಈ ವೇಳೆ ಎದ್ದು ನಿಂತ ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ, ಪ್ರಧಾನಿ ಮೋದಿ ದೇಶಕ್ಕೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದರು. ಇದರಿಂದ ಕೆರಳಿದ ಪ್ರಧಾನಿ ಮೋದಿ, ಕೊರೊನಾ ಕಾಲದಲ್ಲಿ ದೇಶವನ್ನು ತಪ್ಪು ದಾರಿಗೆ ಎಳೆಯಲು ಕಾಂಗ್ರೆಸ್ ಪ್ರಯತ್ನಿಸಿದ್ದು ಎಲ್ಲರಿಗೂ ಗೊತ್ತಿದೆ ಎಂದು ನೇರವಾಗಿ ಆರೋಪ ಮಾಡಿದರು.
ಇದರಿಂದ ಸದನದಲ್ಲಿ ತೀವ್ರ ಗದ್ದಲವೇರ್ಪಟ್ಟಿತು. ಕಾಂಗ್ರೆಸ್ ಸದಸ್ಯರು ಪ್ರಧಾನಿ ಮೋದಿ ಅವರ ಹೇಳಿಕೆಯಿಂದ ಸಿಡಿದೆದ್ದರು. ಪ್ರಧಾನಿ ಮೋದಿ ಕೂಡ ಏರುಧ್ವನಿಯಲ್ಲಿ ಕಾಂಗ್ರೆಸ್ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು. ನೀವು ಕೊರೊನಾ ಕಾಲದಲ್ಲಿ ಮಾಡಿದ ಪಾಪಗಳು ಸುಮ್ಮನೆ ಬಿಡುವುದುಲ್ಲ ಎಂದು ಗುಡುಗಿದರು.
ಕೊರೊನಾ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರಲಿದೆ ಎಂದು ಕೆಲವರು ಕಾತರದಿಂದ ಕಾಯುತ್ತಿದ್ದರು. ಆದರೆ ಅವರ ಕಾಯುವಿಕೆ ಇನ್ನೂ ಮುಂದುವರೆದಿದೆ. ಕೊರೊನಾ ನಮ್ಮ ಸರ್ಕಾರದ ಮೇಲಿನ ಜನರ ವಿಶ್ವಾಸವನ್ನು ದ್ವಿಗುಣಗೊಳಿಸಿತು ಪ್ರಧಾನಿ ಮೋದಿ ಮಾರ್ಮಿಕವಾಗಿ ಹೇಳಿದರು. ನೀವು ಇನ್ನೂ 100 ವರ್ಷಗಳ ಕಾಲ ವಿಪಕ್ಷದಲ್ಲೇ ಇರಬೇಕೆಂದು ನಿರ್ಧಾರ ಮಾಡಿದ್ದೀರಿ. ಇದಕ್ಕೆ ನನ್ನ ಸಹಮತಿ ಕೂಡ ಇದೆ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದರು.
ಮುಂದುವರೆದು ಮಾತನಾಡಿದ ಪ್ರಧಾನಿ ಮೋದಿ, ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ನಾವು ಅಮೃತ ಕಾಲದಲ್ಲಿದ್ದೇವೆ. ಸ್ವಾತಂತ್ರ್ಯದ 100ನೇ ವರ್ಷದ ಸಂಭ್ರಮಾಚರಣೆ ವೇಳೆ ನಾವು ಭಾರತವನ್ನು ಸದೃಢಗೊಳಿಸುವ ಹಾಗೂ ಮತ್ತಷ್ಟು
ಶಕ್ತಿಶಾಲಿಗೊಳಿಸುವ ಕಾರ್ಯ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.
ಭಾರತ ಆತ್ಮನಿರ್ಭರತೆಯತ್ತ ದೃಢ ಹೆಜ್ಜೆ ಇಟ್ಟಿದೆ. ನಾವು ಹೆಜ್ಜೆಯನ್ನು ಹಿಂದೆ ಇಡುವ ಪ್ರಶ್ನೆಯೇ ಇಲ್ಲ. ನಾವು ಒಟ್ಟಾಗಿ ದೇಶವನ್ನು ಕಟ್ಟುತ್ತೇವೆ. ಇದಕ್ಕೆ ನೀವೂ ಕೈಜೋಡಿಸುತ್ತೀರಿ ಎಂದು ನಾನು ನಂಬಿದ್ದೇನೆ ಎಂದು ಪ್ರಧಾನಿ ಮೋದಿ ವಿಪಕ್ಷಗಳತ್ತ ಬೊಟ್ಟು ಮಾಡಿ ತೋರಿದರು.
ಈ ವೇಳೆ ಎದ್ದು ನಿಂತ ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ, ಪ್ರಧಾನಿ ಮೋದಿ ದೇಶಕ್ಕೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದರು. ಇದರಿಂದ ಕೆರಳಿದ ಪ್ರಧಾನಿ ಮೋದಿ, ಕೊರೊನಾ ಕಾಲದಲ್ಲಿ ದೇಶವನ್ನು ತಪ್ಪು ದಾರಿಗೆ ಎಳೆಯಲು ಕಾಂಗ್ರೆಸ್ ಪ್ರಯತ್ನಿಸಿದ್ದು ಎಲ್ಲರಿಗೂ ಗೊತ್ತಿದೆ ಎಂದು ನೇರವಾಗಿ ಆರೋಪ ಮಾಡಿದರು.
ಇದರಿಂದ ಸದನದಲ್ಲಿ ತೀವ್ರ ಗದ್ದಲವೇರ್ಪಟ್ಟಿತು. ಕಾಂಗ್ರೆಸ್ ಸದಸ್ಯರು ಪ್ರಧಾನಿ ಮೋದಿ ಅವರ ಹೇಳಿಕೆಯಿಂದ ಸಿಡಿದೆದ್ದರು. ಪ್ರಧಾನಿ ಮೋದಿ ಕೂಡ ಏರುಧ್ವನಿಯಲ್ಲಿ ಕಾಂಗ್ರೆಸ್ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು. ನೀವು ಕೊರೊನಾ ಕಾಲದಲ್ಲಿ ಮಾಡಿದ ಪಾಪಗಳು ಸುಮ್ಮನೆ ಬಿಡುವುದುಲ್ಲ ಎಂದು ಗುಡುಗಿದರು.
ಕೊರೊನಾ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರಲಿದೆ ಎಂದು ಕೆಲವರು ಕಾತರದಿಂದ ಕಾಯುತ್ತಿದ್ದರು. ಆದರೆ ಅವರ ಕಾಯುವಿಕೆ ಇನ್ನೂ ಮುಂದುವರೆದಿದೆ. ಕೊರೊನಾ ನಮ್ಮ ಸರ್ಕಾರದ ಮೇಲಿನ ಜನರ ವಿಶ್ವಾಸವನ್ನು ದ್ವಿಗುಣಗೊಳಿಸಿತು ಪ್ರಧಾನಿ ಮೋದಿ ಮಾರ್ಮಿಕವಾಗಿ ಹೇಳಿದರು. ನೀವು ಇನ್ನೂ 100 ವರ್ಷಗಳ ಕಾಲ ವಿಪಕ್ಷದಲ್ಲೇ ಇರಬೇಕೆಂದು ನಿರ್ಧಾರ ಮಾಡಿದ್ದೀರಿ. ಇದಕ್ಕೆ ನನ್ನ ಸಹಮತಿ ಕೂಡ ಇದೆ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದರು.
ಮುಂದುವರೆದು ಮಾತನಾಡಿದ ಪ್ರಧಾನಿ ಮೋದಿ, ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ನಾವು ಅಮೃತ ಕಾಲದಲ್ಲಿದ್ದೇವೆ. ಸ್ವಾತಂತ್ರ್ಯದ 100ನೇ ವರ್ಷದ ಸಂಭ್ರಮಾಚರಣೆ ವೇಳೆ ನಾವು ಭಾರತವನ್ನು ಸದೃಢಗೊಳಿಸುವ ಹಾಗೂ ಮತ್ತಷ್ಟು
ಶಕ್ತಿಶಾಲಿಗೊಳಿಸುವ ಕಾರ್ಯ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.
ಭಾರತ ಆತ್ಮನಿರ್ಭರತೆಯತ್ತ ದೃಢ ಹೆಜ್ಜೆ ಇಟ್ಟಿದೆ. ನಾವು ಹೆಜ್ಜೆಯನ್ನು ಹಿಂದೆ ಇಡುವ ಪ್ರಶ್ನೆಯೇ ಇಲ್ಲ. ನಾವು ಒಟ್ಟಾಗಿ ದೇಶವನ್ನು ಕಟ್ಟುತ್ತೇವೆ. ಇದಕ್ಕೆ ನೀವೂ ಕೈಜೋಡಿಸುತ್ತೀರಿ ಎಂದು ನಾನು ನಂಬಿದ್ದೇನೆ ಎಂದು ಪ್ರಧಾನಿ ಮೋದಿ ವಿಪಕ್ಷಗಳತ್ತ ಬೊಟ್ಟು ಮಾಡಿ ತೋರಿದರು.